ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ರಥೋತ್ಸವ, ವಿಶೇಷ ಪೂಜೆ
ಉಡುಪಿ, ಅಕ್ಟೋಬರ್ 25: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ರಥೋತ್ಸವ ಸಂಪನ್ನಗೊಂಡಿತು. ಈ ಬಾರಿ ಕೊರೊನಾ ಕಾರಣದಿಂದಾಗಿ ರಥೋತ್ಸವಕ್ಕೆ ಹೆಚ್ಚಿನ ಭಕ್ತರು ಇರಲಿಲ್ಲ.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸಂಬಂಧಪಟ್ಟವರು ಮತ್ತು ದೇವಸ್ಥಾನದ ಅರ್ಚಕ ವೃಂದ, ಸಿಬ್ಬಂದಿಗಳು ಮತ್ತವರ ಕುಟುಂಬಸ್ಥರು ಮಾತ್ರ ರಥೋತ್ಸವಕ್ಕೆ ಸಾಕ್ಷಿಯಾದರು.
ನವರಾತ್ರಿ ಎಂದರೆ ಕೊಲ್ಲೂರಿನಲ್ಲಿ ವಿಶೇಷವಾದ ಹಬ್ಬದ ಸಡಗರ ಇರುತ್ತದೆ. ಲಕ್ಷಾಂತರ ಜನ ಭಕ್ತರು ಈ ಹಬ್ಬದಲ್ಲಿ ಭಾಗಿಯಾಗುತ್ತಿದ್ದರು. ಆದರೆ ಈ ವರ್ಷ ಕೋವಿಡ್ ಕಾರಣದಿಂದಾಗಿ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳ ಭಕ್ತರು ಇರಲಿಲ್ಲ.

ಹೊರ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣಗಳಿಂದ ಬರುವ ಭಕ್ತರು ಕೊರೊನಾ ನಿರ್ಬಂಧದಿಂದ ಆಗಮಿಸಿರಲಿಲ್ಲ. ಹೀಗಾಗಿ ಈ ಬಾರಿಯ ನವರಾತ್ರಿ ಉತ್ಸವ ಕಳೆಗುಂದಿತ್ತು.
ಇನ್ನು ವರ್ಷಂಪ್ರತಿ ಇಲ್ಲಿ ಪುಷ್ಪ ರಥೋತ್ಸವ ಮಾಡುವುದು ವಾಡಿಕೆ. ಆದರೆ ಈ ಬಾರಿ ಚಿನ್ನದ ರಥದಲ್ಲಿ ದೇವರ ಮೂರ್ತಿಯನ್ನಿಟ್ಟು ರಥೋತ್ಸವ ನಡೆಸಲಾಯಿತು. ಕಳೆದ ಎಂಟೂ ದಿನಗಳಲ್ಲಿ ದೇವರಿಗೆ ಸಲ್ಲಬೇಕಾದ ವಿಶೇಷ ಪೂಜೆ ಪುನಸ್ಕಾರ ಮತ್ತು ಧಾರ್ಮಿಕ ವಿಧಿಗಳನ್ನಷ್ಟೇ ಪೂರೈಸಲಾಗಿದೆ.

ವಿಜಯದಶಮಿ ದಿನದಂದು ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ವಿದ್ಯಾರಂಭ ನಡೆಯಲಿದ್ದು, ಇದಕ್ಕೆ ಸೀಮಿತ ಭಕ್ತರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ.
Recommended Video
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications