ಕಾರ್ಕಳ ನಕ್ಸಲ್ ಮುಖಂಡ ನೀಲಗುಳಿ ಸಿಐಡಿ ಕಸ್ಟಡಿಗೆ
ಉಡುಪಿ, ಫೆಬ್ರವರಿ. 01 : ಹೆಬ್ರಿಯ ಸೀತಾನದಿಯ ಅಧ್ಯಾಪಕ ಭೋಜಶೆಟ್ಟಿ ಕೊಲೆ ಪ್ರಕರಣದಲ್ಲಿ ಬಾಗಿರುವ ನಕ್ಸಲ್ ಮುಖಂಡ ನೀಲಗುಳಿ ಪದ್ಮನಾಭನನ್ನು ಹೆಚ್ಚಿನ ವಿಚಾರಣೆಗಾಗಿ ಕಾರ್ಕಳ ನ್ಯಾಯಾಲಯವು ಸಿಐಡಿ ಕಸ್ಟಡಿಗೆ ಒಪ್ಪಿಸಿದೆ.
2008ರ ವಿಧಾನಸಭಾ ಚುನಾವಣೆಯ ಮುನ್ನಾ ದಿನ ಪೊಲೀಸ್ ಮಾಹಿತಿದಾರನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂಬ ಪ್ರತಿಕಾರದ ಮನೋಭಾವದಿಂದ ನಕ್ಸಲ್ ತಂಡವೊಂದು ಗುಂಡು ಹಾರಿಸಿ ಸೀತಾನದಿ ಭೋಜ ಮಾಸ್ಟರ್ ನನ್ನು ಕೊಲೆಮಾಡಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಬರ್ಕಣದಲ್ಲಿ ನಡೆದ ಎನ್ಕೌಂಟರ್ ಸಂದರ್ಭದಲ್ಲಿ ನೀಲಗುಳಿ ಪದ್ಮನಾಭ ಗಾಯಗೊಂಡು ಪರಾರಿಯಾಗಿ ಬದುಕುಳಿದಿದ್ದನು. ಆತನ ವಿರುದ್ಧ ಶೃಂಗೇರಿ, ಹೆಬ್ರಿ ಮೊದಲಾದ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ.
2016 ನವಂಬರ್ 15ರಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಸಮ್ಮಖದಲ್ಲಿ ನಕ್ಸಲ್ ವಾದಿಗಳಾದ ನೀಲಗುಳಿ ಪದ್ಮನಾಭ, ರಿಜ್ವಾನ್ ಬೇಗಂ, ರಾಜು, ಭಾರತಿ ಶರಣಾಗುವ ಮೂಲಕ ದಶಕಗಳ ಕಾಲ ತೊಡಗಿಸಿಕೊಂಡಿದ್ದ ನಕ್ಸಲ್ ಚಟುವಟಿಕೆಗೆ ತಿಲಾಂಜಲಿ ನೀಡಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಪ್ಪಿ ಶರಣಾಗಿದ್ದರು.
ಆ ಸಂದರ್ಭದಲ್ಲಿ ಸರ್ಕಾರದ ಉನ್ನತಾಧಿಕಾರ ಸಮಿತಿ ಸದಸ್ಯ ಎ.ಕೆ.ಸುಬ್ಬಯ್ಯ ಶಾಂತಿಗಾಗಿ ನಾಗರಿಕ ವೇದಿಕೆ ಗೌರಿ ಲಂಕೇಶ್, ವಕೀಲ ಕೆ.ಪಿ.ಶ್ರೀಪಾಲ್ ಉಪಸ್ಥಿತರಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications