ಉಡುಪಿಗೆ ಆಷಾಢ ತಂದ ಸಂಭ್ರಮ; ಬೊಮ್ಮಾಯಿ ಸಿಎಂ, ಕರಂದ್ಲಾಜೆ ಕೇಂದ್ರ ಸಚಿವೆ
ಉಡುಪಿ, ಜುಲೈ 28: ಆಷಾಢ ತಿಂಗಳಿನಲ್ಲಿ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುವುದಿಲ್ಲ, ಆಷಾಢ ಕಷ್ಟದ ತಿಂಗಳು ಅನ್ನುವ ನಂಬಿಕೆ ಕೂಡಾ ಇದೆ. ಆದರೆ ರಾಜ್ಯ ಕರಾವಳಿ ಜಿಲ್ಲೆಯಾದ ಉಡುಪಿಗೆ ಮಾತ್ರ ಈ ಆಷಾಢ ಮಾತ್ರ ಬಂಪರ್ ಸಂಭ್ರಮ ನೀಡಿದೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಗೆ ಆಷಾಢವೇ ಶ್ರಾವಣವಾಗಿ ಬದಲಾಗಿದೆ. ಬೊಮ್ಮಾಯಿಗೆ ಮುಖ್ಯಮಂತ್ರಿ ಸ್ಥಾನ ಹುಡುಕಿಕೊಂಡು ಬಂದಿದೆ. ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಸಚಿವೆಯಾಗಿದ್ದಾರೆ.
ಬಿಜೆಪಿ ಶಾಸಕರೇ ತುಂಬಿರುವ ಉಡುಪಿಗೆ ಹೊಸ ಸಚಿವ ಸ್ಥಾನ ಲಭಿಸುವ ಸಾಧ್ಯಗಳಿವೆ. ಹೀಗಾಗಿ ಈ ಜುಲೈ ತಿಂಗಳು ಉಡುಪಿಯನ್ನು ನಂಬಿದ ರಾಜಕರಾಣಿಗಳಿಗೆ ಬಂಪರ್ ಸಂಭ್ರಮ ನೀಡಿದೆ.

ಕೃಷ್ಣನೂರಿನ ಜನಪ್ರತಿನಿಧಿಗಳಿಗೆ ಅಷಾಢದಲ್ಲಿ ಸಂಭ್ರಮವಾದರೆ, ಜನರು ಮಾತ್ರ ನೀವು ಇನ್ನಾದರೂ ಕೆಲಸ ಮಾಡಿ ಅಂತಾ ಹೇಳುತ್ತಿದ್ದಾರೆ. ಯಾಕೆಂದರೆ ಬೊಮ್ಮಾಯಿ ಉಡುಪಿ ಜಿಲ್ಲಾ ಉಸ್ತುವಾರಿಯಾಗಿದ್ದಾಗ ಉಡುಪಿ ಜಿಲ್ಲೆಗೆ ಬಂದದ್ದೇ ಬಹಳ ಅಪರೂಪ. ಕೇವಲ ಬೆರಳೆಣಿಕೆಯ ಸಲವಷ್ಟೇ ಬಂದಿರಬಹುದು.
ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವೆಯಾಗಿರುವ ಶೋಭಾ ಕರಂದ್ಲಾಜೆಗೆ ಆಷಾಢ ಶುಭವಾಗಿದ್ದರೆ, ಇನ್ನು ಮೂಲತಃ ಉಡುಪಿ ಜಿಲ್ಲೆಯ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಿಎಂ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಅವರು ಅಂದುಕೊಂಡಂತೆ ಅಗಲಿಲ್ಲ ಎನ್ನುವುದು ಉಡುಪಿ ಜಿಲ್ಲೆಗೆ ಆಷಾಢ ಮಿಶ್ರಫಲ ಎಂದೇ ಹೇಳಬಹುದು.
"ಉಡುಪಿಗೆ ಬೊಮ್ಮಾಯಿ ಕೊಡುಗೆ ಕೂಡ ಅತ್ಯಲ್ಪವಾಗಿದೆ. ಕೋವಿಡ್ ಕಾಲದಲ್ಲೂ ಜಿಲ್ಲೆಯ ಜನರೊಂದಿಗೆ ಇದ್ದು ಧೈರ್ಯ ತುಂಬಲಿಲ್ಲ ಎನ್ನುವ ಆಪಾದನೆ ಇದೆ. ಇನ್ನು ಸಂಸದೆ ಶೋಭಾ ಕರಂದ್ಲಾಜೆಯವರು ಜಿಲ್ಲೆಗೆ ಆಗಮಿಸುವ ಅಪರೂಪದ ಸಂಸದೆ. ಉಡುಪಿ ಜಿಲ್ಲೆಯ ಜನರಿಗೆ ಸಂಸದೆಯನ್ನು ನೋಡುವ ಭಾಗ್ಯ ಮಾಧ್ಯಮಗಳಲ್ಲಿ ಮಾತ್ರ ಸಿಗುತ್ತಿತ್ತು,'' ಅಂತಾ ಉಡುಪಿ ಜನರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು ಉಡುಪಿಯ ಜನ ಮತ ಹಾಕಿದ ಎಲ್ಲಾ ರಾಜಕಾರಣಿಗಳಿಗೆ ಅವಕಾಶ ಹುಡುಕಿಕೊಂಡು ಬಂದಿದೆ. ಕೆ.ಕೆ. ಪೈ, ಆಸ್ಕರ್ ಫರ್ನಾಂಡೀಸ್, ವಿ.ಎಸ್. ಆಚಾರ್ಯ, ಸದಾನಂದ ಗೌಡ, ಶೋಭಾ ಕರಂದ್ಲಾಜೆ, ಪ್ರಮೋದ್ ಮಧ್ವರಾಜ್ ಹೀಗೆ ಹಲವು ಜನ ಪ್ರತಿನಿಧಿಗಳು ಕೇಂದ್ರ ಹಾಗೂ ರಾಜ್ಯದಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಆದರೆ ಉಡುಪಿಯನ್ನು ಅಭಿವೃದ್ಧಿ ಮಾಡಿದ್ದು ಮಾತ್ರ ಅಷ್ಟಕಷ್ಟೆಯಾಗಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications