ಕುಂದಾಪುರ: ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭೋಗ್ ನಿಧನ
ಉಡುಪಿ, ಡಿಸೆಂಬರ್ 09: ಉಡುಪಿ ಹಾಗೂ ದಕ್ಷಿಣ ಕನ್ನಡ ಭಾಗದಲ್ಲಿ ಹೆಸರು ಮಾಡಿದ್ದ ರೂಪಕಲಾ ನಾಟಕ ತಂಡದ ಮೂರು ಮುತ್ತು ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ವಿಧಿವಶರಾಗಿದ್ದಾರೆ. ಕೆಲವು ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುಮಾರು ಇಪ್ಪತ್ತಾರು ವರ್ಷಗಳಿಂದ ಸಾವಿರಾರು ಬಾರಿ ಪ್ರದರ್ಶನ ಕಂಡ ರೂಪಕಲಾ ನಾಟಕ ತಂಡದ ಮೂರು ಮುತ್ತು ನಾಟಕದಲ್ಲಿ ಅಶೋಕ್ ಶಾನಭಾಗ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅಶೋಕ್ ಶಾನಭಾಗ್ ಅವರ ಮಾತು ಹಾಗೂ ನಟನೆ ಕಂಡು ನೋಡಗರು ಹೊಟ್ಟೆ ಹುಣ್ಣಾಗೊಸುವಷ್ಟು ನಗುತ್ತಿದ್ದರು.

ಮೂರು ಮುತ್ತು ನಾಟಕ ಮಾತ್ರವಲ್ಲದೇ ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇನ್ನು ಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಲ್ಲಿ ಅಶೋಕ್ ಶಾನಭಾಗ್ ನಟಿಸಿದ್ದರು. ಇನ್ನು ಕಿರುತೆರೆಯ ಜನಪ್ರಿಯ ಶೋ ಆಗಿದ್ದ ಸೃಜನ್ ಲೋಕೇಶ್ ನಡೆಸಿಕೊಡುತ್ತಿದ್ದ ಮಜಾ ಟಾಕೀಸ್ನಲ್ಲೂ ಅಶೋಕ್ ಶಾನಭಾಗ್ ಭಾಗವಹಿಸಿದ್ದರು.
ಕುಂದಾಪುರದ ಕಾಮಿಡಿ ಕಿಂಗ್ ಎಂದೇ ಪ್ರಸಿದ್ಧಿ ಪಡೆದ ಅಶೋಕ್ ಶಾನಭಾಗ್ ಅವರ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಹಾಸ್ಯ ನಟ ಅಶೋಕ್ ಶಾನಭಾಗ್ ಅವರ ಅಂತ್ಯಕ್ರಿಯೆ ಇಂದು(ಡಿಸೆಂಬರ್ 09) ಶನಿವಾರ ಕುಂದಾಪುರದಲ್ಲಿ ನಡೆಯಲಿದ್ದು, ಅಪಾರ ಅಭಿಮಾನಿಗಳು ಭಾಗಿಯಾಗುವ ಸಾಧ್ಯತೆ ಇದೆ.
ಮೂರು ಮುತ್ತು ನಾಟಕ
ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಜನಪ್ರಿಯತೆ ಪಡೆದ ನಾಟಕ ಮೂರು ಮತ್ತು. ಮೂರು ಮುತ್ತು ನಾಟಕ ಕಳೆದ 26 ವರ್ಷಗಳಿಂದ ಸುಮಾರು 1900 ಪ್ರದರ್ಶನ ಕಂಡಿದ್ದು, ಪ್ರತಿವರ್ಷ 50-60 ಪ್ರದರ್ಶನ ಕಾಣುತ್ತಿತ್ತು. ಕುಳ್ಳಪ್ಪು ಬಾಲಕೃಷ್ಣ ರೈ ಅವರ ಆಶಯದಂತೆ ಹುಟ್ಟಿಕೊಂಡ ರೂಪಕಲಾ ನಾಟಕ ತಂಡ ದ ಮೂರು ಮುತ್ತು ನಾಟಕದ ಕಲಾವಿದರು ಯಾವುದೇ ಅಶ್ಲೀಲತೆ ಇಲ್ಲದೇ, ಯಾರನ್ನೂ ನಿಂದಿಸದೇ ಜನರನ್ನು ರಂಜಿಸುತ್ತಿದ್ದರು. ಬಹುಬೇಡಿಕೆಯ ನಾಟಕವಾಗಿದ್ದ ಮೂರು ಮುತ್ತು ನಾಟಕದಲ್ಲಿ ಕಾಲಕ್ಕೆ ತಕ್ಕಂತೆ ಕೆಲವು ಬದಲಾವಣೆ ಮಾಡಿದ್ದರೂ ಸಹ ಹಾಸ್ಯದಲ್ಲಿ ಎಳ್ಳಷ್ಟು ಕಡಿಮೆಯಾಗದೇ ಜನರನ್ನು ರಂಜಿಸಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications