ಉಡುಪಿಯಲ್ಲಿ ವಿಟ್ಲಪಿಂಡಿ ಪ್ರಯುಕ್ತ ಮೊಸರು ಕುಡಿಕೆಗೆ ಚಾಲನೆ
ಉಡುಪಿ, ಸೆಪ್ಟೆಂಬರ್ 14 : ಇಂದು (ಸೆ.14) ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕಿದಿಯೂರು ಕೆ.ಉದಯ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಮುಂಬೈಯ ಅಲಾರೆ ಗೋವಿಂದ ಸಾಂಸ್ಕೃತಿಕ ವೇದಿಕೆಯ ವತಿಯಿಂದ ಬಾಲಮಿತ್ರ ವ್ಯಾಯಾಮ ಶಾಲೆಯ ಪುರುಷರ ತಂಡದಿಂದ ಮೊಸರು ಕುಡಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಉಡುಪಿಯಲ್ಲಿ ನಡೆಯುವ ಮೊಸರು ಕುಡಿಕೆಗೆ ವಿಠಲನ ಪಿಂಡಿ ಎಂದು ಹೆಸರು. ಕೃಷ್ಣನ ರಥಬೀದಿಯಲ್ಲಿ ಜನಸಾಗರ ತುಂಬಿ ತುಳುಕುವ ನಡುವೆ ಎತ್ತರದ ಮರಗಳಿಗೆ ಕಟ್ಟಿದ ಮಡಕೆಗಳನ್ನು ಗೊಲ್ಲ ವೇಷಧಾರಿಗಳು ಒಡೆಯುವ ಸಾಂಪ್ರದಾಯಿಕ ಆಚರಣೆ ನಡೆಯುತ್ತದೆ. ದಕ್ಷಿಣ ಕನ್ನಡದ ಮೊಸರು ಕುಡಿಕೆ ಉಡುಪಿ ಪ್ರಭಾವಿತವೇ ಆದರೂ ವಿಭಿನ್ನ.

ಪರ್ಯಾಯ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಮಠದ ರಾಜಾಂಗಣದಲ್ಲಿ ಮೊಸರು ಕುಡಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ರಾಜಾಂಗಣ ಪಾರ್ಕಿಂಗ್ ನಲ್ಲಿ ಕ್ರೇನ್ ಮೂಲಕ ಸುಮಾರು 20 ಅಡಿ ಎತ್ತರದಲ್ಲಿ ಮೊಸರು ತುಂಬಿದ ಮಡಕೆಯನ್ನು ಇರಿಸಲಾಗಿತ್ತು. ಇದನ್ನು ಬಾಲಮಿತ್ರ ವ್ಯಾಯಾಮ ಶಾಲೆಯ ಪುರುಷರ ತಂಡ ಮಾನವ ಪಿರಮಿಡ್ ರಚಿಸಿ ಒಡೆಯಿತು. ಎರಡು ಬಾರಿ ಪ್ರಯತ್ನಿಸಿದ ತಂಡ ಮೂರನೆ ಬಾರಿಯ ಯತ್ನದಲ್ಲಿ ಯಶಸ್ವಿ ಸಾಧಿಸಿತು. ಈ ವಿಶಿಷ್ಟ ಮೊಸರು ಕುಡಿಕೆ ವೀಕ್ಷಿಸಿ ಜನಸ್ತೋಮವೇ ನೆರೆದಿತ್ತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪರ್ಯಾಯ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ, ಅನ್ನದಾನ ಶ್ರೀಕೃಷ್ಣನಿಗೆ ಅತ್ಯಂತ ಪ್ರೀತಿಯ ಸೇವೆ. ವಿವಿಧ ರೀತಿಯ ಸೇವೆಯಿಂದ ಭಗವಂತನಿಗೆ ತೃಪ್ತಿ ದೊರೆಯಲಿದೆ.
ಇದರಿಂದ ಲೋಕ ಕಲ್ಯಾಣ ಸಾಧ್ಯ. ಈ ನಿಟ್ಟಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ ಎಂದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications