ಮೋದಿಯನ್ನು ಬಿಟ್ಟು ನಾನಿಲ್ಲ..ನಾಳೆಯಿಂದ ನಾನು ಮತ್ತೆ ಬಿಜೆಪಿ ಕಾರ್ಯಕರ್ತ- ರಘುಪತಿ ಭಟ್
ಉಡುಪಿ, ಜೂನ್ 03: ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ನನಗೆ ಗೆಲುವಿನ ವಿಶ್ವಾಸವಿದೆ. ಮತದಾರರು ನನಗೆ ಮತ ಹಾಕಲು ನಿಶ್ಚಯ ಮಾಡಿದ್ದಾರೆ. ಮತದಾರರ ಮನಸ್ಸಿಗೆ ದೇವರು ಬುದ್ಧಿ ಕೊಡಬೇಕು. ನಿನ್ನೆಯವರೆಗೆ ಶತ ಪ್ರಯತ್ನ ಮಾಡಿದ್ದೇವೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆಲ್ಲಬೇಕು ಎಂದು ನಾವು ಕೂಡ ಬಯಸುತ್ತೇವೆ. ನಾನು ಕೂಡ ಮೋದಿಯ ಗೆಲುವಿನ ಮೂಡ್ನಲ್ಲಿ ಇದ್ದೇನೆ. ನಾನು ಮೋದಿಯನ್ನು ಬಿಟ್ಟು ಇಲ್ಲ. ಈ ಚುನಾವಣೆಯೇ ಬೇರೆ ಲೋಕಸಭಾ ಚುನಾವಣೆಯೇ ಬೇರೆ ಎಂದರು.

ಇನ್ನು ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಲ್ಲಾ ಮನೆಗಳಿಗೆ 2,000 ಹಂಚಿದ್ದಾರೆ. ಉಡುಪಿ ಭಾಗದಲ್ಲಿ ಕೊಟ್ಟಿಲ್ಲ ಆದರೆ ಶಿವಮೊಗ್ಗ ಭಾಗದಲ್ಲಿ ಹಂಚಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಹಣ ಹಂಚಿದ್ದಾರೆ. ಪದವೀಧರ ಕ್ಷೇತ್ರದಲ್ಲಿ ಮೊದಲ ಬಾರಿ ಹಣ ಹಂಚಿಕೆ ನಡೆದಿದೆ ಎಂದರು.
ನೈರುತ್ಯ ಪದವೀಧರ ಕ್ಷೇತ್ರದ ಇತಿಹಾಸದಲ್ಲಿ ಇದೇ ಮೊದಲು. ಇಷ್ಟರವರೆಗೆ ಕಾಂಗ್ರೆಸ್ ಹಣ ಹಂಚಿಲ್ಲ ಈ ಬಾರಿಯೂ ಹಂಚಿಲ್ಲ. ಪದವೀಧರ ಕ್ಷೇತ್ರದಲ್ಲೂ ಹಣಕೊಟ್ಟು ಓಟು ಪಡೆಯುವ ಪರಿಸ್ಥಿತಿ ಬಂದಿದೆ. ಪರಿವಾರದ ಹಿರಿಯರು ಇದನ್ನು ಗಮನಿಸಬೇಕು. ವಿಧಾನ ಪರಿಷತ್ ಚುನಾವಣೆಗೆ ಕವರ್ ಹಂಚುವ ಸಂಸ್ಕೃತಿ ಇರಲಿಲ್ಲ. ಶಿವಮೊಗ್ಗ ಚುನಾವಣೆಯಲ್ಲಿ ಮಾಡಿದ್ದಾರೆ ಅದು ನನಗೆ ಗೊತ್ತು.ತುಂಬಾ ಜನ ಕರೆ ಮಾಡಿ ನನಗೆ ಹೇಳಿದ್ದಾರೆ. ಹಣ ಅವರಿಂದ ತೆಗೆದುಕೊಂಡಿದ್ದೇವೆ ಮತ ನಿಮಗೆ ಹಾಕುತ್ತೇವೆ ಎಂದಿದ್ದಾರೆ ಎಂದು ರಘುಪತಿ ಭಟ್ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಳಿ ಹಣ ಇದೆ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಹಣ ಕೊಟ್ಟು ವೋಟು ಪಡೆದುಕೊಳ್ಳಬಹುದು ಅನ್ನೋದು ಸುಳ್ಳು ಅದು ಈ ಚುನಾವಣೆಯಲ್ಲಿ ಸಾಬೀತಾಗುತ್ತದೆ. ಮಾಧ್ಯಮದ ಹೆಸರಿನಲ್ಲಿ ಫೇಕ್ ವಿಡಿಯೋ ಹೊರಬಿಟ್ಟಿದ್ದಾರೆ. ರಘುಪತಿ ಭಟ್ ಕಣದಿಂದ ಹಿಂದಕ್ಕೆ ಸರಿದಿರುದಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.
ಬಿಜೆಪಿಯಲ್ಲಿ ಇರುವವರೆಲ್ಲ ನಮ್ಮವರೇ. ಪಕ್ಷಕ್ಕಾಗಿ ಅಲ್ಲಿ ಇರ್ತಾರೆ , ಆದರೆ ನನ್ನನ್ನು ಬೆಂಬಲಿಸುತ್ತಾರೆ. ಬಿಜೆಪಿಯಲ್ಲಿದ್ದೇ ನನಗೆ ಸಹಾಯ ಮಾಡುವವರು ಅನೇಕ ಮಂದಿ ಇದ್ದಾರೆ. ನಾಳೆಯಿಂದ ನಾನು ಮತ್ತೆ ಬಿಜೆಪಿಯ ಸಕ್ರಿಯ ಕಾರ್ಯಕರ್ತ. ನಾಳೆ ನಾನು ಕೂಡ ವಿಜಯೋತ್ಸವ ಆಚರಿಸುತ್ತೇನೆ. ಯಾವತ್ತು ನಾನು ಕೌಂಟಿಂಗ್ ಏಜೆಂಟಾಗಿ ಇರುತ್ತಿದ್ದೆ. ಈ ಬಾರಿ ನನ್ನ ಏಜೆಂಟ್ ಮಾಡಿಲ್ಲ ಅಷ್ಟೇ. ಮೋದಿ ಅತಿ ಹೆಚ್ಚು ಬಹುಮತದಲ್ಲಿ ಗೆಲ್ಲಬೇಕು ಎನ್ನುವುದು ನನ್ನ ಆಸೆ. ಉಡುಪಿಯಲ್ಲಿ ಕೋಟ ಮಂಗಳೂರಿನಲ್ಲಿ ಚೌಟ ಗೆಲ್ಲಬೇಕು. ಬಿಜೆಪಿ ಎಲ್ಲಾ 28 ಸ್ಥಾನ ಗೆಲ್ಲಬೇಕು ಎಂದು ನಾನು ಹಾರೈಸುತ್ತೇನೆ ಎಂದಿದ್ದಾರೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications