ಉಡುಪಿಯಲ್ಲಿ ಧರ್ಮ ಸಾಮರಸ್ಯ: ಮುಸ್ಲಿಂ ಕುಟುಂಬದಿಂದ ಅಮೃತೇಶ್ವರಿ ದೇವಸ್ಥಾನದಲ್ಲಿ ತುಲಾಭಾರ ಸೇವೆ
ಉಡುಪಿ, ಮಾರ್ಚ್ 18: ಕರಾವಳಿ ಪ್ರದೇಶ ಹಿಂದಿನಿಂದಲೂ ಧರ್ಮ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಇದಕ್ಕೆ ಕರಾವಳಿ ಜಿಲ್ಲೆಯಲ್ಲಿ ಸಾಕಷ್ಟು ನಿದರ್ಶನಗಳನ್ನು ನೀಡಬಹುದು.
ಆದರೆ ಇತ್ತೀಚೆಗೆ ಈ ಕೋಮು ಸಾಮರಸ್ಯ ಕ್ಷೀಣಿಸುತ್ತಾ ಹೋಗುತ್ತಿದೆ ಎನ್ನದೆ ವಿಧಿಯಿಲ್ಲ. ಈ ಮಧ್ಯೆ ಉಡುಪಿ ಜಿಲ್ಲೆಯ ಕೋಟದ ದೇವಸ್ಥಾನದಲ್ಲಿ ಮುಸ್ಲಿಂ ಕುಟುಂಬವೊಂದು ದೇವಸ್ಥಾನದಲ್ಲಿ ತುಲಾಭಾರ ಸೇವೆ ಸಲ್ಲಿಸಿ ಸುದ್ದಿಯಲ್ಲಿದೆ.
ಉಡುಪಿ ಜಿಲ್ಲೆಯ ಕೋಟದ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ಕುಟುಂಬವೊಂದು ತುಲಾಭಾರ ಸೇವೆ ಮಾಡಿಸುವ ಮೂಲಕ ಹರಕೆ ಸಲ್ಲಿಸಿತು. ಕೋಟದ ಅಮೃತೇಶ್ವರಿ ದೇವಾಲಯವು ಈ ಭಾಗದ ಶಕ್ತಿ ಕ್ಷೇತ್ರವಾಗಿದ್ದು, ಸಾವಿರಾರು ಭಕ್ತರು ದೇವಳಕ್ಕೆ ಭೇಟಿ ನೀಡುತ್ತಾರೆ.

ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕಿನ ಕೋಟದ ಹಲವು ಮಕ್ಕಳ ತಾಯಿ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ಕುಟುಂಬ ಹರಕೆ ಹೊತ್ತಿದ್ದರು. ಸದ್ಯ ಹರಕೆ ತೀರಿಸುವ ಸಲುವಾಗಿ ದೇವಸ್ಥಾನದಲ್ಲಿ ತುಲಾಭಾರ ಸೇವೆ ನೀಡಿದ್ದಾರೆ.
Recommended Video
ಹೈ ಕಮಾಂಡ್ ಅವಕಾಶ ಕೊಟ್ಟರೆ ನಾನು ಸ್ಪರ್ಧೆ ಮಾಡ್ತೀನಿ | Sathish Jarakiholi | Oneindia Kannada












Click it and Unblock the Notifications