ಜಲಾವೃತ ಪ್ರದೇಶಗಳಿಗೆ ಭೇಟಿ ಕೊಟ್ಟು ಜನರಿಗೆ ಧೈರ್ಯ ತುಂಬಿದ ಜಯಮಾಲಾ
ಉಡುಪಿ, ಆಗಸ್ಟ್.15: ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಅವರು ಇಂದು ಬುಧವಾರ ಬಹ್ಮಾವರದ ಉಪ್ಪೂರು ವ್ಯಾಪ್ತಿಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಉಪ್ಪೂರು ವ್ಯಾಪ್ತಿಯ ಕೆ.ಜಿ.ರೋಡ್, ಕುದ್ರುಬೆಟ್ಟು , ಹೆರೆಬೆಟ್ಟು ಪ್ರದೇಶಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. "ಜಲಾವೃತ ಪ್ರದೇಶದ ನಿವಾಸಿಗಳಿಗೆ ಎಲ್ಲಾ ರೀತಿಯ ಸಹಾಯ ಸಹಾಕಾರವನ್ನು ಜಿಲ್ಲಾಡಳಿತ ಒದಗಿಸಲಿದೆ. ಜನರು ಧೈರ್ಯದಿಂದ ಇರಬೇಕು" ಎಂದು ಸಚಿವೆ ಈ ಸಂದರ್ಭದಲ್ಲಿ ಸ್ಥಳೀಯರಿಗೆ ಮನವಿ ಮಾಡಿದರು.
ಅವಶ್ಯಕ ಸಂದರ್ಭದಲ್ಲಿ ಜನತೆ ಸ್ಥಳೀಯಾಡಳಿತವನ್ನು ಸಂಪರ್ಕಿಸಿ. ಜಿಲ್ಲಾಡಳಿತ ಕೂಡ ನೆರೆ ಪೀಡಿತ ಪ್ರದೇಶಗಳ ಬಗ್ಗೆ ನಿಗಾ ಇರಿಸಿದೆ ಎಂದು ಸಚಿವೆ ಸ್ಥಳೀಯರಿಗೆ ಧೈರ್ಯತುಂಬಿದರು.

ಇದೇ ಸಂದರ್ಭದಲ್ಲಿ ಜಲಾವೃತಗೊಂಡಿರುವ ಉಪ್ಪೂರು ಹೆರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಜಯಮಾಲಾ ಅವರು ಅಲ್ಲಿನ ಪರಿಸ್ಥಿತಿ ಅವಲೋಕನ ನಡೆಸಿದರು. ಶಾಲೆಯ ಮಕ್ಕಳ ಸುರಕ್ಷತೆ ಬಗ್ಗೆ ವಿಶೇಷ ನಿಗಾ ವಹಿಸುವಂತೆ ತಹಶೀಲ್ದಾರಿಗೆ ನಿರ್ದೇಶನ ನೀಡಿದರು.
ನೆರೆಪೀಡಿತ ಎಲ್ಲಾ ಪ್ರದೇಶದ ಜನರಿಗೂ ಆಹಾರ ಪೂರೈಕೆಗೆ ತೊಂದರೆಯಾಗದಂತೆ ನಿಗಾವಹಿಸುವಂತೆ ಸಚಿವರು, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವಶ್ಯಕ ಸಂದರ್ಭದಲ್ಲಿ ನೆರೆಪೀಡಿತ ಪ್ರದೇಶದ ಜನರನ್ನು ಸ್ಥಳಾಂತರಿಸಲು ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ನೆರೆಪೀಡಿತ ಪ್ರದೇಶದಲ್ಲಿ ಪರಿಶೀಲನೆ ನಡೆಸುತ್ತಿರುವ ಸಂದರ್ಭದಲ್ಲಿ ಸಂಪ ಪೂಜಾರಿ ಎಂಬುವವರ ಮನೆಗೆ ಶೌಚಾಲಯ ಇಲ್ಲದಿರುವುದು ಸಚಿವರ ಗಮನಕ್ಕೆ ಬಂತು. ಈ ಬಗ್ಗೆ ಸಂಪ ಪೂಜಾರಿ ಹಾಗೂ ಅವರ ಪುತ್ರನ ಬಳಿ ನೋವು ಆಲಿಸಿದ ಸಚಿವೆ ನೆರೆ ನೀರು ಇಳಿದ ತಕ್ಷಣ ಇವರಿಗೆ ಸರಕಾರಿ ಯೋಜನೆಯ ಮೂಲಕ ಶೌಚಾಲಯ ನಿರ್ಮಿಸಿಕೊಡಬೇಕೆಂದು ಸ್ಥಳದಲ್ಲಿಯೇ ತಹಾಶಿಲ್ದಾರ್ ಅವರಿಗೆ ಆದೇಶಿಸಿದರು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications