"ಉಪ ಚುನಾವಣೆಯಲ್ಲಿ ಡಿ.ಕೆ ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ''
ಉಡುಪಿ, ಅಕ್ಟೋಬರ್ 11: ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಹೆಚ್.ಕುಸುಮ ಸ್ಪರ್ಧೆಯ ವಿಚಾರವಾಗಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಉಪ ಚುನಾವಣೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ಡಿ.ಕೆ ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿ.ಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ದರು, ಇಂದು ಅವರು ನಮ್ಮ ಜೊತೆಗಿಲ್ಲ ಎಂದರು.
ಡಿ.ಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆಯದಾಗುವುದಿಲ್ಲ, ಡಿ.ಕೆ ರವಿ ಬದುಕಿದ್ದಾಗ ಕುಸುಮಾ ಅವರ ಕುಟುಂಬ ಏನು ಮಾಡಿತ್ತು? ಡಿ.ಕೆ ರವಿಯ ಮಾವ ಏನು ಮಾಡಿದರು? ಡಿ.ಕೆ ರವಿ ತೀರಿಕೊಂಡ ತಕ್ಷಣ ಕುಸುಮಾ ಅವರು ಎಲ್ಲಿಗೆ ಹೋದರು? ಯಾಕೆ ಹೋದರು? ಇದೆಲ್ಲವೂ ಚರ್ಚೆಯಾಗುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಹೆಚ್.ಕುಸುಮಾ ಅವರಿಗೆ ತಿರುಗೇಟು ನೀಡಿದರು.

ಡಿ.ಕೆ ರವಿ ಅವರ ತಂದೆ-ತಾಯಿಗೆ ಆದ ಅವಮಾನ
ಈ ಎಲ್ಲ ಬೆಳವಣಿಗೆಗೋಸ್ಕರ ರಾಜರಾಜೇಶ್ವರಿನಗರ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಕುಸುಮಾ ಅವರು ರವಿ ಹೆಸರು ಪ್ರಸ್ತಾಪಿಸದೆ ಇರುವುದು ಒಳ್ಳೆಯದು. ರವಿ ಬಗ್ಗೆ, ಅವರ ಪತ್ನಿಯ ಬಗ್ಗೆ ಚರ್ಚೆ ಮಾಡುವ ಅಗತ್ಯ ಇಲ್ಲವೆಂದು ತಿಳಿಸಿದರು.
ಡಿ.ಕೆ ರವಿ ಸಾವಿನ ನಂತರ ಅವರ ತಂದೆ-ತಾಯಿಗೆ ಆದ ಅವಮಾನ, ಅವರ ಕೆಟ್ಟ ಪರಿಸ್ಥಿತಿ ಎಲ್ಲವೂ ಚರ್ಚೆಯ ವಿಷಯವಾಗಿದೆ. ಚುನಾವಣಾ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪ ಆಗುವುದು ಒಳ್ಳೆಯದಲ್ಲ. ಒಂದು ವೇಳೆ ಅವಳು ಚರ್ಚೆ ತೆಗೆದರೆ ನಮ್ಮಲ್ಲೂ ಚರ್ಚೆಗೆ ಸಾಕಷ್ಟು ವಿಚಾರ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಕೆ ನೀಡಿದರು.

ಬಿಜೆಪಿ ಸರಕಾರಕ್ಕೆ ಮುಜುಗರ ಮಾಡುವ ಷಡ್ಯಂತ್ರ
ಇದೇ ಸಂದರ್ಭದಲ್ಲಿ ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯ ಅತ್ಯಾಚಾರ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸಂಸದೆ ಶೋಭಾ ಕೆರಂದ್ಲಾಜೆ, ""ಉತ್ತರಪ್ರದೇಶ ಘಟನೆ ಒಂದು ವ್ಯವಸ್ಥಿತ ಷಡ್ಯಂತ್ರ, ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ಸರಕಾರಕ್ಕೆ ಮುಜುಗರ ಮಾಡುವ ಷಡ್ಯಂತ್ರವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಮಗ್ರವಾದ ತನಿಖೆಯಾಗಲಿ
ಈ ಘಟನೆಯ ಹಿಂದೆ ಪಿಎಫ್ಐ ಮತ್ತು ಎಸ್.ಡಿ.ಪಿ.ಐ ಕೈವಾಡ ಇದೆ, ಈ ಬಗ್ಗೆ ಹೆಚ್ಚಿನ ಮಾಹಿತಿ ನಾನು ಹೇಳುವುದಿಲ್ಲ, ಈ ಎರಡು ಸಂಘಟನೆಗಳು ವ್ಯವಸ್ಥಿತ ಜಾಲ ಹೆಣೆದಿವೆ ಎಂದು ಆರೋಪಿಸಿದರು. ಈ ಘಟನೆಯ ಬಗ್ಗೆ ಸಮಗ್ರವಾದ ತನಿಖೆಯಾಗಲಿ, ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆಯಾಗಬೇಕು. ಅತ್ಯಾಚಾರ ಮಾಡಿದವರಿಗೆ ಹಿಂದೂ-ಮುಸ್ಲಿಂ-ಕ್ರೈಸ್ತ ಅನ್ನುವಂಥ ಭೇದ ಇಲ್ಲ. ಇದೊಂದು ಮಾನಸಿಕತೆಯ ವಿಚಾರವಾಗಿದೆ ಎಂದು ತಿಳಿಸಿದರು.

ನಿಷೇಧ ಮಾಡುವುದಕ್ಕೆ ಸಾಕಷ್ಟು ಸಾಕ್ಷಿಗಳಿವೆ
ಅತ್ಯಾಚಾರ ವಿಷಯದಲ್ಲಿ ಪಿಎಫ್ಐ ಮತ್ತು ಎಸ್.ಡಿ.ಪಿ.ಐ ಕುಮ್ಮಕ್ಕು ಇದೆ ಅಂತಾದರೆ ಎನ್ಐಎ ಯಿಂದ ತನಿಖೆಯಾಗಬೇಕು, ಎರಡು ಸಂಘಟನೆಗಳನ್ನು ನಿಷೇಧ ಮಾಡುವುದಕ್ಕೆ ಸಾಕಷ್ಟು ಸಾಕ್ಷಿಗಳಿವೆ. ಭವಿಷ್ಯದ ದಿನಗಳಲ್ಲಿ ಈ ಸಂಘಟನೆಗಳು ನಿಷೇಧ ಆಗುತ್ತವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications