ಉಡುಪಿ: ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಕಿಸೆಯಲ್ಲಿದ್ದ ಮೊಬೈಲ್ ಬ್ಲಾಸ್ಟ್
ಉಡುಪಿ, ಜೂನ್ 14: ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಪ್ಯಾಂಟ್ ಕಿಸೆಯಲ್ಲಿದ್ದ ಮೊಬೈಲ್ ಬ್ಲಾಸ್ಟ್ ಆದ ಘಟನೆ ಉಡುಪಿಯ ಇಂದ್ರಾಳಿ ರೈಲ್ವೇ ಸ್ಟೇಷನ್ ಸಮೀಪ ಮಂಗಳವಾರ ನಡೆದಿದೆ.
ಮಂಜುನಾಥ್ ಎಂಬವವರು ಬಳಸುತ್ತಿದ್ದ ಮೈಕ್ರೋಮ್ಯಾಕ್ಸ್ ಕಂಪನಿಯ ಮೊಬೈಲ್ ಬ್ಲಾಸ್ಟ್ ಆಗಿದೆ. ಇಂದ್ರಾಳಿ ರೈಲ್ವೇ ಸ್ಟೇಷನ್ ರೋಡ್ನಲ್ಲಿ ಬೈಕಿನಲ್ಲಿ ಮಂಗಳವಾರ ಸಂಜೆ ಹೋಗುತ್ತಿದ್ದ ವೇಳೆ ಮೊಬೈಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬೈಕ್ ನಿಲ್ಲಿಸಿದ ಕಟಪಾಡಿಯ ಮಂಜುನಾಥ್ ಮೊಬೈಲನ್ನು ರಸ್ತೆಗೆ ಎಸೆದಿದ್ದಾರೆ.

ರಸ್ತೆಗೆ ಬೀಳುತ್ತಿದ್ದಂತೆ ಮೊಬೈಲ್ ಬ್ಲಾಸ್ಟ್ ಆಗಿದೆ. ಬ್ಯಾಟರಿ ಸ್ಪೋಟದ ತೀವ್ರತೆ ಎಷ್ಟಿತ್ತು ಎಂದರೆ ರಸ್ತೆಯ ಡಾಂಬರು ಕೂಡಾ ಸುಟ್ಟುಹೋಗಿದೆ. ಮೊಬೈಲನ್ನು ರಸ್ತೆಗೆ ಎಸೆದಿದ್ದರಿಂದ ಅವಘಡ ತಪ್ಪಿದೆ.
"ನಾನು ಪತ್ನಿ ಜೊತೆ ರೈಲು ನಿಲ್ದಾಣಕ್ಕೆ ಟಿಕೆಟ್ ಬುಕ್ ಮಾಡಲು ಕಟಪಾಡಿಯಿಂದ ಉಡುಪಿಗೆ ಬಂದಿದ್ದೆ. ಮೊಬೈಲ್ ಬ್ಯಾಟರಿ ಇಡೀ ದಿನ ಚಾರ್ಜ್ ಇರುತ್ತಿತ್ತು. ಈವರೆಗೆ ಯಾವುದೇ ತೊಂದರೆ ಕಾಣಿಸಿಕೊಂಡಿರಲಿಲ್ಲ. ಆದ್ರೆ ಬೈಕಿನಲ್ಲಿ ಬರುತ್ತಿದ್ದಾಗ ಕಿಸೆ ಬಿಸಿ ಬಿಸಿಯಾಗತೊಡಗಿತು. ಮೊಬೈಲ್ ಕೈಯ್ಯಲ್ಲಿ ತೆಗೆದಾಗ ಕೆಂಡ ಹಿಡಿದ ಹಾಗೆ ಆಗಿದೆ. ಕೂಡಲೇ ಮೊಬೈಲ್ ಹೊರಗೆ ತೆಗೆದು ಬಿಸಾಡಿದೆ," ಎನ್ನುತ್ತಾರೆ ಮಂಜುನಾಥ್ .

ಹೈವೇ ಮಧ್ಯೆಯೇ ಮೊಬೈಲ್ ಬ್ಲಾಸ್ಟ್ ಆಗಿದ್ದರಿಂದ ಇಂದ್ರಾಳಿ ಜಂಕ್ಷನ್ನಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಕೂಡಾ ಆಯ್ತ. ಸ್ಥಳದಲ್ಲಿದ್ದವರು ಏನು ನಡೆಯುತ್ತಿದೆ ಎಂದು ಕುತೂಹಲಕ್ಕಾಗಿ ಗುಂಪು ಸೇರಿದ್ದರು. ಬಸ್ನಿಂದ ಇಳಿದೂ ಜನ ಗುಂಪು ಸೇರಿದರು. ನಂತರ ಉಡುಪಿ ನಗರದ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಮಂಜುನಾಥ್ ಆರು ತಿಂಗಳ ಹಿಂದೆ 10 ಸಾವಿರ ರೂಪಾಯಿ ಕೊಟ್ಟು ಈ ಮೊಬೈಲನ್ನು ಖರೀದಿ ಮಾಡಿದ್ದರು. ಆದರೆ ವಾರೆಂಟಿ ಮುಗಿಯುವ ಮೊದಲೇ ಮೊಬೈಲ್ ಬ್ಲಾಸ್ಟ್ ಆಗಿದ್ದು ಮಂಜುನಾಥ್ ಅವರಿಗೆ ಬೇಸರ ತಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications