ನಿರ್ಜನ ರಸ್ತೆಯಲ್ಲಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಮಣಿಪಾಲದಲ್ಲಿ ಅರೆಸ್ಟ್
ಉಡುಪಿ, ಆಗಸ್ಟ್ 14: ನಿರ್ಜನ ರಸ್ತೆಯಲ್ಲಿ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ತಂಡವೊಂದನ್ನು ಮಣಿಪಾಲ ಪೊಲೀಸರು ಭೇಧಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಓರ್ವ ಅಪ್ರಾಪ್ತ ಸೇರಿದಂತೆ ಐವರು ಸೇರಿ ದರೋಡೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅತೀಶ್ ಡಿಸಿಲ್ವಾ (22), ಪ್ರೇಮನಾಥ್ (19), ಯೋಗೀಶ್ (19), ಸಂದೇಶ್ (18) ಮತ್ತು ಓರ್ವ ಅಪ್ರಾಪ್ತ ಬಂಧಿತರು.
ಆರೋಪಿಗಳು ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ಸಗ್ರಿ ಶಾಲೆಗೆ ಹೋಗುವ ರಸ್ತೆಯಲ್ಲಿ ರಾತ್ರಿ ವೇಳೆ ಮೂಡುಸಗ್ರಿ ನಿವಾಸಿ ನರಸಿಂಹ ನಾಯಕ್ ಅವರ ಮೇಲೆ ಹಲ್ಲೆ ಮಾಡಿ 24 ಗ್ರಾಂ ತೂಕದ ಸುಮಾರು 70,000 ರೂಪಾಯಿ ಮೌಲ್ಯದ ಚಿನ್ನದ ಸರ, 29,000 ರೂಪಾಯಿ ಮೌಲ್ಯದ ಮೊಬೈಲ್ ಹಾಗೂ ಎ.ಟಿ.ಎಂ ಕಾರ್ಡ್, ಆಧಾರ್ ಕಾರ್ಡ್, ವೋಟರ್ ಐಡಿ ಸಹಿತ ಸುಮಾರು 31,000 ರೂಪಾಯಿ ನಗದು ಇದ್ದ ಪರ್ಸನ್ನು ಸುಲಿಗೆ ಮಾಡಿದ್ದರು.

ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಕೆ.ಟಿ.ಎಂ ಬೈಕ್, ಡಿಯೋ ಸ್ಕೂಟರ್ ಹಾಗೂ ವಿವೋ ಮೊಬೈಲ್ ವಶಪಡಿಸಿಕೊಂಡು, ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
More From
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications