Get Updates
Get notified of breaking news, exclusive insights, and must-see stories!

ಬೆಂಗಳೂರಿನ ವಿವಾಹಿತ ಪ್ರೇಮಿಗಳಿಬ್ಬರು ಕುಂದಾಪುರದಲ್ಲಿ ಆತ್ಮಹತ್ಯೆಗೆ ಯತ್ನ

ಉಡುಪಿ, ರಾಮನಗರ 15: ಬೆಂಗಳೂರು ಗ್ರಾಮಾಂತರ ನಿವಾಸಿಗಳಿಬ್ಬರು ಕುಂದಾಪುರದ ಕೋಡಿ ಸಮುದ್ರ ಕಿನಾರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರಿನ ಹನುಮಂತನಗರದ ವಿವಾಹಿತ ಎರಡು ಮಕ್ಕಳ ತಂದೆಯಾಗಿರುವ ರಮೇಶ್ (45) ಹಾಗೂ ವಿವಾಹಿತೆ ಹಾಗೂ ಮಕ್ಕಳಿರುವ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದವರು. ಇಬ್ಬರು ವಿವಾಹಿತರಾಗಿದ್ದರೂ ಕೂಡ ಪರಸ್ಪರ ಪ್ರೇಮಿಸುತ್ತಿದ್ದರು ಎನ್ನಲಾಗುತ್ತಿದ್ದು, ಮಹಿಳೆಯ ಪತಿಯ ಸ್ನೇಹಿತ ರಮೇಶ್ ಎಂದು ಹೇಳಲಾಗುತ್ತಿದೆ.

ಇನ್ನೋವಾ ಕಾರಿನಲ್ಲಿ ಕೋಡಿಗೆ ಬಂದಿದ್ದ ಇವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ನರಳಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು, ಆಂಬುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Married Lovers Attempt Suicide In Kundapur

ಸದ್ಯ ಕುಂದಾಪುರ ಆಸ್ಪತ್ರೆಯಲ್ಲಿ ಪಿಜಿಶಿಯನ್ ಡಾ. ನಾಗೇಶ್ ಅವರು ಇಬ್ಬರಿಗೂ ಚಿಕಿತ್ಸೆ ನೀಡುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ಸೇವಿಸಿದ ವಿಷ ಅಥವಾ ಮಾತ್ರೆ ಯಾವುದು ಎಂದು ಇನ್ನಷ್ಟೇ ತಿಳಿದುಬರಬೇಕಿದ್ದು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಸಂಜೆ ವೇಳೆಗೆ ಇಬ್ಬರ ಕುಟುಂಬಸ್ಥರು ಆಗಮಿಸುವ ಸಾಧ್ಯತೆಯಿದೆ.

ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಯಾವ ಕಾರಣಕ್ಕೆ ಇಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬುದು ತನಿಖೆ ಮಾಡಿದ ನಂತರ ತಿಳಿಸಲಾಗುವುದು ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+