ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಿಳಾ ದಿನಾಚರಣೆಯಂದೇ ತಂಗಿ ಸುಮಲತಾಗೆ ಅವಮಾನ:ಶ್ರೀನಿವಾಸ ಪೂಜಾರಿ

|
Google Oneindia Kannada News

ಉಡುಪಿ, ಮಾರ್ಚ್ 08: ಸುಮಲತಾ ಬಗ್ಗೆ ರೇವಣ್ಣ ನೀಡಿರುವ ಹೇಳಿಕೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಸೂಪರ್ ಸಿಎಂ ಹೀಗೆ ಹೇಳಬಾರದಿತ್ತು ಎಂದು ರೇವಣ್ಣ ಅವರನ್ನು ಕುಟುಕಿದರು.

ರೇವಣ್ಣ ಸುಮಲತಾ ಅವರ ಕ್ಷಮೆಯಾಚಿಸಲಿ: ಶೋಭಾ ಕರಂದ್ಲಾಜೆರೇವಣ್ಣ ಸುಮಲತಾ ಅವರ ಕ್ಷಮೆಯಾಚಿಸಲಿ: ಶೋಭಾ ಕರಂದ್ಲಾಜೆ

ಸಚಿವ ರೇವಣ್ಣ ಸುಮಲತಾ ಬಗ್ಗೆ ಮನಸೋ ಇಚ್ಛೆ ಮಾತನಾಡಿದ್ದಾರೆ. ಮಹಿಳಾ ದಿನಾಚರಣೆಯಂದೇ ತಂಗಿ ಸುಮಲತಾಗೆ ಅವಮಾನ ಮಾಡಿದ್ದಾರೆ. ರೇವಣ್ಣ ಅವರಿಂದ ಇಂತಹ ಭಾಷೆ ನಿರೀಕ್ಷೆ ಮಾಡಿರಲಿಲ್ಲ. ಸುಮಲತಾ ಬಗ್ಗೆ ಆಡಿದ ಮಾತು ಹಿಂಪಡೆಯಿರಿ ಎಂದು ರೇವಣ್ಣ ಅವರನ್ನು ಒತ್ತಾಯಿಸಿದರು.

MLC Kota Srinivas Poojari slammed H D Revanna

ರಾಮಮಂದಿರ ವಿವಾದಕ್ಕೆ ಸಂಧಾನ ಮೂಲಕ ಪರಿಹಾರ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀನಿವಾಸ ಪೂಜಾರಿ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ದೊರೆತಿದೆ. ಸುಪ್ರೀಂ ಕೋರ್ಟ್ ಸಮಿತಿ ರಚನೆ ಮಾಡಿರೋದು ಸ್ವಾಗತಾರ್ಹ ಎಂದರು.

ಸುಮಲತಾ ಅಂಬರೀಶ್ ಚಾಲೆಂಜ್ ಸ್ವೀಕರಿಸಲು ಸಿದ್ಧ : ರೇವಣ್ಣಸುಮಲತಾ ಅಂಬರೀಶ್ ಚಾಲೆಂಜ್ ಸ್ವೀಕರಿಸಲು ಸಿದ್ಧ : ರೇವಣ್ಣ

ನ್ಯಾಯಾಂಗದ ಚೌಕಟ್ಟಿನೊಳಗೆ ಪರಿಹಾರ ಆಗಬೇಕು ಅನ್ನೊದು ಭಾರತೀಯರ ಬಯಕೆ. ರಾಮಜನ್ಮಭೂಮಿ ವಿವಾದ ಪರಿಹಾರವಾಗುವ ವಿಶ್ವಾಸವಿದೆ. ಶ್ರೀರಾಮ ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣ ಆಗುತ್ತದೆ. ದಾರ್ಶನಿಕರು ಇರುವ ಸಮಿತಿ ಎಂಟೇ ವಾರದಲ್ಲಿ ಒಳ್ಳೆಯ ವರದಿಕೊಡುತ್ತೆ ಎಂದು ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು.

English summary
Udupi MLC Kota Srinivas Poojari slammed H D Revanna over his statement on Sumalatha Ambareesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X