Train: ಕುಂದಾಪುರದ ರೈಲ್ವೆ ಪ್ರಯಾಣಿಕರಿಗೆ ಗುಡ್ನ್ಯೂಸ್
ಕುಂದಾಪುರ, ಮಾರ್ಚ್ 15: ಕೊಂಕಣ ರೈಲ್ವೆಯ ಬಗ್ಗೆ ಕುಂದಾಪುರದ ಸ್ಥಳೀಯರಲ್ಲಿ ಸ್ವಲ್ಪಮಟ್ಟಿನ ಅಸಮಾಧಾನ ಇದ್ದೇ ಇದೆ. ಸಂಚಾರ ನಡೆಸುವ ರೈಲುಗಳ ಸಂಖ್ಯೆ ತೀರಾ ಕಡಿಮೆ. ಬಹಳ ಬೇಡಿಕೆ ಇರುವ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸಬೇಕು ಎಂದರೆ ಕನಿಷ್ಠ ಒಂದೂವರೆ ತಿಂಗಳ ಮುಂಚಿತವಾಗಿಯಾದರೂ ಟಿಕೆಟ್ ಕಾಯ್ದಿರಿಸಬೇಕು. ಅಲ್ಲದೇ ಅದೇ ಮಾರ್ಗವಾಗಿ ಸಂಚರಿಸುವ ಹಲವು ರೈಲುಗಳು ಈ ನಿಲ್ದಾಣದಲ್ಲಿ ನಿಲುಗಡೆಯಾಗುವುದಿಲ್ಲ. ಹೀಗೆ ಹತ್ತಾರು ಕಾರಣಗಳಿಂದ ಕೊಂಕಣ ರೈಲ್ವೆಯ ಬಗ್ಗೆ ಸ್ಥಳೀಯರಲ್ಲಿ ಅಸಮಾಧಾನವಿದ್ದು, ಇದೀಗ ಒಂದು ಬೇಡಿಕೆಗೆ ಕೇಂದ್ರ ರೈಲ್ವೆ ಇಲಾಖೆ ಅಸ್ತು ಎಂದಿದೆ.
ಕೊಂಕಣ ರೈಲ್ವೆ ಮಾರ್ಗದಲ್ಲಿ ಹೊರ ರಾಜ್ಯಗಳಿಗೆ ಸಂಚರಿಸುವ ಹಲವು ರೈಲುಗಳು ಕುಂದಾಪುರ ಹಾಗೂ ಕುಮಟಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗುತ್ತಿರಲಿಲ್ಲ. ಇದರಿಂದ ಹತ್ತಿರವೇ ರೈಲ್ವೆ ನಿಲ್ದಾಣವಿದ್ದರೂ ಸಹ ಪ್ರಯಾಣಿಕರು ಉಡುಪಿಯಂತಹ ದೂರದ ನಿಲ್ದಾಣಕ್ಕೆ ತೆರಳಬೇಕಿತ್ತು. ಈ ಹಿನ್ನೆಲೆಯಲ್ಲಿ ರೈಲ್ವೆ ಪ್ರಯಾಣಿಕರ ಹೋರಾಟ ಸಮಿತಿ ಅನೇಕ ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಲೇ ಇತ್ತು.

ಹಲವು ವರ್ಷಗಳ ಈ ಒತ್ತಾಯಕ್ಕೆ ಇದೀಗ ಕೊಂಕಣ ರೈಲ್ವೆ ಅನುಮತಿ ನೀಡಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಆರು ರೈಲುಗಳಿಗೆ ಕುಂದಾಪುರ ಮತ್ತು ಕುಮಟಾ ನಿಲ್ದಾಣಗಳಲ್ಲಿ ಪ್ರಾಯೋಗಿಕ ನಿಲುಗಡೆಗೆ ಅನುಕೂಲ ಮಾಡಿಕೊಟ್ಟಿದೆ. ಈ ಪೈಕಿ ಕುಂದಾಪುರದಲ್ಲಿ ನಾಲ್ಕು ರೈಲುಗಳು ನಿಲುಗಡೆಯಾಗಲಿವೆ. ಇಂದಿನಿಂದ ಅಂದರೆ ಮಾರ್ಚ್ 15 ಶನಿವಾರದಿಂದ ಪ್ರಾಯೋಗಿಕ ನಿಲುಗಡೆ ಆರಂಭವಾಗಲಿದೆ.
ರೈಲುಗಳ ವಿವರ ಈ ಕೆಳಗಿನಂತಿದೆ
ತಿರುವನಂತಪುರಂ ಸೆಂಟ್ರಲ್ ಹಝ್ರತ್ ನಿಝಾಮುದ್ದೀನ್ ಎಕ್ಸ್ಪ್ರೆಸ್(22653). ಈ ರೈಲು ಮಾರ್ಚ್ 15ರಂದು ಮಧ್ಯಾಹ್ನ 2.06ಕ್ಕೆ ಕುಂದಾಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ 2.08ಕ್ಕೆ ನಿಲ್ದಾಣದಿಂದ ತೆರಳಲಿದೆ.

ಹಝ್ರತ್ ನಿಝಾಮುದ್ದೀನ್ ಎರ್ನಾಕುಲಂ ಜಂಕ್ಷನ್ ಎಕ್ಸ್ಪ್ರೆಸ್(22656). ಈ ರೈಲು ಮಾರ್ಚ್ 15ರಂದು ಮಧ್ಯಾಹ್ನ 1.28 ಕುಂದಾಪುರ ನಿಲ್ದಾಣಕ್ಕೆ ಆಗಮಿಸಿ 1.30ಕ್ಕೆ ನಿಲ್ದಾಣದಿಂದ ತೆರಳಲಿದೆ.
ಹಝ್ರತ್ ನಿಝಾಮುದ್ದೀನ್ ತಿರುವನಂತಪುರಂ ಸೆಂಟ್ರಲ್ ಎಕ್ಸ್ಪ್ರೆಸ್(22654). ಈ ರೈಲು ಮಾರ್ಚ್ 18ರಂದು ಮಧ್ಯಾಹ್ನ 1.28ಕ್ಕೆ ಕುಂದಾಪುರದ ನಿಲ್ದಾಣಕ್ಕೆ ಆಗಮಿಸಿ 1.30ಕ್ಕೆ ನಿಲ್ದಾಣದಿಂದ ತೆರಳಲಿದೆ.
ಎರ್ನಾಕುಲಂ ಜಂಕ್ಷನ್ ಹಝ್ರತ್ ನಿಝಾಮುದ್ದೀನ್ ಎಕ್ಸ್ಪ್ರೆಸ್(22655). ಈ ರೈಲು ಮಾರ್ಚ್ 19ರಂದು ಮಧ್ಯಾಹ್ನ 2.06ಕ್ಕೆ ಕುಂದಾಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ 2.08ಕ್ಕೆ ಈ ನಿಲ್ದಾಣದಿಂದ ತೆರಳಲಿದೆ. ಪ್ರಯಾಣಿಕರು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಭಾರತೀಯ ರೈಲ್ವೆ ಅಧಿಕೃತ ವೆಬ್ಸೈಟ್ ಹಾಗೂ ಎನ್ಟಿಇಎಸ್ ಆ್ಯಪ್ ಮೂಲಕ ಪಡೆದುಕೊಳ್ಳಬಹುದಾಗಿದೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications