ಪ್ರಧಾನಿ ಮೋದಿಗೆ ಕಂಟಕ ಕಳೆಯಲು ಕೊಲ್ಲೂರಿನಲ್ಲಿ ಯಾಗ!
ನೋಟು ನಿಷೇಧದ ನಿರ್ಧಾರ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಜಾತಕದಲ್ಲಿ ಕಂಟಕ ಕಾದಿದೆ ಎಂದು ಜ್ಯೋತಿಷಿಯೊಬ್ಬರು ಹೇಳಿದ ಭವಿಷ್ಯವನ್ನು ಗಂಭಿರವಾಗಿ ತೆಗೆದುಕೊಂಡಿರುವ 'ನಮೋ' ಅಭಿಮಾನಿಗಳು ಕೊಲ್ಲೂರಿನಲ್ಲಿ ನವಚಂಡಿಕಾ ಯಾಗ ಮಾಡಿಸಿದ್ದಾರೆ
ಉಡುಪಿ, ಜನವರಿ 2: ಪ್ರಧಾನಿ ಗಾದಿಯೇರುವ ಮುನ್ನ ವಿವಾದ ಪುರುಷರಾಗಿದ್ದ ನರೇಂದ್ರ ಮೋದಿ, ನೋಟು ರದ್ದತಿ ಬಳಿಕ ಸಂಕಷ್ಟದಲ್ಲಿದ್ದಾರೆ. ಪ್ರಧಾನಿ ಮೋದಿಗೆ ಇರುವ ಕಂಟಕ ನಿವಾರಣೆ ಮಾಡಲು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವಚಂಡಿಕಾ ಮಹಾಯಾಗ ನಡೆಸಲಾಗಿದೆ.
ಕಾಳಧನಿಕರನ್ನು ಕೆಣಕಿದ್ದರಿಂದ ಪ್ರಧಾನಿ ನರೇಂದ್ರ ಮೋದಿಗೆ ಕಂಟಕವಿದೆ ಎಂಬುದು ಜ್ಯೋತಿಷ್ಯ ಕ್ಷೇತ್ರದಲ್ಲಿ ಬಹಳ ಚರ್ಚೆಯಲ್ಲಿರುವ ವಿಷಯ. ಈ ಕಾರಣಕ್ಕೆ ಪ್ರಧಾನಿ ಮೋದಿಗೆ ಯಾವ ಕೆಟ್ಟ ಕಣ್ಣುಗಳು ಕುಕ್ಕಬಾರದು. ಈಗಿರುವ ವೇಗದಲ್ಲೇ ಮೋದಿ ಅಡಳಿತ ನಡೆಸಬೇಕೆಂದು ಕೊಲ್ಲೂರಿನಲ್ಲಿ ನವಚಂಡಿಕಾ ಮಹಾಯಾಗ ನಡೆಸಲಾಯಿತು.[ನರೇಂದ್ರ ಮೋದಿ ಜನ್ಮ ಜಾತಕ - ಮುಖ್ಯಾಂಶಗಳು]

ಕುಂದಾಪುರ ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಯಾಗ ನಡೆಯಿತು. ನವಚಂಡಿ ಮಹಾಯಾಗಕ್ಕೆ ಮುನ್ನ ಅಭಿಮಾನಿಗಳು 12 ಕಿಲೋಮೀಟರ್ ಪಾದಯಾತ್ರೆ ಮಾಡಿದರು.
ಬಿಜೆಪಿ ನಾಯಕ ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ಜಡ್ಕಲ್ ನಿಂದ ನಡೆದ ಪಾದಯಾತ್ರೆಯಲ್ಲಿ ಮಹಿಳೆಯರು- ವೃದ್ಧರು, ಅಂಗವಿಕಲರು ಪಾಲ್ಗೊಂಡರು. ರಾಜ್ಯದಲ್ಲಿ ನಡೆಯಲಿರುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಈ ಸಂದರ್ಭದಲ್ಲಿ ಪ್ರಾರ್ಥನೆ ಮಾಡಲಾಯಿತು.[ವರ್ಷ ಭವಿಷ್ಯ: ನರೇಂದ್ರ ಮೋದಿಗೆ 2017 ಹೇಗಿರುತ್ತೆ?]

ವೃಶ್ಚಿಕ ರಾಶಿಯವರಾದ ನರೇಂದ್ರ ಮೋದಿ ಅವರಿಗೆ ಸದ್ಯಕ್ಕೆ ಸಾಡೇಸಾತ್ ನಡೆಯುತ್ತಿದೆ. ಜನವರಿ 26ಕ್ಕೆ ಧನು ರಾಶಿ ಪ್ರವೇಶ ಮಾಡುವ ಶನಿ ಗ್ರಹದಿಂದ ಮೋದಿ ಅವರಿಗೆ ತೊಂದರೆಯಾಗುತ್ತದೆ ಎಂಬುದು ಕೆಲವು ಜ್ಯೋತಿಷಿಗಳ ಅಭಿಮತ. ಆದರೆ ಗುರು ಬಲ ಇರುವುದರಿಂದ ಅಂಥ ಸಮಸ್ಯೆಗಳೇನೂ ಆಗುವುದಿಲ್ಲ ಎಂಬುದು ಮತ್ತೆ ಕೆಲವರ ವಾದ.
ಕೆಲ ಖಾಸಗಿ ವಾಹಿನಿಗಳಲ್ಲಿ ಈ ಬಗ್ಗೆ ಜ್ಯೋತಿಷಿಗಳು, ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಂಟಕ ಇದೆ ಎಂದು ಭವಿಷ್ಯ ಹೇಳುತ್ತಿರುವುದು ಹಾಗೂ ಇದೇ ವೇಳೆ ಮೋದಿ ಅವರ ಹೆಸರಿನಲ್ಲಿ ಹೋಮ ಮಾಡಿಸುತ್ತಿರುವುದು ಒಂದಕ್ಕೊಂದು ತಾಳೆಯಾಗುತ್ತಿದೆ.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications