ಉಡುಪಿ; ರಸ್ತೆಗೆ ನಾಥುರಾಂ ಗೋಡ್ಸೆ ಹೆಸರು, ಬೋರ್ಡ್ ತೆರವು
ಉಡುಪಿ, ಜೂನ್ 6: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿದ ನಾಥುರಾಂ ಗೋಡ್ಸೆಯ ಹೆಸರನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮಪಂಚಾಯತಿಯ ಒಂದು ರಸ್ತೆಗೆ ಇಡಲಾಗಿತ್ತು. ಫೊಟೋ ವೈರಲ್ ಆಗುತ್ತಿದ್ದಂತೆ ಬೋರ್ಡ್ ತೆರವು ಮಾಡಲಾಗಿದೆ.
ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತಿ ಪಡುಗಿರಿ ರಸ್ತೆಯ ನಾಮಫಲಕದಲ್ಲಿ ನಾಥುರಾಂ ಗೋಡ್ಸೆ ರಸ್ತೆ ಅಂತ ಹೆಸರನ್ನು ಇಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ ನಾಮಫಲಕ ತೆರವಿಗೆ ಆಗ್ರಹಿಸಿದ್ದರು.
ವಿವಾದ ಸೃಷ್ಟಿಯಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಬೋಳ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಪೊಲೀಸರು ವಿವಾದಾಸ್ಪದ ನಾಮಫಲಕ ತೆರವು ಮಾಡಿದ್ದಾರೆ.

ದೇಶ ಕಂಡ ಮೊದಲ ಭಯೋತ್ಪಾದಕನ ಹೆಸರು ರಸ್ತೆಗೆ ಇಡಲಾಗಿದೆ. ಪಂಚಾಯತಿಗೂ ಈ ಬೋರ್ಡ್ಗೂ ಸಂಬಂಧವಿಲ್ಲ ಎಂದು ಪಿಡಿಓ ಹೇಳಿದ್ದಾರೆ. ಯಾರೋ ಕಿಡಿಗೇಡಿಗಳು ಬೋರ್ಡ್ ಹಾಕಿದ್ದಾರೆ ಎಂದು ಪಿಡಿಒ ಸ್ಪಷ್ಟಪಡಿಸಿದ್ದಾರೆ. ತಕ್ಷಣ ಈ ಬೋರ್ಡ್ ಅನ್ನು ತೆರವುಗೊಳಿಸುವಂತೆ ಒತ್ತಾಯ ಮಾಡಿದ್ದೇವೆ. ಪೊಲೀಸರನ್ನು ಕರೆಸಿ ಬೋರ್ಡ್ ತೆರವುಗೊಳಿಸುವುದಾಗಿ ಪಿಡಿಒ ಭರವಸೆ ನೀಡಿದ್ದಾರೆ. ಬೋರ್ಡ್ ತೆರವುಗೊಳಿಸದಿದ್ದರೆ ಪ್ರತಿಭಟನೆ ನೀಡುವುದಾಗಿ ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಇನ್ನಾ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೋಳ ಗ್ರಾಮ ಪಂಚಾಯತಿ ನಮಗೂ ನಾಮಫಲಕಕ್ಕೆ ಯಾವುದೇ ಸಂಬಂಧಗಳು ಇಲ್ಲ. ಇದು ಖಾಸಗಿಯವರು ಹಾಕಿದ ನಾಮಫಲಕ ಇದರ ಬಗ್ಗೆ ಗ್ರಾಮ ಪಂಚಾಯತಿಯಲ್ಲಿ ಯಾವುದೇ ನಿರ್ಣಯ ಆಗಿಲ್ಲ ಎಂದು ಸ್ಪಷ್ಟಪಡಿಸಿದೆ.
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ, ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ, "ಈ ನಾಮಫಲಕವನ್ನು ಅಧಿಕೃತವಾಗಿ ಪಂಚಾಯತಿಯವರು ಹಾಕಿಲ್ಲ. ಖಾಸಗಿಯವರು ಹಾಕಿದ್ದಾರೆ. ಈ ಬಗ್ಗೆ ಪಂಚಾಯತ್ ನವರು ಪರಿಶೀಲಿಸಿ ಅಧಿಕೃತವಾಗಿ ವಸ್ತುಸ್ಥಿತಿಯನ್ನು ಜನರ ಮುಂದೆ ಇಡುತ್ತಾರೆ" ಎಂದು ಹೇಳಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications