Kundapura: ತಾಯಿಯ ಶವದ ಪಕ್ಕ ಮೂರು ದಿನ ಕಳೆದ ಮಗಳು ನರಳಿ..ನರಳಿ ಸಾವು
ಉಡುಪಿ, ಮೇ 20: ತಾಯಿಯ ಸಾವಿನ ಅರಿವಿಲ್ಲದೆ ಶವದ ಪಕ್ಕದಲ್ಲಿ ನಾಲ್ಕು ದಿನ ಕಳೆದ ಬುದ್ಧಿಮಾಂದ್ಯ ಯುವತಿಯೋರ್ವಳನ್ನು ಉಡುಪಿಯ ಕುಂದಾಪುರದಲ್ಲಿ ರಕ್ಷಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಆ ಯುವತಿಯೂ ಕೊನೆಯುಸಿರೆಳೆದ ದಾರುಣ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಆ ತಾಯಿ ಮತ್ತು ಮಗಳು ಜೊತೆಯಾಗಿ ವಾಸಿಸುತ್ತಿದ್ದರು. ಅದೇನಾಯ್ತು ಗೊತ್ತಿಲ್ಲ, ಮೊದಲೇ ಅನಾರೋಗ್ಯ ಪೀಡಿತೆಯಾಗಿದ್ದ 61 ವರ್ಷ ವಯಸ್ಸಿನ ತಾಯಿ ಜಯಂತಿ ಶೆಟ್ಟಿ ಯಾರ ಅರಿವಿಗೂ ಬಾರದಂತೆ ಮನೆಯೊಳಗೆ ಶವವಾಗಿದ್ದರು. ದುರಾದೃಷ್ಟವಶಾತ್ ಅವರ ಸಾವು ಆಸುಪಾಸಿನ ಯಾರ ಗಮನಕ್ಕೂ ಬಂದಿಲ್ಲ.

ಬುದ್ಧಿ ಮಾಂದ್ಯ ಮಗಳು 32 ವರ್ಷ ಪ್ರಾಯದ ಪ್ರಗತಿ ತಾಯಿಯ ಶವದ ಪಕ್ಕದಲ್ಲಿ ಮೂರು ದಿನಕ್ಕೂ ಹೆಚ್ಚು ಕಾಲ ಕಳೆಯುವಂತಾಗಿತ್ತು. ಅನ್ನ ಆಹಾರವಿಲ್ಲದೆ ನಿಸ್ತೇಜವಾಗಿ ಕೊಳೆತ ಶವದ ಪಕ್ಕದಲ್ಲಿ ಮಲಗಿದ್ದ ಪ್ರಗತಿಯನ್ನು ಪೊಲೀಸರ ನೆರವಿನೊಂದಿಗೆ ಕೊನೆಗೂ ರಕ್ಷಿಸಲಾಗಿತ್ತು. ದುರಾದೃಷ್ಟವಶಾತ್ ಇದೀಗ ಮಗಳು ಪ್ರಗತಿ ಕೂಡ ಆಸ್ಪತ್ರೆಯಲ್ಲಿ ಕೊನೆಯುಸಿರುಳೆದಿದ್ದಾಳೆ.
ಈ ಘಟನೆ ನಡೆದಿರುವುದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದ ದಾಸರಹಾಡಿಯಲ್ಲಿ. ಜಯಂತಿಯವರ ಪತಿ ಬ್ಯಾಂಕ್ ಅಧಿಕಾರಿಯಾಗಿದ್ದು ಈ ಹಿಂದೆ ಅವರು ಮೃತಪಟ್ಟಿದ್ದರು. ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿಯವರು, ಮೇ 13ರಂದು ಕೋಟೇಶ್ವರ ದೇವಸ್ಥಾನಕ್ಕೆ ಹೋಗಲು ಇದೆ ಎಂದು ರಿಕ್ಷಾ ಚಾಲಕನಿಗೆ ತಿಳಿಸಿದರು. ಈ ನಡುವೆ ಅವರು ಕಾಲು ಜಾರಿ ಬಿದ್ದು ಮನೆಯಲ್ಲಿ ಸತ್ತಿದ್ದರು.

ಅಕ್ಕ ಪಕ್ಕದ ಮನೆಯವರು ಮೂರು ದಿನದಿಂದ ಯಾವುದೇ ಚಟುವಟಿಕೆ ಇಲ್ಲದೆ ಇರುವುದನ್ನು ಗಮನಿಸಿ ಪೊಲೀಸರಿಗೆ ತಿಳಿಸಿ ಮನೆ ಒಳಗೆ ನೋಡಿದಾಗ, ತಾಯಿಯ ಕೊಳೆತ ಶವದ ಪಕ್ಕದಲ್ಲಿ ಬುದ್ಧಿಮಾಂದ್ಯ ಯುವತಿ ಪ್ರಗತಿ ಅನ್ನ ಆಹಾರವಿಲ್ಲದೆ ಬಳಲಿ ಮಲಗಿದ್ದರು. ಪೊಲೀಸರ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪ್ರಗತಿಯ ಜೀವ ಉಳಿಯಲಿಲ್ಲ. ಈ ಮೂಲಕ ತಾಯಿ ಮಗಳು ಮೂರೇ ದಿನದ ಅಂತರದಲ್ಲಿ ಅಸುನೀಗಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications