ಉಡುಪಿ: ಕಾಲು ಜಾರಿ ಕೆರೆಗೆ ಬಿದ್ದು ತಾಯಿ, ಪುತ್ರಿಯರಿಬ್ಬರ ಸಾವು
ಉಡುಪಿ, ಮೇ 31: ಕೆರೆಯ ನೀರಿನಲ್ಲಿ ನೆನೆಯಲು ಹಾಕಿದ್ದ ಭತ್ತದ ಬೀಜದ ಚೀಲಗಳನ್ನು ತರಲೆಂದು ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ತಾಯಿ ಮತ್ತು ಅವರನ್ನು ರಕ್ಷಿಸಲು ಧಾವಿಸಿದ ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಬೇಳೂರು ಗ್ರಾಮ ದೇಲಟ್ಟುವಿನಲ್ಲಿ ಈ ಘಟನೆ ನಡೆದಿದೆ.
ದೇಲಟ್ಟುವಿನ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಕೃಷಿಕ ನರಸಿಂಹ ಶೆಟ್ಟಿ ಎನ್ನುವವರ ಪತ್ನಿ ಭಾರತಿ ಶೆಟ್ಟಿ (45) ಹಾಗೂ ಪತ್ರಿಯರಾದ ಪೃಥ್ವಿ ಶೆಟ್ಟಿ (21) ಹಾಗೂ ಪ್ರಜ್ಞಾ ಶೆಟ್ಟಿ (19) ಸಾವನ್ನಪ್ಪಿದವರು.

ಗದ್ದೆಗಳಿಗೆ ಬಿತ್ತನೆ ಮಾಡುವ ಉದ್ದೇಶದಿಂದ 6 ಚೀಲಗಳಲ್ಲಿ ತುಂಬಿಸಿದ್ದ ಭತ್ತದ ಬೀಜಗಳನ್ನು ಮೊಳಕೆ ಮಾಡಲೆಂದು ಮನೆಯ ಸಮೀಪದ ಕೆರೆಯಲ್ಲಿ ನೆನೆಯಲು ಹಾಕಲಾಗಿತ್ತು. ಆದರೆ ಅಕಾಲಿಕ ಸುರಿದ ಮಳೆಯಿಂದಾಗಿ ಬೀಜಗಳಿಗೆ ಹಾನಿಯಾಗುತ್ತದೆ ಎಂದು ಚೀಲಗಳನ್ನು ತೆಗೆಯಲು ಸಂಜೆ ವೇಳೆಗೆ ಭಾರತಿ ತೆರಳಿದ್ದರು. ಇವುಗಳನ್ನು ಮೇಲಕ್ಕೆ ತರುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಇವರನ್ನು ಮೇಲಕ್ಕೆತ್ತಲು ಹೋದ ಇಬ್ಬರು ಪುತ್ರಿಯರೂ ಕೆರೆಗೆ ಬಿದ್ದಿದ್ದಾರೆ.
ತಾಯಿ ಹಾಗೂ ಇಬ್ಬರು ಮಕ್ಕಳು ಕಾಣಿಸದೆ ಇದ್ದುದರಿಂದ ಬಂಧುಗಳು ಹಾಗೂ ನೆರೆಕೆರೆಯವರು ಹುಡುಕಾಟ ಆರಂಭಿಸಿದ್ದಾರೆ. ಮಂಗಳವಾರ ಸಂಜೆ ಸುಮಾರು 7.30 ರ ವೇಳೆಯಲ್ಲಿ ಕೆರೆಯ ದಂಡೆಯ ಮೇಲೆ 5 ಭತ್ತದ ಚೀಲಗಳನ್ನು ಕಂಡು ಅನುಮಾನದಿಂದ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಮೂವರ ಮೃತ ದೇಹಗಳು ಕೆರೆಯಲ್ಲಿ ಪತ್ತೆಯಾಗಿದೆ.
ಪ್ರಥ್ವಿ ಬ್ರಹ್ಮಾವರದ ಎಸ್ಎಂಎಸ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ಹಾಗೂ ಪ್ರಜ್ಞಾ ಪ್ರಥಮ ವರ್ಷದ ಪದವಿ ಅಭ್ಯಾಸಕ್ಕಾಗಿ ಕುಂದಾಪುರದ ಭಂಡಾರ್ಕರ್ಸ್ ಕಾಲೇಜು ಸೇರ್ಪಡೆಯಾಗಿದ್ದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications