ಸಚಿವ ಹೆಗಡೆ ನಾಲಿಗೆ ಹಿಡಿತದಲ್ಲಿರಲಿ ಎಂದ ಎಂಎಲ್ಸಿ ಭೋಜೇಗೌಡ
ಉಡುಪಿ, ಜೂನ್ 30: ನಾಲಗೆ ಹರಿತವಿದೆ ಎಂದ ಮಾತ್ರಕ್ಕೆ ಹರಿಬಿಡುವುದು ಸರಿಯಲ್ಲ, ನಿಯಂತ್ರಣದಲ್ಲಿಟ್ಟುಕೊಳ್ಳಿ ಎಂದು ರಾಜ್ಯವಿಧಾನ ಪರಿಷತ್ ಸದಸ್ಯ ಭೇಜೇಗೌಡ ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಶನಿವಾರ ಮಾತನಾಡಿದ ಅವರು, ನಿಮಗಿಂತ ಹೆಚ್ಚು ಚುಚ್ಚು ಮಾತುಗಳನ್ನು ಆಡಲು ನಮಗೂ ಬರುತ್ತಿದೆ, ನೀವು ನಿಮ್ಮ ನಾಲಗೆಯನ್ನು ನಿಯಂತ್ರಣದಲ್ಲಿಡದಿದ್ದರೆ ನಾವು ನಮ್ಮ ನಾಲಗೆ ಹರಿಬಿಡಕಾಗುತ್ತದೆ, ನಮ್ಮ ನಾಲಗೆಯೂ ಹರಿತವಿದೆ ಎಂದಿದ್ದಾರೆ.
ನಮ್ಮ ಸರ್ಕಾರವನ್ನು ಯಾರಿಂದಲೂ ನಿಯಂತ್ರಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಹ್ವಾನ ನೀಡುತ್ತಿರುವುದು ಸರಿಯಲ್ಲ. ಬಿಜೆಪಿ ಅಭ್ಯರ್ಥಿಗಳು ಮೊದಲ ತಮ್ಮ ಕ್ಷೇತ್ರಗಳಲ್ಲಿ ನೆರೆ ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಲಿ. ಅಲ್ಲಿ ಉಂಟಾದ ನಷ್ಟಗಳ ಬಗ್ಗೆ ವರದಿ ತಯಾರಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿ.

ಟೀಕೆ ಮಾಡುವುದೊಂದೇ ಕಾಯಕವಾಗದಿರಲಿ. ಸಂಸದರು ತಮ್ಮ ಕೆಲಸವನ್ನು ನಿರ್ವಹಿಸಿದರೆ ಸರ್ಕಾರದಿಂದ ಪರಿಹಾರ ಒದಗಿಸುವ ಕೆಲಸ ನಾವು ಮಾಡುತ್ತೇವೆ. ಯಾವುದೇ ಸರ್ಕಾರ ವಿರಲಿ ಭಿನ್ನಾಭಿಪ್ರಾಯ ಸಹಜ. ಗಂಡ-ಹೆಂಡ್ತಿ ಮಧ್ಯೇನೆ ಭಿನ್ನಾಭಿಪ್ರಾಯ ಇರುತ್ತೆ.
ಇನ್ನೂ ಮರಾಮಾರಿ ಚುನಾವಣೆ ಎದುರಿಸಿ ಗೆದ್ದವರು ನಾವು. ಹೀಗಿಬೇಕಾದರೆ ಭಿನ್ನಾಭಿಪ್ರಾಯ ಬರುವುದು ಸಹಜ ಎಂದರು. ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಬಗ್ಗೆ ಸಮಾಲೋಚನಕ್ಕಾಗಿ ಆಗಮಿಸಿದ ಭೋಜೆಗೌಡರು, ಒಂದು ದಿನಗಳ ಕಾಲ ಜಿಲ್ಲೆಯಲ್ಲಿ ಕಳೆಯಲಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications