Train: ಕುಂದಾಪುರದ ರೈಲ್ವೆ ಪ್ರಯಾಣಿಕರಿಗೆ ಗುಡ್ನ್ಯೂಸ್
ಕುಂದಾಪುರ, ಮಾರ್ಚ್ 15: ಕೊಂಕಣ ರೈಲ್ವೆಯ ಬಗ್ಗೆ ಕುಂದಾಪುರದ ಸ್ಥಳೀಯರಲ್ಲಿ ಸ್ವಲ್ಪಮಟ್ಟಿನ ಅಸಮಾಧಾನ ಇದ್ದೇ ಇದೆ. ಸಂಚಾರ ನಡೆಸುವ ರೈಲುಗಳ ಸಂಖ್ಯೆ ತೀರಾ ಕಡಿಮೆ. ಬಹಳ ಬೇಡಿಕೆ ಇರುವ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸಬೇಕು ಎಂದರೆ ಕನಿಷ್ಠ ಒಂದೂವರೆ ತಿಂಗಳ ಮುಂಚಿತವಾಗಿಯಾದರೂ ಟಿಕೆಟ್ ಕಾಯ್ದಿರಿಸಬೇಕು. ಅಲ್ಲದೇ ಅದೇ ಮಾರ್ಗವಾಗಿ ಸಂಚರಿಸುವ ಹಲವು ರೈಲುಗಳು ಈ ನಿಲ್ದಾಣದಲ್ಲಿ ನಿಲುಗಡೆಯಾಗುವುದಿಲ್ಲ. ಹೀಗೆ ಹತ್ತಾರು ಕಾರಣಗಳಿಂದ ಕೊಂಕಣ ರೈಲ್ವೆಯ ಬಗ್ಗೆ ಸ್ಥಳೀಯರಲ್ಲಿ ಅಸಮಾಧಾನವಿದ್ದು, ಇದೀಗ ಒಂದು ಬೇಡಿಕೆಗೆ ಕೇಂದ್ರ ರೈಲ್ವೆ ಇಲಾಖೆ ಅಸ್ತು ಎಂದಿದೆ.
ಕೊಂಕಣ ರೈಲ್ವೆ ಮಾರ್ಗದಲ್ಲಿ ಹೊರ ರಾಜ್ಯಗಳಿಗೆ ಸಂಚರಿಸುವ ಹಲವು ರೈಲುಗಳು ಕುಂದಾಪುರ ಹಾಗೂ ಕುಮಟಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗುತ್ತಿರಲಿಲ್ಲ. ಇದರಿಂದ ಹತ್ತಿರವೇ ರೈಲ್ವೆ ನಿಲ್ದಾಣವಿದ್ದರೂ ಸಹ ಪ್ರಯಾಣಿಕರು ಉಡುಪಿಯಂತಹ ದೂರದ ನಿಲ್ದಾಣಕ್ಕೆ ತೆರಳಬೇಕಿತ್ತು. ಈ ಹಿನ್ನೆಲೆಯಲ್ಲಿ ರೈಲ್ವೆ ಪ್ರಯಾಣಿಕರ ಹೋರಾಟ ಸಮಿತಿ ಅನೇಕ ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಲೇ ಇತ್ತು.

ಹಲವು ವರ್ಷಗಳ ಈ ಒತ್ತಾಯಕ್ಕೆ ಇದೀಗ ಕೊಂಕಣ ರೈಲ್ವೆ ಅನುಮತಿ ನೀಡಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಆರು ರೈಲುಗಳಿಗೆ ಕುಂದಾಪುರ ಮತ್ತು ಕುಮಟಾ ನಿಲ್ದಾಣಗಳಲ್ಲಿ ಪ್ರಾಯೋಗಿಕ ನಿಲುಗಡೆಗೆ ಅನುಕೂಲ ಮಾಡಿಕೊಟ್ಟಿದೆ. ಈ ಪೈಕಿ ಕುಂದಾಪುರದಲ್ಲಿ ನಾಲ್ಕು ರೈಲುಗಳು ನಿಲುಗಡೆಯಾಗಲಿವೆ. ಇಂದಿನಿಂದ ಅಂದರೆ ಮಾರ್ಚ್ 15 ಶನಿವಾರದಿಂದ ಪ್ರಾಯೋಗಿಕ ನಿಲುಗಡೆ ಆರಂಭವಾಗಲಿದೆ.
ರೈಲುಗಳ ವಿವರ ಈ ಕೆಳಗಿನಂತಿದೆ
ತಿರುವನಂತಪುರಂ ಸೆಂಟ್ರಲ್ ಹಝ್ರತ್ ನಿಝಾಮುದ್ದೀನ್ ಎಕ್ಸ್ಪ್ರೆಸ್(22653). ಈ ರೈಲು ಮಾರ್ಚ್ 15ರಂದು ಮಧ್ಯಾಹ್ನ 2.06ಕ್ಕೆ ಕುಂದಾಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ 2.08ಕ್ಕೆ ನಿಲ್ದಾಣದಿಂದ ತೆರಳಲಿದೆ.

ಹಝ್ರತ್ ನಿಝಾಮುದ್ದೀನ್ ಎರ್ನಾಕುಲಂ ಜಂಕ್ಷನ್ ಎಕ್ಸ್ಪ್ರೆಸ್(22656). ಈ ರೈಲು ಮಾರ್ಚ್ 15ರಂದು ಮಧ್ಯಾಹ್ನ 1.28 ಕುಂದಾಪುರ ನಿಲ್ದಾಣಕ್ಕೆ ಆಗಮಿಸಿ 1.30ಕ್ಕೆ ನಿಲ್ದಾಣದಿಂದ ತೆರಳಲಿದೆ.
ಹಝ್ರತ್ ನಿಝಾಮುದ್ದೀನ್ ತಿರುವನಂತಪುರಂ ಸೆಂಟ್ರಲ್ ಎಕ್ಸ್ಪ್ರೆಸ್(22654). ಈ ರೈಲು ಮಾರ್ಚ್ 18ರಂದು ಮಧ್ಯಾಹ್ನ 1.28ಕ್ಕೆ ಕುಂದಾಪುರದ ನಿಲ್ದಾಣಕ್ಕೆ ಆಗಮಿಸಿ 1.30ಕ್ಕೆ ನಿಲ್ದಾಣದಿಂದ ತೆರಳಲಿದೆ.
ಎರ್ನಾಕುಲಂ ಜಂಕ್ಷನ್ ಹಝ್ರತ್ ನಿಝಾಮುದ್ದೀನ್ ಎಕ್ಸ್ಪ್ರೆಸ್(22655). ಈ ರೈಲು ಮಾರ್ಚ್ 19ರಂದು ಮಧ್ಯಾಹ್ನ 2.06ಕ್ಕೆ ಕುಂದಾಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ 2.08ಕ್ಕೆ ಈ ನಿಲ್ದಾಣದಿಂದ ತೆರಳಲಿದೆ. ಪ್ರಯಾಣಿಕರು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಭಾರತೀಯ ರೈಲ್ವೆ ಅಧಿಕೃತ ವೆಬ್ಸೈಟ್ ಹಾಗೂ ಎನ್ಟಿಇಎಸ್ ಆ್ಯಪ್ ಮೂಲಕ ಪಡೆದುಕೊಳ್ಳಬಹುದಾಗಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications