ಉಡುಪಿಯಲ್ಲಿ ಪೇಜಾವರ ಶ್ರೀ - ಸಾಕ್ಷಿ ಮಹಾರಾಜ್ 'ರಾಮ ಮಂದಿರ' ಚರ್ಚೆ
ಉಡುಪಿ, ಜೂನ್ 27: ಸಂಸದ ಸಾಕ್ಷಿ ಮಹಾರಾಜ್ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣದ ಕುರಿತು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳ ಜತೆ ಚರ್ಚೆ ನಡೆಸಿದ್ದಾರೆ. ಆದರೆ, ಅವರು 'ಹಿಂದಿಯಲ್ಲಿ ಮಾತನಾಡಿದ್ದರಿಂದ ಸ್ಪಷ್ಟವಾಗಿ ಅರ್ಥವಾಗಿಲ್ಲ' ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ಇನ್ನು ಉಡುಪಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿ ಪಡಿಸಲಾಗುವುದು ಎಂಬ ಸಾಕ್ಷಿ ಮಹರಾಜ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, "ನಮ್ಮ ಮೂರನೇ ಪರ್ಯಾಯ ನಡೆದಾಗ ಉಡುಪಿಯಲ್ಲಿ 'ಧಾರ್ಮಿಕ ಸಂಸತ್ತು' ನಡೆದಿತ್ತು. ಈ ವೇಳೆ ಕೀಲಿ ಕೈ ಒಡೆದು ರಾಮ ಮಂದಿರ ಪ್ರವೇಶಿಸುವ ನಿರ್ಧಾರ ಮಾಡಲಾಗಿತ್ತು. ಆದರೆ ರಾಜೀವ್ ಗಾಂಧಿ ಮಂದಿರದ ಕೀಲಿ ಕೈ ತೆಗೆಸಿದ್ದರು.
ಎಲ್ಲರೂ ಅಂದು ರಾಮನ ದರ್ಶನ ಮಾಡಿದ್ದರು," ಎಂದು ಹಳೆಯ ದಿನಗಳನ್ನು ನೆನಪಿಸಿಕೊಂಡರು.

'ಈ ಬಾರಿಯ ಸಮಾವೇಶದಲ್ಲಿ ರಾಮಮಂದಿರಕ್ಕೆ ಮುಹೂರ್ತ ನಿಗದಿಯಾಗಬಹುದು ಎಂದು ಮಹಾರಾಜ್ ಹೇಳಿರಬಹುದು. ಆದರೆ, ಅವರು ಒಬ್ಬರೇ ನಿರ್ಣಯ ಕೊಡುವವರಲ್ಲ. ಸಮಿತಿಯಲ್ಲಿ
ಈ ಬಗ್ಗೆ ಮೊದಲು ತೀರ್ಮಾನ ಆಗಬೇಕು. ಯಾವುದೂ ಸ್ಪಷ್ಟವಾಗದೆ ನಾನು ಈ ಬಗ್ಗೆ ಈಗೇನೂ ಹೇಳಲಾರೆ," ಎಂದು ಪೇಜಾವರ ಶ್ರೀಗಳು ಸ್ಪಷ್ಟಪಡಿಸಿದ್ದಾರೆ.

"ರಾಮ ಮಂದಿರ ನಿರ್ಮಾಣದ ಬಗ್ಗೆ ಸಂವಿಧಾನ, ಕಾನೂನು , ರಾಜ್ಯಸಭೆ, ಲೋಕಸಭೆಯಲ್ಲಿ ತೀರ್ಮಾನವಾಗಬೇಕು . ನವೆಂಬರ್ ತಿಂಗಳಲ್ಲಿ ವಿಶ್ವ ಸಂತ ಸಮ್ಮೇಳನವನ್ನು ಉಡುಪಿಯಲ್ಲಿ ನಡೆಸುವ ಅಪೇಕ್ಷೆಯಿದೆ. ಇಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಚರ್ಚೆ ನಡೆಯಬಹುದು," ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications