ಉಡುಪಿಯಲ್ಲಿ ಮುಂಬೈ ಹೋಟೆಲ್ ಮಾಲೀಕ ಕೊಲೆ!
ಉಡುಪಿ, ಫೆಬ್ರವರಿ 11: ನಿನ್ನೆ ಉಡುಪಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಕೊಲೆ ಮಾಡಿದ ಸ್ಥಿತಿಯಲ್ಲಿ ಸಿಕ್ಕಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಈ ವ್ಯಕ್ತಿ ಮೂಲತಃ ಉಡುಪಿಯವರೇ ಆಗಿದ್ದು ಮುಂಬೈಯಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು ಎಂದು ತಿಳಿದು ಬಂದಿದೆ.
ಉಡುಪಿ ಜಿಲ್ಲೆಯ ಬೆಳ್ಳಂಪಳ್ಳಿ ಗ್ರಾಮದ ಸಮೀಪ ಕುಕ್ಕೆಹಳ್ಳಿಯಲ್ಲಿ ನಿನ್ನೆ ಇವರ ಶವ ಪತ್ತೆಯಾಗಿತ್ತು. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ಕೊಲೆಯಾದವರನ್ನು ಮುಂಬೈಯ ಮಾಯಾ ಹೋಟೆಲ್ ನ ಮಾಲೀಕ ವಶಿಷ್ಠ ಯಾದವ್ ಎಂದು ಗುರುತಿಸಲಾಗಿದೆ. ಹಣಕಾಸಿನ ವಿಷಯದಲ್ಲಿ ಈ ಹಿಂದೆ ಸ್ನೇಹಿತರ ನಡುವೆ ಜಗಳ ನಡೆದಿತ್ತು. ಅದೇ ವಿಚಾರದಲ್ಲಿ ಹೋಟೆಲ್ ಮಾಲೀಕನನ್ನು ಮುಂಬೈಯಿಂದ ಊರಿಗೆ ಕರೆತಂದು ಸ್ನೇಹಿತರು ಸೇರಿ ಕೊಲೆ ಮಾಡಿರುವ ಬಗ್ಗೆ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಕೊಲೆಯಾದ ಹೊಟೇಲ್ ಮಾಲೀಕ ವಶಿಷ್ಠ ಯಾದವ್ ಹಣದ ವಿಚಾರದಲ್ಲಿ ಮೋಸಗಾರ ಎನ್ನುವ ಆರೋಪ ಇತ್ತು ಎನ್ನಲಾಗಿದೆ. ಹೋಟೆಲ್ ವ್ಯವಹಾರದಲ್ಲಿ ಅಡ್ವಾನ್ಸ್ ತೆಗೆದುಕೊಂಡ ಹಣವನ್ನು ವಾಪಸು ಕೊಡುತ್ತಿರಲಿಲ್ಲ, ಅದೇ ವಿಚಾರದಲ್ಲಿ ಕೆಲವರ ಬಳಿ ದ್ವೇಷ ಕಟ್ಟಿಕೊಂಡಿದ್ದ ಎನ್ನಲಾಗಿದೆ.

ಆ ವಿಚಾರಕ್ಕೆ ಕೊಲೆ ಆಗಿರಬಹುದು ಎಂದು ಸಂಶಯ ವ್ಯಕ್ತವಾಗಿದೆ. ಕೊಲೆ ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ಇದೊಂದು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಮಣಿಪಾಲ ಕೆಎಂಸಿಯ ಶವಗಾರದಲ್ಲಿ ಪೋಸ್ಟ್ ಮಾರ್ಟಂಗಾಗಿ ಶವವನ್ನು ಇರಿಸಲಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications