ಮೆಹಂದಿ ಎಫೆಕ್ಟ್: ವಧುವಿನ ಒಂದೇ ಕುಟುಂಬದ 7 ಮಂದಿಗೆ ಕೊರೊನಾ ಸೋಂಕು
ಉಡುಪಿ, ಜುಲೈ 15: ಉಡುಪಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚುತ್ತಲೇ ಇದೆ. ಪ್ರತಿನಿತ್ಯ ಐವತ್ತರಿಂದ ಅರವತ್ತು ಪ್ರಕರಣಗಳು ಪತ್ತೆಯಾಗುತ್ತಿದ್ದು, ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.
ಅಲ್ಲದೇ ಈ ಕೊರೊನಾ ವೈರಸ್ ಸೋಂಕು ಸಮುದಾಯಕ್ಕೆ ಹಬ್ಬುತ್ತಿದೆಯಾ ಎಂಬ ಭೀತಿ ಎದುರಾಗಿದೆ. ಇದಕ್ಕೆ ಕಾರಣ ಕಾಪು ತಾಲ್ಲೂಕಿನಲ್ಲಿ ನಡೆದ ಘಟನೆ. ಕಾಪು ತಾಲೂಕಿನ ನವವಧುವಿನ ಒಂದೇ ಕುಟುಂಬದ ಏಳು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
ಕಾಪು ತಾಲೂಕು ಮಲ್ಲಾರಿನ ಕೊಂಬಗುಡ್ಡೆಯಲ್ಲಿ ಈ ಕುಟುಂಬ ಇದ್ದು, ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಯುವಕನ ಜೊತೆ ಮದುವೆ ಆಗಿರುವ ವಧುವಿನ ಕುಟುಂಬ ಇದಾಗಿದೆ.

ನವವಧುವಿಗೆ ಜು.6 ರಂದು ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ. ಎಂಬತ್ತಕ್ಕೂ ಹೆಚ್ಚು ಮಂದಿ ಮೆಹಂದಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದೀಗ 3 ಮಕ್ಕಳು, 3 ಮಹಿಳೆಯರ ಸಹಿತ ಏಳು ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಸೋಂಕು ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇತರರಿಗೂ ಹರಡುವ ಭೀತಿ ಎದುರಾಗಿದೆ.












Click it and Unblock the Notifications