ಬೆಂಗಳೂರಿನ ವಿವಾಹಿತ ಪ್ರೇಮಿಗಳಿಬ್ಬರು ಕುಂದಾಪುರದಲ್ಲಿ ಆತ್ಮಹತ್ಯೆಗೆ ಯತ್ನ
ಉಡುಪಿ, ರಾಮನಗರ 15: ಬೆಂಗಳೂರು ಗ್ರಾಮಾಂತರ ನಿವಾಸಿಗಳಿಬ್ಬರು ಕುಂದಾಪುರದ ಕೋಡಿ ಸಮುದ್ರ ಕಿನಾರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ.
ಬೆಂಗಳೂರಿನ ಹನುಮಂತನಗರದ ವಿವಾಹಿತ ಎರಡು ಮಕ್ಕಳ ತಂದೆಯಾಗಿರುವ ರಮೇಶ್ (45) ಹಾಗೂ ವಿವಾಹಿತೆ ಹಾಗೂ ಮಕ್ಕಳಿರುವ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದವರು. ಇಬ್ಬರು ವಿವಾಹಿತರಾಗಿದ್ದರೂ ಕೂಡ ಪರಸ್ಪರ ಪ್ರೇಮಿಸುತ್ತಿದ್ದರು ಎನ್ನಲಾಗುತ್ತಿದ್ದು, ಮಹಿಳೆಯ ಪತಿಯ ಸ್ನೇಹಿತ ರಮೇಶ್ ಎಂದು ಹೇಳಲಾಗುತ್ತಿದೆ.
ಇನ್ನೋವಾ ಕಾರಿನಲ್ಲಿ ಕೋಡಿಗೆ ಬಂದಿದ್ದ ಇವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ನರಳಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು, ಆಂಬುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಕುಂದಾಪುರ ಆಸ್ಪತ್ರೆಯಲ್ಲಿ ಪಿಜಿಶಿಯನ್ ಡಾ. ನಾಗೇಶ್ ಅವರು ಇಬ್ಬರಿಗೂ ಚಿಕಿತ್ಸೆ ನೀಡುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ಸೇವಿಸಿದ ವಿಷ ಅಥವಾ ಮಾತ್ರೆ ಯಾವುದು ಎಂದು ಇನ್ನಷ್ಟೇ ತಿಳಿದುಬರಬೇಕಿದ್ದು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಸಂಜೆ ವೇಳೆಗೆ ಇಬ್ಬರ ಕುಟುಂಬಸ್ಥರು ಆಗಮಿಸುವ ಸಾಧ್ಯತೆಯಿದೆ.
ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಯಾವ ಕಾರಣಕ್ಕೆ ಇಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬುದು ತನಿಖೆ ಮಾಡಿದ ನಂತರ ತಿಳಿಸಲಾಗುವುದು ಎಂದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications