ಅಂಬಿ ಅಂತಿಮ ದರ್ಶನದಲ್ಲಿ ನಟಿ ರಮ್ಯಾ ಗೈರಿನ ಬಗ್ಗೆ ಪ್ರತಿಕ್ರಿಯಿಸಿದ ಜಯಮಾಲಾ
ಉಡುಪಿ, ನವೆಂಬರ್.30:ಅಂಬರೀಶ್ ಸ್ಮಾರಕಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಉಡುಪಿ ಉಸ್ತುವಾರಿ ಸಚಿವೆ ಜಯಮಾಲಾ ಸ್ಪಷ್ಟಪಡಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅಂಬರೀಶ್ ಅಂತ್ಯಸಂಸ್ಕಾರದಲ್ಲಿ ಭಾಗವಹಿಸದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಬಗ್ಗೆಯೂ ಪ್ರತಿಕ್ರಿಯಿಸಿದರು.
ರಮ್ಯಾ ಅನುಪಸ್ಥಿತಿ ಬಗ್ಗೆ ಕೇಳಿದ ಪ್ರಶ್ನೆಗೆ ಕ್ಷಮಿಸಿ ಎಂದ ಸಚಿವೆ ಜಯಮಾಲ, ಅಂಬರೀಶ್ ಅವರ ವೈಕುಂಠ ಸಮಾರಾಧನೆಗಾದ್ರೂ ರಮ್ಯಾ ಬರಬಹುದು. ರಮ್ಯಾ ಅವರಿಗೆ ಹುಷಾರಿಲ್ಲ ಅಂತ ಹೇಳ್ಕೊಂಡಿದ್ದಾರೆ. ಬೇರೇನೂ ರಾಜಕೀಯ ಕಾರಣ ಇರಲಿಕ್ಕಿಲ್ಲ. ಹೆಣ್ಮಕ್ಕಳಿಗೆ ಹಲವಾರು ತೊಂದರೆ ಇರುತ್ತದೆ ಎಂದು ತಿಳಿಸಿದರು.

ವಿಷ್ಣುವರ್ಧನ್ ಸ್ಮಾರಕ ವಿವಾದ ಕುರಿತಂತೆ ಮಾತನಾಡಿದ ಜಯಮಾಲಾ, ಭಾರತಿ ಅವರ ಬೇಸರ ಸಹಜ. ವಿಷ್ಣುವರ್ಧನ್ ನಮ್ಮನ್ನಗಲಿ ಒಂಭತ್ತು ವರ್ಷ ಆಗಿದೆ. ಭಾರತಿ ಅವರ ಕುಟುಂಬಕ್ಕೆ ನಾನು ಬೆಲೆ ಕೊಡುತ್ತೇನೆ. ಮೈಸೂರಲ್ಲಿ ಸ್ಮಾರಕ ಆಗಲಿ ಅಂತ ಭಾರತಿ ಕೇಳುತ್ತಿದ್ದಾರೆ. ಮೈಸೂರು ಅಂದ್ರೆ ವಿಷ್ಣುವರ್ಧನ್ ಗೆ ಪ್ರಾಣ. ವಿಷ್ಣು ಆಸೆ ಏನು ಅನ್ನೋದು ಅವರ ಕುಟುಂಬಕ್ಕೆ ಗೊತ್ತಿರುತ್ತೆ. ತನ್ನ ಆಸೆ ಏನು ಅಂತ ವಿಷ್ಣುವರ್ಧನ್ ಕುಟುಂಬದವರಲ್ಲಿ ಹೇಳಿರ್ತಾರೆ. ಸಿಎಂ ಕುಮಾರಸ್ವಾಮಿಯವರು ಕೂಡ ಸಿನಿಮಾ ರಂಗದವರೇ. ಆದ್ದರಿಂದ ಯಾವುದೇ ಭಿನ್ನಾಭಿಪ್ರಾಯ ಬರಲ್ಲ ಎಂಬ ಮಾಹಿತಿ ನೀಡಿದರು.
ಸ್ಮಾರಕ ನಿರ್ಮಾಣಕ್ಕೆ ಭೂಮಿಗೆ ಸಂಬಂಧಿಸಿದಂತೆ ಸಣ್ಣ ತಕರಾರು ಇದೆ ಅನಿಸುತ್ತದೆ. ನಿನ್ನೆ ಮುನಿರತ್ನ ಹಾಗೂ ಮಂಜು ಸಂಧಾನ, ಚರ್ಚೆ ಮಾಡಿದ್ದಾರೆ. ಪತ್ರದ ಮುಖಾಂತರ ಭಾರತಿ ಅವರಿಗೂ ತಿಳಿಸಿದ್ದಾರೆ. ವಿಷ್ಣು ಸಮಾಧಿ ವಿಚಾರದಲ್ಲಿ ನಮಗೆಲ್ಲರಿಗೂ ಅಸಹಾಯಕತೆ ಇದೆ. ಎಲ್ಲಿ ಸ್ಮಾರಕ ಮಾಡಲು ಹೋದ್ರೂ ಒಂದು ವಿವಾದ ಆಗ್ತಿದೆ. ಯಾಕೆ ಹೀಗಾಗ್ತಿದೆ ಗೊತ್ತಾಗ್ತಿಲ್ಲ. ನಾವೆಲ್ಲರೂ ಭಾರತಿ ಅವರ ಪರ ನಿಲ್ಲುತ್ತೇವೆ ಎಂದರು.
ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಮುಂಬೈಗೆ ತೆರಳಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಹೋಗೋರು ಹೋಗ್ತಾ ಇರ್ತಾರೆ. ಸರ್ಕಾರ ಭದ್ರವಾಗಿರುತ್ತದೆ. ಅಸಮಾಧಾನ ಇದೆ ಅಂತ ಹೇಳೋದೆಲ್ಲಾ ಸುಳ್ಳು ಎಂದು ಅವರು ಸ್ಪಷ್ಟಪಡಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications