ಮುಸ್ಲಿಂ ಮುಖಂಡರ ನೇತೃತ್ವದಲ್ಲಿ ಹಿಂದೂ ಯುವತಿಯ ಮಾದರಿ ಮದುವೆ
ಉಡುಪಿ, ಆಗಸ್ಟ್ 26 : ಹೆತ್ತವರನ್ನು ಕಳೆದುಕೊಂಡು ಅನಾಥೆ ಆಗಿದ್ದ ಹಿಂದೂ ಯುವತಿಗೆ ಮದುವೆ ಮಾಡಿಸಲು ಎಲ್ಲ ಧರ್ಮದವರೂ ಒಂದಾದ ಘಟನೆಯಿದು. ಉಡುಪಿಯ ಮಳ್ಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಸಾದಿಕ್ ಈ ಮದುವೆಯ ನೇತೃತ್ವ ವಹಿಸಿದ್ದು, ಇವರೊಂದಿಗೆ ಸರ್ವಧರ್ಮೀಯರು ಸಾಥ್ ನೀಡುವ ಮೂಲಕ ಮಾದರಿ ಮದುವೆ ಸಮಾರಂಭ ಸೌಹಾರ್ದತೆಗೆ ಸಾಕ್ಷಿಯಾಗಿದೆ.
ಕಾಪು ಫಕೀರ್ಣಕಟ್ಟೆಯ ಜನತಾಕಾಲೋನಿ ನಿವಾಸಿಯಾದ ದಿವ್ಯಾ ಬಾಲ್ಯದಲ್ಲೇ ತನ್ನ ಹೆತ್ತವರನ್ನು ಕಳೆದುಕೊಂಡು ದೊಡ್ಡಮ್ಮ ಮೋಹಿನಿ ಅವರ ಆರೈಕೆಯಲ್ಲಿ ಬೆಳೆದಿದ್ದರು. ದಿವ್ಯಾ ಅವರಿಗೆ ವರನನ್ನು ಹುಡುಕುವ ಪ್ರಯತ್ನದಲ್ಲಿದ್ದರೂ ಬಡತನದ ಕಾರಣ ಹಿನ್ನಡೆಯಾಗಿತ್ತು.

ಈ ಸಂದರ್ಭದಲ್ಲಿ ಮೋಹಿನಿಯವರ ನೆರೆಕೆರೆಯ ನಿವಾಸಿ ಕೈರುನ್ನೀಸಾ ಉಚ್ಚಿಲ ಸಮೀಪದ ಪಣಿಯೂರಿನ ಮಂಜುನಾಥ ಎಂಬ ಹುಡುಗನ ನೆಂಟಸ್ತಿಕೆಯನ್ನು ತಂದಿದ್ದರು. ಮದುವೆಗೆ ದಿನ ನಿಗದಿ ಪಡಿಸಲಾಯಿತು.
ದೊಡ್ಡಮ್ಮ ಇತರರರಿಗೆ ದಿವ್ಯಾಳ ಮದುವೆಯನ್ನು ಅದ್ಧೂರಿಯಾಗಿ ನಡೆಸಬೇಕು ಅನ್ನೋ ಇಸೆ ಇದ್ದರೂ ಬಡತನದ ಕಾರಣದಿಂದ ಅದು ಸಾಧ್ಯವಿಲ್ಲ ಎಂದಾಯಿತು. ಈ ಕುಟುಂಬಕ್ಕೆ ಸ್ಪಂದಿಸಿದ ಮೊಹ್ಮಮದ್ ಸಾದಿಕ್ ದಿನಾರ್ ಮದುವೆಯ ಔತಣಕೂಟವನ್ನು ತನ್ನ ಮನೆಯಲ್ಲೇ, ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ ಎಂದು ಭರವಸೆ ನೀಡಿದರು.
ಗುರುವಾರ ಬೆಳಗ್ಗೆ ಕಟೀಲು ದುರ್ಗಾ ಪರಮೇಶ್ವರೀ ದೇವಳದಲ್ಲಿ ಮದುವೆ ಆಯಿತು. ಮಧ್ಯಾಹ್ನ ಕಳತ್ತೂರು ಶೇಖರ ಶೆಟ್ಟಿ ಸಭಾಂಗಣದಲ್ಲಿ ಸಂಭ್ರಮದ ಔತಣಕೂಟ ನಡೆಯಿತು. ಇದರಲ್ಲಿ ಶಾಕಾಹಾರಿ ಮತ್ತು ಮಾಂಸಾಹಾರಿ ಎರಡೂ ವಿಧದ ಭೋಜನ ವ್ಯವಸ್ಥೆ ಮಾಡಲಾಗಿತ್ತು.
ಶಾಸಕ ವಿನಯಕುಮಾರ್ ಸೊರಕೆ, ಕಾಪು ಪುರಸಭಾ ಮುಖ್ಯಧಿಕಾರಿ ರಾಯಪ್ಪ, ಬಿಜೆಪಿ ಮುಖಂಡರಾದ ಅರುಣ್ ಶೆಟ್ಟಿ ಪಾದೂರು ಭಾಗವಹಿಸಿದ್ದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications