ಉಡುಪಿ: ನೀರಲ್ಲಿ ಕೊಚ್ಚಿ ಹೋಗಿದ್ದ ನಿಧಿ ಶವವಾಗಿ ಪತ್ತೆ
Recommended Video
ಉಡುಪಿ, ಮೇ 30: ಉಡುಪಿಯಲ್ಲಿ ಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ನಿನ್ನೆ ಕೊಚ್ಚಿ ಹೋಗಿದ್ದ ನಾಲ್ಕನೇ ತರಗತಿ ವಿದ್ಯಾರ್ಥಿನಿ ನಿಧಿ ಆಚಾರ್ಯ(9) ಶವವಾಗಿ ಪತ್ತೆಯಾಗಿದ್ದಾಳೆ.
16 ಗಂಟೆಗಳ ಬಳಿಕ ಎನ್ ಡಿಆರ್ ಎಫ್ ಕಾರ್ಯಾಚರಣೆ ವೇಳೆ ಮೃತ ದೇಹ ಪತ್ತೆಯಾಗಿದೆ. ಸ್ಥಳೀಯ ಮನೋಹರ್ ಎಂಬುವವರಿಗೆ ನಿಧಿ ಮೃತ ದೇಹ ಸಿಕ್ಕಿದೆ. ಸ್ಕೂಲ್ ಬ್ಯಾಗ್, ಜಾಕೆಟ್ ಧರಿಸಿದ್ದ ನಿಧಿ ಘಟನಾ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಪತ್ತೆಯಾಗಿದ್ದಾಳೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕರಾವಳಿಯಲ್ಲಿ ಮಳೆಯ ಅಬ್ಬರ: ಇಬ್ಬರು ಬಲಿ, ಭಾರಿ ಆಸ್ತಿ ಹಾನಿ
ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ನಿನ್ನೆ ನಿಧಿ, ಅಕ್ಕ ನಿಶಾ ಜೊತೆ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದಳು. ಪಟ್ಲ ಎಂಬಲ್ಲಿ ಕಿರು ಸೇತುವೆ ದಾಟುವಾಗ ಅವಘಡವಾಗಿದೆ. ರಭಸವಾಗಿ ಹರಿಯುತ್ತಿದ್ದ ನೀರು ಸೇತುವೆ ಮೇಲೆ ಬಂದಿತ್ತು. ಆ ರಭಸಕ್ಕೆ ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ.
ನಿಶಾ ಆಚಾರ್ಯಳನ್ನು ಸ್ಥಳೀಯರು ರಕ್ಷಿಸಿದರು. ಆದರೆ ಕಣ್ಮರೆಯಾದ ನಿಧಿ ಈಗ ಶವವಾಗಿ ಪತ್ತೆಯಾಗಿದ್ದಾಳೆ. ನಿಧಿ ಪಡುಬಿದ್ರೆಯ ಗಣಪತಿ ಸ್ಕೂಲ್ ನ ವಿದ್ಯಾರ್ಥಿನಿ. ಮೂರು ಗಂಟೆಗೆ ಶಾಲೆ ಬಿಟ್ಟಿದ್ದು, ಮಳೆಯಿದ್ದ ಕಾರಣ ಮಕ್ಕಳಿಬ್ಬರು ತಡವಾಗಿ ಶಾಲೆಯಿಂದ ಹೊರಟಿದ್ದರು.