ಆಗುಂಬೆ ಘಾಟಿಯಲ್ಲಿ 20ಕ್ಕೂ ಹೆಚ್ಚು ಮಂಗಗಳ ಮಾರಣ ಹೋಮ
ಉಡುಪಿ, ಅಕ್ಟೋಬರ್ 27: ಈ ಮಂಗಗಳು ಮನುಷ್ಯರಿಗೆ ಅದೇನು ಮಾಡಿದ್ದವೋ ಗೊತ್ತಿಲ್ಲ. ಆದರೆ ಕಿಡಿಗೇಡಿಗಳ ಕೃತ್ಯಕ್ಕೆ ಇವೆಲ್ಲಾ ನರಳಿ ನರಳಿ ಸತ್ತಿವೆ.
ಇಪ್ಪತ್ತಕ್ಕೂ ಅಧಿಕ ಮಂಗಗಳು ಜೀವನ್ಮರಣ ಸ್ಥಿತಿಯಲ್ಲಿ ನರಳಾಡಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಆಗುಂಬೆ ಘಾಟಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಘಾಟಿಯ ರಸ್ತೆ ಬದಿಯಲ್ಲಿ ಈ ಮನಕಲುಕುವ ದೃಶ್ಯ ಕಂಡುಬಂದಿದ್ದು ಯಾರೋ ಕಿಡಿಗೇಡಿಗಳು ಈ ಮಂಗಗಳಿಗೆ ಆಹಾರದಲ್ಲಿ ವಿಷವುಣಿಸಿ ತಂದು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಆಹಾರವನ್ನು ಹುಡುಕಿಕೊಂಡು ನಾಡಿಗೆ ಬಂದ ಈ ಮೂಕ ಜೀವಿಗಳಿಗೆ ವಿಷವುಣಿಸಿರಬಹುದೆಂದು ಅನುಮಾನ ವ್ಯಕ್ತಪಡಿಸಲಾಗಿದೆ.

ಫಲಿಸದ ಸಾರ್ವಜನಿಕರ ಯತ್ನ
ಮಂಗಗಳ ನರಳಾಟವನ್ನು ಕಂಡ ಸ್ಥಳೀಯ ಯುವಕರ ತಂಡ ಹಾಗೂ ಕೆಲವು ಪ್ರಯಾಣಿಕರು ಮಂಗಗಳಿಗೆ ನೀರು ಕುಡಿಸಿ ಬದುಕಿಸಲು ಬಹಳ ಪ್ರಯತ್ನ ಪಟ್ಟರೂ ಪ್ರಯೋಜನವಾಗಿಲ್ಲ.

ಮಂಗಗಳ ಮೂಕ ರೋಧನೆ
ಎಲ್ಲಾ 20ಕ್ಕೂ ಹೆಚ್ಚು ಮಂಗಗಳು ಸತ್ತು ಬಿದ್ದಿವೆ. ಅವುಗಳ ಮೂಕ ರೋಧನೆಗೆ ಜನರು ಮೌನ ಸಾಕ್ಷಿಯಾಗಿದ್ದಾರೆ.

ವನ್ಯಜೀವಿ ಇಲಾಖೆ ಸಿಬ್ಬಂದಿ ಪರಿಶೀಲನೆ
ಈ ಘಟನೆ ಬಗ್ಗೆ ಅರಣ್ಯ ಇಲಾಖೆಯವರು ಗಮನ ಹರಿಸಬೇಕೆಂದು ಸ್ಥಳೀಯರು ಒತ್ತಾಯಿದ್ದಾರೆ. ಘಟನಾ ಸ್ಥಳಕ್ಕೆ ಹೆಬ್ರಿ ವಲಯ ವನ್ಯಜೀವಿ ಇಲಾಖೆಯ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಹಿಂದೆಯೂ ನಡೆದಿತ್ತು ಘಟನೆ
ಇತ್ತೀಚೆಗೆ ಹೆಬ್ರಿ ಬಳಿಯ ಕಬ್ಬಿನಾಲೆ ಎಂಬಲ್ಲಿ ಇದೇ ರೀತಿ ಯಾರೋ ಕಿಡಿಗೇಡಿಗಳು ಮಂಗಗಳಿಗೆ ವಿಷ ಉಣಿಸಿ ರಸ್ತೆ ಬದಿಯಲ್ಲಿ ಹಾಕಿದ ಘಟನೆ ನಡೆದಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications