ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನಂತ್ ಕುಮಾರ್ ಭೇಟಿ, ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

|
Google Oneindia Kannada News

ಉಡುಪಿ, ಅಕ್ಟೋಬರ್ 17 : 'ನಾನು ಬಿಜೆಪಿ ಸೇರುತ್ತೇನೆ ಎಂಬ ವದಂತಿ ಸುಳ್ಳು. ಪಕ್ಷಾಂತರ ಮಾಡುತ್ತಿಲ್ಲ, ಉಡುಪಿಯ ಐಬಿಗೆ ಅನಂತ್ ಕುಮಾರ್ ಭೇಟಿ ಮಾಡಲು ಹೋಗಿರಲಿಲ್ಲ. ಅಲ್ಲಿಗೆ ಹೋದಾಗ ಅನಂತ್ ಕುಮಾರ್ ಅವರನ್ನು ಭೇಟಿ ಮಾಡಿದೆ' ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟನೆ ನೀಡಿದರು.

'ಕಾಂಗ್ರೆಸ್ಸಿಗರು ಆಧುನಿಕ ಭಸ್ಮಾಸುರರು' : ಅನಂತ್ ಕುಮಾರ್ ವಾಗ್ದಾಳಿ'ಕಾಂಗ್ರೆಸ್ಸಿಗರು ಆಧುನಿಕ ಭಸ್ಮಾಸುರರು' : ಅನಂತ್ ಕುಮಾರ್ ವಾಗ್ದಾಳಿ

ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಸೋಮವಾರ ಉಡುಪಿಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರನ್ನು ಭೇಟಿ ಮಾಡಿರುವ ಫೋಟೋ ವೈರಲ್ ಆಗಿದೆ. ಸಚಿವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದ್ದರಿಂದ, ಇಂದು ಅವರು ಸ್ಪಷ್ಟನೆ ನೀಡಿದ್ದಾರೆ.

Minister Pramod Madhwaraj clarification on meeting with BJP leaders

ಉಡುಪಿಯಲ್ಲಿ ಮಂಗಳವಾರ ಮಾತನಾಡಿದ ಸಚಿವರು, 'ನಾನು ಪಕ್ಷಾಂತರ ಮಾಡುತ್ತಿಲ್ಲ. ಉಡುಪಿಯ ಐಬಿಗೆ ಹೋದಾಗ ಅವರು ಅಲ್ಲಿದ್ದರು. ಕೇಂದ್ರ ಸಚಿವರನ್ನು ಸೌಜನ್ಯದಿಂದ ಮಾತನಾಡಿಸಿ ಬರುವುದು ನಮ್ಮ ಕರ್ತವ್ಯ. ನಾವಿಬ್ಬರೇ ಕೂತು ಮಾತನಾಡಿಲ್ಲ. ಅಲ್ಲಿ ಹಲವು ಜನರಿದ್ದರು. ಇಷ್ಟಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ' ಎಂದು ಹೇಳಿದರು.

ಬಿಜೆಪಿಗೆ ಸೇರುವ ಯೋಗೇಶ್ವರ್ ಮದ್ದೂರಲ್ಲಿ ಸ್ಪರ್ಧೆ?ಬಿಜೆಪಿಗೆ ಸೇರುವ ಯೋಗೇಶ್ವರ್ ಮದ್ದೂರಲ್ಲಿ ಸ್ಪರ್ಧೆ?

ಸೋಮವಾರ ಉಡುಪಿಯಲ್ಲಿ ಬಿಜೆಪಿಯ ಪರಿವರ್ತನಾ ಸಮಾವೇಶ ಆಯೋಜನೆ ಮಾಡಲಾಗಿತ್ತು. ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಅನಂತ್ ಕುಮಾರ್ ಸೇರಿದಂತೆ ವಿವಿಧ ಬಿಜೆಪಿ ನಾಯಕರು ಉಡುಪಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ನಾಯಕರ ಜೊತೆ ಕುಳಿತು ಮಾತನಾಡಿದ್ದರು. ಈ ಪೋಟೋ ವೈರಲ್ ಆಗಿತ್ತು.

English summary
Minister of state for fisheries, youth services and Sports Pramod Madhwaraj has said he will not quit Congress. Pramod Madhwaraj met BJP leaders on October 16, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X