ಉಡುಪಿ: ಮೊಗವೀರ ಸಮುದಾಯದ ಮುನಿಸಿಗೆ ಕಾರಣವಾಯ್ತಾ ಬಿಜೆಪಿ ಟಿಕೆಟ್ ಹಂಚಿಕೆ..?
ಉಡುಪಿ, ಮಾರ್ಚ್ 29: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗು ಪಡೆದಿದೆ. ಅಭ್ಯರ್ಥಿಗಳು ಈಗಾಗಲೇ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಮತದಾರರು ಯಾರತ್ತ ಒಲವು ತೋರಬೇಕು ಎನ್ನುವ ಗೊಂದಲದಲ್ಲಿದ್ದಾರೆ. ಇತ್ತ ಚುನಾವಣೆಗೆ ಅಣಿಯಾಗುತ್ತಿದ್ದರೆ, ಅತ್ತ ಟಿಕೆಟ್ ಹಂಚಿಕೆಯ ಅಸಮಾಧಾನ ಆಗಾಗ ಹೊಗೆಯಾಡುತ್ತಿದೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಂಟ ಬಿಲ್ಲವರ ಜಿದ್ದಾಜಿದ್ದಿಯಲ್ಲಿ ಮೊಗವೀರ ಸಮುದಾಯ ಬೇಸರದಲ್ಲಿದೆ ಎನ್ನುವ ಪ್ರಶ್ನೆ ಮೂಡುತಿದೆ. ಮೊಗವೀರ ಸಮುದಾಯದ ಮುಖಂಡ ಪ್ರಮೋದ್ ಮಧ್ವರಾಜ್ ಕೊನೆಯ ಕ್ಷಣದವರೆಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಕೊನೆಯ ಕ್ಷಣದಲ್ಲಿ ಬಿಲ್ಲವ ಸಮುದಾಯದ ಕೋಟಾ ಶ್ರೀನಿವಾಸ ಪೂಜಾರಿಗೆ ಬಿಜೆಪಿ ಟಿಕೆಟ್ ಸಿಕ್ಕಿತ್ತು. ಇದರಿಂದ ಮೀನುಗಾರಿಕಾ ಸಮುದಾಯಕ್ಕೆ ಬೇಸರವಾಗಿದೆ? ಈ ಬಾರಿ ಚುನಾವಣೆಯಲ್ಲಿ ಮೀನುಗಾರಿಕಾ ಸಮುದಾಯ ಯಾರ ಪರ ಎನ್ನುವ ಪ್ರಶ್ನೆಗಳು ಉದ್ಭವವಾಗಿದೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸದ್ಯ ಮೀನುಗಾರಿಕಾ ಅಂದರೆ ಮೊಗವೀರ ಸಮುದಾಯದಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಅಸಮಾಧಾನದಲ್ಲಿ ಇದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅದರಲ್ಲೂ ಬಹು ಮುಖ್ಯವಾಗಿ ಉಡುಪಿ ಜಿಲ್ಲೆಯ ಆರ್ಥಿಕತೆ ಮೀನುಗಾರಿಕೆಯನ್ನೇ ಅವಲಂಬಿಸಿದೆ ಎಂದರೆ ತಪ್ಪಾಗಲಾರದು.

1.10 ಲಕ್ಷ ಮತದಾರರಿರುವ ಮೊಗವೀರ ಸಮುದಾಯ ಈ ಬಾರಿ ಪ್ರಮೋದ್ ಮಧ್ವರಾಜ್ ಅವರನ್ನ ಉಡುಪಿ ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ಪರಿಗಣಿಸಿ ಎನ್ನುವ ರೀತಿಯಲ್ಲಿ ನಡೆಸಿತ್ತು. ಅಲ್ಲದೆ ಚುನಾವಣೆ ಘೋಷಣೆಗೂ ಮೊದಲು ಕೂಡ ಪ್ರಮೋದ್ ಮದ್ವರಾಜ್ ಈ ಬಾರಿ ಬಿಜೆಪಿ ತಮಗೆ ಟಿಕೆಟ್ ನೀಡುವುದು ಪಕ್ಕ ಎನ್ನುವಂತೆ ಭಾವಿಸಿದ್ದರು. ಆದರೆ ಕೊನೆ ಕ್ಷಣದಲ್ಲಿ ಆದ ಬದಲಾವಣೆ ಬಿಲ್ಲವ ಮುಖಂಡ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ವರವಾಗಿದೆ.
ಈ ಬೆಳವಣಿಗೆ ಮೊಗವೀರ ಸಮುದಾಯಕ್ಕೆ ಬೇಸರ ತಂದಿದೆಯಾ ಎನ್ನುವ ಪ್ರಶ್ನೆ ಸದ್ಯ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ಸಮುದಾಯದ ಮುಖಂಡ ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಮೊಗವೀರರಿಗೆ ಬೇಸರ ಉಂಟು ಮಾಡಿದೆ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿದೆ.
ಇನ್ನು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ವಿಚಾರವಾಗಿ ಮೊಗವೀರ ಸಮುದಾಯಕ್ಕೆ ಅಷ್ಟಾಗಿ ಒಲವಿದ್ದಂತೆ ಕಂಡು ಬರುತ್ತಿಲ್ಲ. ಹಿಂದೆ ಮೀನುಗಾರಿಕಾ ಸಚಿವರಾಗಿದ್ದಾಗಲೂ ಕೂಡ ಸಮುದಾಯಕ್ಕೆ ಹೇಳಿಕೊಳ್ಳುವಂತದ್ದು ಏನು ಮಾಡಿಲ್ಲ ಎನ್ನುವ ಅಸಮಾಧಾನವೂ ಕೂಡ ಮೊಗವೀರ ಸಮುದಾಯಕ್ಕಿದೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗಡೆ ವಿಚಾರವಾಗಿ ಮೊಗವೀರ ಸಮುದಾಯ ಈ ಹಿಂದಿನಿಂದಲೂ ಕೂಡ ಸಾಕಷ್ಟು ಒಲವನ್ನು ಇರಿಸಿಕೊಂಡಿದೆ.
ಜಯಪ್ರಕಾಶ್ ಹೆಗ್ಡೆ ಮೀನುಗಾರಿಕಾ ಸಚಿವರಾಗಿದ್ದಾಗ ಮಲ್ಪೆ ಬಂದರು, ಹಂಗಾರಕಟ್ಟೆ ಬಂದರು, ಕೋಡಿ ಬಂದರು ಹೀಗೆ ಜಿಲ್ಲೆಯ ಮೀನುಗಾರಿಕಾ ಸಮುದಾಯಕ್ಕೆ ಹೊಸ ಹೊಸ ಯೋಜನೆಗಳನ್ನ ನೀಡಿದ್ದರು. ಹೀಗಾಗಿ ಸಹಜವಾಗಿ ಮೊಗವೀರ ಸಮುದಾಯಕ್ಕೆ ಕಾಂಗ್ರೆಸ್ ಅಭ್ಯರ್ಥಿಯ ಪರ ಒಲವಿದ್ದಂತೆ ಕಂಡುಬರುತ್ತಿದೆ. ಹಾಗಾಗಿ ಈ ಬಾರಿ ಮೊಗವೀರ ಸಮುದಾಯ ಯಾರ ಕೈ ಹಿಡಿಯಲಿದೆ ಎನ್ನುವ ಪ್ರಶ್ನೆ ಸದ್ಯ ಸಾರ್ವಜನಿಕ ವಲಯದಲ್ಲಿದೆ..
ಒಟ್ಟಾರೆಯಾಗಿ ಜಿಲ್ಲೆಯ ಮೊಗವೀರ ಸಮುದಾಯ ಹಿಂದುತ್ವ ಮತ್ತು ಮೋದಿ ಜಪ ಮಾಡಿಕೊಂಡು ಬಂದವರು. ಆದರೆ ಈ ಬಾರಿ ತಮ್ಮ ನಾಯಕನಿಗೆ ಟಿಕೆಟ್ ನೀಡದೇ ಇರುವುದು ಮತ್ತು ಕಾಂಗ್ರೆಸ್ ಅಭ್ಯರ್ಥಿಯ ಪರ ಇರುವ ಒಲವು ಈ ಸಮುದಾಯವನ್ನ ನಿಲುವು ಯಾರ ಕಡೆಗೆ ಎನ್ನೋ ಪ್ರಶ್ನೆ ಉದ್ಭವವಾಗಿದೆ. ಬಿಜೆಪಿ ಭದ್ರಕೋಟೆಯಾಗಿರುವ ಬಿಜೆಪಿಯಲ್ಲಿ ಈ ಬಾರಿ ಮತದಾರರು ಯಾರತ್ತ ಒಲವು ತೋರಲಿದ್ದಾರೆ ಎನ್ನುವುದೇ ಕುತೂಹಲವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications