ಮಸೀದಿ ಜಾಗ ವಾಪಸ್ ಪಡೆದ ಸರ್ಕಾರ: ಮುಸ್ಲಿಂ ಸಂಘಟನೆಗಳಿಂದ ತೀವ್ರ ವಿರೋಧ
ಉಡುಪಿ, ಜೂನ್ 28: ಉಡುಪಿ ಸಮೀಪದ ಕೊಡವೂರು ಎಂಬಲ್ಲಿ ಕಲ್ಮತ್ ಮಸೀದಿಗೆ ಈ ಹಿಂದೆ ಮಂಜೂರಾಗಿದ್ದ ಜಾಗವನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದುಕೊಂಡಿದೆ. ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಜಾಗ ವಾಪಸ್ ಪಡೆಯಲಾಗಿದೆ ಎಂದು ಉಡುಪಿ ಶಾಸಕರು ಹೇಳುತ್ತಿದ್ದಾರೆ. ಸರಕಾರದ ಈ ನಿರ್ಧಾರದ ಬಗ್ಗೆ ಜಿಲ್ಲೆಯ ವಿವಿಧ ಮುಸ್ಲಿಂ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿದ್ದವು. "ಬಿಜೆಪಿ ಸರ್ಕಾರ ಒಂದು ಸಮುದಾಯವನ್ನು ಮೆಚ್ಚಿಸಲು ಮಸೀದಿ ಜಾಗವನ್ನು ವಾಪಸ್ ಪಡೆದಿದೆ. ಹಲವು ವರ್ಷಗಳಿಂದ ಈ ಸ್ಥಳದಲ್ಲಿ ಮಸೀದಿ ಕಾರ್ಯಾಚರಣೆ ಮಾಡುತ್ತಿದ್ದು, ಸರಕಾರ ಹಿಂಪಡೆದದ್ದು ಖಂಡನೀಯ. ಇದರ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು,'' ಎಂದು ಪ್ರತಿಭಟನಾನಿರತ ಮುಸ್ಲಿಂ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಜಿಲ್ಲಾ ಮುಸ್ಲಿಂ ಒಕ್ಕೂಟ ಸುದ್ದಿಗೋಷ್ಠಿ ನಡೆಸಿ, "ಸರಕಾರದ ಕ್ರಮವನ್ನು ಖಂಡಿಸಿದೆ. ಉಡುಪಿ ತಾಲೂಕು ಕೊಡವೂರು ಗ್ರಾಮದ ಕಲ್ಮತ್ ಮಸೀದಿಯ ಸ್ಥಿರಾಸ್ತಿಯ ಪಹಣಿ ಪತ್ರದಲ್ಲಿ ಮಸೀದಿಯ ಹೆಸರು ಕಾನೂನು ಬದ್ಧವಾಗಿ ನೋಂದಣಿಗೊಂಡಿದೆ. ಅದನ್ನು ಕಾನೂನುಬಾಹಿರವಾಗಿ ಕಂದಾಯ ಸಚಿವ ಆರ್.ಅಶೋಕ್ ತೆರವುಗೊಳಿಸಿ ಆದೇಶ ಹೊರಡಿಸಿರುವುದು ಖಂಡನೀಯ,'' ಎಂದು ಮುಸ್ಲಿಂ ಒಕ್ಕೂಟ ಹೇಳಿದೆ.

ಸೋಮವಾರ ಉಡುಪಿಯ ಪ್ರೆಸ್ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಮುಸ್ಲಿಂ ಒಕ್ಕೂಟದ ಮುಖಂಡರು, ಜಿಲ್ಲಾಧಿಕಾರಿಗಳ ಪತ್ರದ ಆಧಾರದ ಮೇಲೆ ಯಾವುದೇ ರೀತಿಯ ನಿಯಮಗಳನ್ನು ಪಾಲಿಸದೆ ಏಕಾಏಕಿಯಾಗಿ ಕಂದಾಯ ಸಚಿವ ಆರ್. ಅಶೋಕ್ ಆದೇಶ ಹೊರಡಿಸಿದ್ದಾರೆ. ಸದರಿ ಮಸೀದಿಯ ಸ್ಥಿರಾಸ್ತಿಯ ಪಹಣಿ ಪತ್ರವನ್ನು ಯಾವುದೇ ಕಾನೂನು ಪ್ರಕ್ರಿಯೆ ಪೂರೈಸದೆ, ಮಸೀದಿಯ ಹೆಸರನ್ನು ತೆಗೆದು 'ಸರಕಾರ' ಎಂದು ನಮೂದಿಸಲಾಗಿದೆ,'' ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

"ವಕ್ಫ್ ಆಸ್ತಿಯನ್ನು ನೆಲದ ಕಾನೂನಿನ ಪ್ರಕಾರ ರಕ್ಷಿಸಬೇಕಾದ ಜಿಲ್ಲಾಧಿಕಾರಿ, ಶಾಸಕರು ಒಳಗೊಂಡಂತೆ ಉಡುಪಿ ಜಿಲ್ಲಾಡಳಿತವು ಪಕ್ಷಪಾತ ಪೂರ್ಣವಾಗಿ ವರ್ತಿಸಿ ಕಲ್ಮತ್ ಮಸೀದಿಯ ನ್ಯಾಯಬದ್ಧ ಹಕ್ಕಿಗೆ ವಿರುದ್ಧವಾದ ಪ್ರಕ್ರಿಯೆ ನಡೆಸಿದೆ. ಈ ಮೂಲಕ ಕಂದಾಯ ಸಚಿವರ ಮೇಲೆ ಪ್ರಭಾವ ಬೀರಿ ಅನ್ಯಾಯ ಪೂರ್ಣ ನಿರ್ಣಯ ಕೈಗೊಂಡಿದೆ.''

"ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಅನ್ಯಾಯ ಧೋರಣೆಯನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡಿಸುತ್ತದೆ ಮತ್ತು ಈ ಹಿಂದಿನಂತೆ ನ್ಯಾಯಪೂರ್ಣವಾಗಿ ಮಸೀದಿ ಮತ್ತು ಮಸೀದಿಯ ಶ್ರದ್ಧಾಳುಗಳ ನ್ಯಾಯಪೂರ್ಣ ಹಕ್ಕಿನ ಪುನರ್ ಸ್ಥಾಪನೆಗೆ ಒತ್ತಾಯಿಸುತ್ತದೆ,'' ಎಂದು ಮುಸ್ಲಿಂ ಮುಖಂಡರು ಆಗ್ರಹಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications