ಮೋದಿಯನ್ನು ಬಿಟ್ಟು ನಾನಿಲ್ಲ..ನಾಳೆಯಿಂದ ನಾನು ಮತ್ತೆ ಬಿಜೆಪಿ ಕಾರ್ಯಕರ್ತ- ರಘುಪತಿ ಭಟ್
ಉಡುಪಿ, ಜೂನ್ 03: ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ನನಗೆ ಗೆಲುವಿನ ವಿಶ್ವಾಸವಿದೆ. ಮತದಾರರು ನನಗೆ ಮತ ಹಾಕಲು ನಿಶ್ಚಯ ಮಾಡಿದ್ದಾರೆ. ಮತದಾರರ ಮನಸ್ಸಿಗೆ ದೇವರು ಬುದ್ಧಿ ಕೊಡಬೇಕು. ನಿನ್ನೆಯವರೆಗೆ ಶತ ಪ್ರಯತ್ನ ಮಾಡಿದ್ದೇವೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆಲ್ಲಬೇಕು ಎಂದು ನಾವು ಕೂಡ ಬಯಸುತ್ತೇವೆ. ನಾನು ಕೂಡ ಮೋದಿಯ ಗೆಲುವಿನ ಮೂಡ್ನಲ್ಲಿ ಇದ್ದೇನೆ. ನಾನು ಮೋದಿಯನ್ನು ಬಿಟ್ಟು ಇಲ್ಲ. ಈ ಚುನಾವಣೆಯೇ ಬೇರೆ ಲೋಕಸಭಾ ಚುನಾವಣೆಯೇ ಬೇರೆ ಎಂದರು.

ಇನ್ನು ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಲ್ಲಾ ಮನೆಗಳಿಗೆ 2,000 ಹಂಚಿದ್ದಾರೆ. ಉಡುಪಿ ಭಾಗದಲ್ಲಿ ಕೊಟ್ಟಿಲ್ಲ ಆದರೆ ಶಿವಮೊಗ್ಗ ಭಾಗದಲ್ಲಿ ಹಂಚಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಹಣ ಹಂಚಿದ್ದಾರೆ. ಪದವೀಧರ ಕ್ಷೇತ್ರದಲ್ಲಿ ಮೊದಲ ಬಾರಿ ಹಣ ಹಂಚಿಕೆ ನಡೆದಿದೆ ಎಂದರು.
ನೈರುತ್ಯ ಪದವೀಧರ ಕ್ಷೇತ್ರದ ಇತಿಹಾಸದಲ್ಲಿ ಇದೇ ಮೊದಲು. ಇಷ್ಟರವರೆಗೆ ಕಾಂಗ್ರೆಸ್ ಹಣ ಹಂಚಿಲ್ಲ ಈ ಬಾರಿಯೂ ಹಂಚಿಲ್ಲ. ಪದವೀಧರ ಕ್ಷೇತ್ರದಲ್ಲೂ ಹಣಕೊಟ್ಟು ಓಟು ಪಡೆಯುವ ಪರಿಸ್ಥಿತಿ ಬಂದಿದೆ. ಪರಿವಾರದ ಹಿರಿಯರು ಇದನ್ನು ಗಮನಿಸಬೇಕು. ವಿಧಾನ ಪರಿಷತ್ ಚುನಾವಣೆಗೆ ಕವರ್ ಹಂಚುವ ಸಂಸ್ಕೃತಿ ಇರಲಿಲ್ಲ. ಶಿವಮೊಗ್ಗ ಚುನಾವಣೆಯಲ್ಲಿ ಮಾಡಿದ್ದಾರೆ ಅದು ನನಗೆ ಗೊತ್ತು.ತುಂಬಾ ಜನ ಕರೆ ಮಾಡಿ ನನಗೆ ಹೇಳಿದ್ದಾರೆ. ಹಣ ಅವರಿಂದ ತೆಗೆದುಕೊಂಡಿದ್ದೇವೆ ಮತ ನಿಮಗೆ ಹಾಕುತ್ತೇವೆ ಎಂದಿದ್ದಾರೆ ಎಂದು ರಘುಪತಿ ಭಟ್ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಳಿ ಹಣ ಇದೆ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಹಣ ಕೊಟ್ಟು ವೋಟು ಪಡೆದುಕೊಳ್ಳಬಹುದು ಅನ್ನೋದು ಸುಳ್ಳು ಅದು ಈ ಚುನಾವಣೆಯಲ್ಲಿ ಸಾಬೀತಾಗುತ್ತದೆ. ಮಾಧ್ಯಮದ ಹೆಸರಿನಲ್ಲಿ ಫೇಕ್ ವಿಡಿಯೋ ಹೊರಬಿಟ್ಟಿದ್ದಾರೆ. ರಘುಪತಿ ಭಟ್ ಕಣದಿಂದ ಹಿಂದಕ್ಕೆ ಸರಿದಿರುದಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.
ಬಿಜೆಪಿಯಲ್ಲಿ ಇರುವವರೆಲ್ಲ ನಮ್ಮವರೇ. ಪಕ್ಷಕ್ಕಾಗಿ ಅಲ್ಲಿ ಇರ್ತಾರೆ , ಆದರೆ ನನ್ನನ್ನು ಬೆಂಬಲಿಸುತ್ತಾರೆ. ಬಿಜೆಪಿಯಲ್ಲಿದ್ದೇ ನನಗೆ ಸಹಾಯ ಮಾಡುವವರು ಅನೇಕ ಮಂದಿ ಇದ್ದಾರೆ. ನಾಳೆಯಿಂದ ನಾನು ಮತ್ತೆ ಬಿಜೆಪಿಯ ಸಕ್ರಿಯ ಕಾರ್ಯಕರ್ತ. ನಾಳೆ ನಾನು ಕೂಡ ವಿಜಯೋತ್ಸವ ಆಚರಿಸುತ್ತೇನೆ. ಯಾವತ್ತು ನಾನು ಕೌಂಟಿಂಗ್ ಏಜೆಂಟಾಗಿ ಇರುತ್ತಿದ್ದೆ. ಈ ಬಾರಿ ನನ್ನ ಏಜೆಂಟ್ ಮಾಡಿಲ್ಲ ಅಷ್ಟೇ. ಮೋದಿ ಅತಿ ಹೆಚ್ಚು ಬಹುಮತದಲ್ಲಿ ಗೆಲ್ಲಬೇಕು ಎನ್ನುವುದು ನನ್ನ ಆಸೆ. ಉಡುಪಿಯಲ್ಲಿ ಕೋಟ ಮಂಗಳೂರಿನಲ್ಲಿ ಚೌಟ ಗೆಲ್ಲಬೇಕು. ಬಿಜೆಪಿ ಎಲ್ಲಾ 28 ಸ್ಥಾನ ಗೆಲ್ಲಬೇಕು ಎಂದು ನಾನು ಹಾರೈಸುತ್ತೇನೆ ಎಂದಿದ್ದಾರೆ.
-
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್












Click it and Unblock the Notifications