ಉಡುಪಿ: ನೀರಲ್ಲಿ ಕೊಚ್ಚಿ ಹೋಗಿದ್ದ ನಿಧಿ ಶವವಾಗಿ ಪತ್ತೆ
Recommended Video

ಉಡುಪಿ, ಮೇ 30: ಉಡುಪಿಯಲ್ಲಿ ಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ನಿನ್ನೆ ಕೊಚ್ಚಿ ಹೋಗಿದ್ದ ನಾಲ್ಕನೇ ತರಗತಿ ವಿದ್ಯಾರ್ಥಿನಿ ನಿಧಿ ಆಚಾರ್ಯ(9) ಶವವಾಗಿ ಪತ್ತೆಯಾಗಿದ್ದಾಳೆ.
16 ಗಂಟೆಗಳ ಬಳಿಕ ಎನ್ ಡಿಆರ್ ಎಫ್ ಕಾರ್ಯಾಚರಣೆ ವೇಳೆ ಮೃತ ದೇಹ ಪತ್ತೆಯಾಗಿದೆ. ಸ್ಥಳೀಯ ಮನೋಹರ್ ಎಂಬುವವರಿಗೆ ನಿಧಿ ಮೃತ ದೇಹ ಸಿಕ್ಕಿದೆ. ಸ್ಕೂಲ್ ಬ್ಯಾಗ್, ಜಾಕೆಟ್ ಧರಿಸಿದ್ದ ನಿಧಿ ಘಟನಾ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಪತ್ತೆಯಾಗಿದ್ದಾಳೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ನಿನ್ನೆ ನಿಧಿ, ಅಕ್ಕ ನಿಶಾ ಜೊತೆ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದಳು. ಪಟ್ಲ ಎಂಬಲ್ಲಿ ಕಿರು ಸೇತುವೆ ದಾಟುವಾಗ ಅವಘಡವಾಗಿದೆ. ರಭಸವಾಗಿ ಹರಿಯುತ್ತಿದ್ದ ನೀರು ಸೇತುವೆ ಮೇಲೆ ಬಂದಿತ್ತು. ಆ ರಭಸಕ್ಕೆ ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ.

ನಿಶಾ ಆಚಾರ್ಯಳನ್ನು ಸ್ಥಳೀಯರು ರಕ್ಷಿಸಿದರು. ಆದರೆ ಕಣ್ಮರೆಯಾದ ನಿಧಿ ಈಗ ಶವವಾಗಿ ಪತ್ತೆಯಾಗಿದ್ದಾಳೆ. ನಿಧಿ ಪಡುಬಿದ್ರೆಯ ಗಣಪತಿ ಸ್ಕೂಲ್ ನ ವಿದ್ಯಾರ್ಥಿನಿ. ಮೂರು ಗಂಟೆಗೆ ಶಾಲೆ ಬಿಟ್ಟಿದ್ದು, ಮಳೆಯಿದ್ದ ಕಾರಣ ಮಕ್ಕಳಿಬ್ಬರು ತಡವಾಗಿ ಶಾಲೆಯಿಂದ ಹೊರಟಿದ್ದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ












Click it and Unblock the Notifications