ಪ್ರಧಾನಿ ಆತುರದ ನಿರ್ಧಾರದಿಂದ ದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ: ಮಾಜಿ ಸಿಎಂ ವೀರಪ್ಪ ಮೊಯಿಲಿ
ಉಡುಪಿ, ಆಗಸ್ಟ್ 31: "ರಾಜ್ಯದಲ್ಲಿ ಪ್ರವಾಹದಿಂದ ಆಗಿರುವ ನಷ್ಟ ಐವತ್ತು ಸಾವಿರ ಕೋಟಿ ಅಲ್ಲ, ಸುಮಾರು 5 ಲಕ್ಷ ಕೋಟಿ. ಐಎಎಸ್ ಅಧಿಕಾರಿಗಳ ನಿಯೋಗ ಬಂದು ಅಧ್ಯಯನ ನಡೆಸಿದರೆ ಪ್ರಯೋಜನ ಇಲ್ಲ. ತಜ್ಞರ ಸಮಿತಿ ಮಾಡಬೇಕು. ಇವತ್ತಿನವರೆಗೆ ಕೇಂದ್ರ ಸರ್ಕಾರ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ" ಎಂದು ದೂರಿದ್ದಾರೆ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ.
ಉಡುಪಿಯ ಡಿಸಿಸಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮೊಯಿಲಿ, "ಪ್ರಧಾನಿಯವರು ಅ.7ಕ್ಕೆ ಬರುತ್ತಾರೆ ಎಂದಿದ್ದಾರೆ. ಅವರೇ ಬಂದು ಪರಿಹಾರ ಘೋಷಣೆ ಮಾಡಬೇಕು ಅಂತ ಏನಿದೆ? ಪರಿಹಾರ ಘೋಷಣೆಗೆ ಕಾಯುವುದು ಸರಿಯಲ್ಲ. ಗೃಹ ಸಚಿವರು ರಾಷ್ಟ್ರೀಯ ವಿಪತ್ತು ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. ಹಾಗಿದ್ದರೂ ಪರಿಹಾರ ಘೋಷಣೆ ಮಾಡಲು ವಿಳಂಬ ಯಾಕೆ? ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರವಾಹವನ್ನು ಸಹಜವಾಗಿ ತೆಗೆದುಕೊಂಡಿದೆ. ರಾಜ್ಯದಲ್ಲೂ ಸಿಎಂ ಯಡಿಯೂರಪ್ಪನವರು ವಿರೋಧ ಪಕ್ಷದ ನಾಯಕರ ವಿಶ್ವಾಸ ಪಡೆದಿಲ್ಲ" ಎಂದು ಆರೋಪಿಸಿದರು.
ಇದೇ ಸಂದರ್ಭ ದೇಶದ ಆರ್ಥಿಕ ಪರಿಸ್ಥಿತಿ ಕುರಿತೂ ಮಾತನಾಡಿದ ಅವರು, "ಬ್ಯಾಂಕ್ ವಿಲೀನ ಪ್ರಕ್ರಿಯೆ ಆರ್ಥಿಕ ತುರ್ತು ಪರಿಸ್ಥಿತಿ. ಇದು ಪ್ರಧಾನಿ ಮೋದಿಯ ಆತುರದ ನಿರ್ಧಾರದಿಂದಾದದ್ದು. ಪ್ರತಿಯೊಂದನ್ನೂ ರಾತ್ರಿ ನಿರ್ಧಾರ ಮಾಡ್ತಾರೆ, ಬೆಳಿಗ್ಗೆ ಘೋಷಣೆ ಮಾಡ್ತಾರೆ. ಕಾಶ್ಮೀರ ವಿಚಾರದಲ್ಲೂ ಪ್ರಧಾನಿ ಆತುರದ ನಿರ್ಧಾರ ಮಾಡಿದ್ದಾರೆ. ಬಡ ಜನರಿಗೆ ಸೇವೆ ಕೊಡುವ ಉದ್ದೇಶದಿಂದ ಆರಂಭವಾದ ಬ್ಯಾಂಕ್ ಗಳನ್ನು ಜನರಿಂದ ದೂರ ಕೊಂಡೊಯ್ಯಲಾಗುತ್ತಿದೆ. ಇನ್ನು ದೊಡ್ಡ ಉದ್ಯಮಿಗಳಿಗೆ ಸಾಲ ಕೊಡಲು ದೊಡ್ಡ ಬ್ಯಾಂಕ್ ಮಾಡಿದಾರೆ ಅಷ್ಟೆ. ಈಗ ದೇಶದಲ್ಲಿ ಅಘೋಷಿತ ಆರ್ಥಿಕ ತುರ್ತು ಪರಿಸ್ಥಿತಿ ಉಂಟಾಗಿದೆ" ಎಂದರು.

"ವಿರೋಧ ಪಕ್ಷಗಳು ಗಟ್ಟಿಯಾಗಿಲ್ಲ ಅಂತ ಕೇಂದ್ರ ಸರ್ಕಾರ ಹೀಗೆಲ್ಲಾ ಮಾಡುತ್ತಿದೆ. ಆದರೆ ದೇಶದ ಅಭಿವೃದ್ಧಿಗೆ ಈ ಧೋರಣೆಯೇ ಮಾರಕ. ಕೇಂದ್ರದ ವೈಫಲ್ಯವನ್ನು ಜನರಿಗೆ ತಲುಪಿಸಲು ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕು. ಸಕ್ರಿಯ ರಾಷ್ಟ್ರ ನಿರ್ಮಾಣಕ್ಕೆ ಕಾಂಗ್ರೆಸ್ ಮುಂದಾಗಬೇಕು. ಈಗ ಇಡಿ ಮೂಲಕ ಹೆದರಿಸುವ ಕೆಲಸ ಈಗ ಆಗ್ತಿದೆ. ಚಿದಂಬರಂ ಅವರನ್ನು ಒಳಗೆ ಹಾಕಿದಾರೆ. ಡಿಕೆಶಿಯನ್ನೂ ಒಳಗೆ ಹಾಕ್ತಾರೆ. ಆದರೆ ಪ್ರಜಾಪ್ರಭುತ್ವ ಹಿತರಕ್ಷಣೆಗೆ ಕಾಂಗ್ರೆಸ್ ನಾಯಕರು ಹೆದರಬಾರದು" ಎಂದು ಎಚ್ಚರಿಕೆ ನೀಡಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications