ಫೆ.24ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮಾತಾ ಅಮೃತಾನಂದಮಯಿ ಭೇಟಿ
ಉಡುಪಿ, ಜನವರಿ. 17 : ಅಮ್ಮ ಎಂದು ಖ್ಯಾತಿ ಪಡೆದಿರುವ ಮಾತಾ ಅಮೃತಾನಂದಮಯಿ ಅವರು ಇದೇ ಮೊದಲ ಬಾರಿಗೆ ಫೆಬ್ರವರಿ 24ರಂದು ಉಡುಪಿಗೆ ಆಗಮಿಸಲಿದ್ದಾರೆ.
ಅಮ್ಮ ಅವರು ಫೆಬ್ರವರಿ 24ರಂದು ಉಡುಪಿಗೆ ಆಗಮಿಸಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವರು. ಫೆಬ್ರವರಿ 25ರಂದು ಎಂಜಿಎಂ ಮೈದಾನದಲ್ಲಿ ಸಾರ್ವಜನಿಕ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಅದಕ್ಕೂ ಮೊದಲು ಫೆಬ್ರವರಿ 23ರಂದು ಮಂಗಳೂರಿನಲ್ಲಿರುವ ಬೋಳೂರಿನ ಬ್ರಹ್ಮಸ್ಥಾನಕ್ಕೆ ಆಗಮಿಸಿ ಸಾರ್ವಜನಿಕ ದರ್ಶನ ನೀಡುವರು.

ಅಂತಾರಾಷ್ಟ್ರೀಯ ಖ್ಯಾತಿಗೆ ಪಾತ್ರರಾದ ಅಮೃತಾನಂದಮಯಿ ಅಧ್ಯಾತ್ಮ ಜತೆ ಸಾಮಾಜಿಕ ಸೇವಾ ಚಟುವಟಿಕೆಗಳಿಂದ ವಿಶಿಷ್ಟ ಗೌರವಕ್ಕೆ ಪಾತ್ರರಾಗಿದ್ದಾರೆ.
ಮಂಗಳೂರಿನ ಶ್ರೀ ಮಂಗಳಾಮೃತ ಚೈತನ್ಯ ಸ್ವಾಮಿ ಅಮ್ಮನವರ ನೇತೃತ್ವದಲ್ಲಿ ಮಂಗಳೂರು ಸಮಿತಿ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಜನೆ, ಕೀರ್ತನೆ, ಧ್ಯಾನ, ಅಮ್ಮದಿವ್ಯಾಲಿಂಗನ ನಡೆಯಲಿದೆ ಎಂದು ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಸದಸ್ಯರು ತಿಳಿಸಿದ್ದಾರೆ.
ಮಾತಾ ಅಮೃತಾನಂದಮಯಿ ಅವರ ಸತ್ಸಂಗವು ಭಜನೆ, ಸಂಕೀರ್ತನೆ, ಧ್ಯಾನ ಸಹಿತವಾಗಿದ್ದು ಭಕ್ತರಲ್ಲಿ ಅಧ್ಯಾತ್ಮತೆಯನ್ನು ಗಾಢಗೊಳಿಸಿದೆ. ಸದ್ಗುರುವಾಗಿ ಅವರು ನೀಡುವ ಮಾರ್ಗದರ್ಶನ ಶೈಲಿಯೇ ಅನನ್ಯ.
ಭಾರತೀಯ ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಆದರ್ಶಯುತ. ಕಡುಬಡವರು, ಶೋಷಿತರು, ಅನಾಥರಿಗೆ ಆಶಾಕಿರಣವಾಗಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications