ಉಡುಪಿ; ನೈಟ್ ಕರ್ಪ್ಯೂ, ವಾಹನ ಸವಾರರಿಗೆ ಡಿಸಿ ಎಚ್ಚರಿಕೆ
ಉಡುಪಿ, ಏಪ್ರಿಲ್ 11; ಕರ್ನಾಟಕ ಸರ್ಕಾರ ಉಡುಪಿ ಮತ್ತು ಮಣಿಪಾಲದಲ್ಲಿಯೂ ಕೊರೊನಾ ಕರ್ಫ್ಯೂ ಘೋಷಣೆ ಮಾಡಿದೆ. ಕರ್ಫ್ಯೂ ಜಾರಿಯಾದ ಮೊದಲ ದಿನವಾದ ಶನಿವಾರ ಪೊಲೀಸರು ಭಾರೀ ಭದ್ರತೆ ಮತ್ತು ತಪಾಸಣೆ ಕೈಗೊಂಡಿದ್ದರು.
ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ತನಕ ನೈಟ್ ಕರ್ಪ್ಯೂ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಮಲ್ಪೆ, ಉಡುಪಿ, ಮಣಿಪಾಲದಲ್ಲಿ ಒಟ್ಟು 5 ಕಡೆಗಳಲ್ಲಿ ತಾತ್ಕಾಲಿಕ ಚೆಕ್ಪೋಸ್ಟ್ ಹಾಕಲಾಗಿತ್ತು.
ಮುಂಜಾಗ್ರತೆ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಹೆಚ್ಚುವರಿ ಸಿಬ್ಬಂದಿಗಳಿಗೆ ನೋಡಲ್ ಅಧಿಕಾರಿಯಾಗಿ ಓರ್ವ ಡಿವೈಎಸ್ಪಿಯನ್ನು ನಿಯೋಜನೆ ಮಾಡಿದ್ದು, ರಾತ್ರಿ 10 ಗಂಟೆ ಬಳಿಕ ಜನರು ಅನಗತ್ಯವಾಗಿ ಓಡಾಡದಂತೆ ಅಗತ್ಯ ಕ್ರಮ ಕೈಗೊಂಡರು.

ಜಿಲ್ಲಾಧಿಕಾರಿ ಜಿ. ಜಗದೀಶ್ ಉಡುಪಿ ಮತ್ತು ಮಣಿಪಾಲದಲ್ಲಿ ಗಸ್ತು ತಿರುಗಿ ವ್ಯವಸ್ಥೆಗಳನ್ನು ಪರಿಶೀಲಿಸಿದರು. ವಾಹನಗಳನ್ನು ತಡೆದು ನಿಲ್ಲಿಸಿ ಸ್ವತಃ ಜಿಲ್ಲಾಧಿಕಾರಿಗಳೇ ವಿಚಾರಣೆ ಮಾಡಿದರು.
ರಸ್ತೆಯಲ್ಲಿ ಓಡಾಡುವವರನ್ನು ಜಿಲ್ಲಾಧಿಕಾರಿಗಳು ತರಾಟೆಗೆ ತೆಗೆದುಕೊಳ್ಳುವ ದೃಶ್ಯವೂ ಕಂಡು ಬಂತು. ಭಾನುವಾರದಿಂದ ಅನಗತ್ಯ ತಿರುಗಾಡಿದರೆ ವಾಹನವನ್ನು ವಶಕ್ಕೆ ಪಡೆಯುತ್ತೇವೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.
ಮಣಿಪಾಲದಲ್ಲಿ ವಿದ್ಯಾರ್ಥಿಗಳ ಓಡಾಟ ನಿಯಂತ್ರಿಸುವುದೇ ಪೊಲೀಸರಿಗೆ ತಲೆನೋವಾಗಿದೆ. ವಾರಾಂತ್ಯಗಳಲ್ಲಿ ಲೇಟ್ ನೈಟ್ ಪಾರ್ಟಿ ಮಾಡುವ ವಿದ್ಯಾರ್ಥಿಗಳಿಗೆ ಶನಿವಾರ ಕರ್ಪ್ಯೂ ಬಿಸಿ ತಟ್ಟಿದೆ.
ಶನಿವಾರದ ವರದಿಯಂತೆ ಉಡುಪಿಯಲ್ಲಿ 68 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 354.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications