ಅಬ್ಬಬ್ಬಾ.ಗಿನ್ನೆಸ್ ದಾಖಲೆ ಮಾಡಿ ಹೂನಗೆ ಚೆಲ್ಲಿದ ಒಂಬತ್ತರ ಪೋರಿ !
ಸಾಧಿಸುವ ಛಲದ ಮುಂದೆ ವಯಸ್ಸು ಅಡ್ಡಿ ಬರೋದಿಲ್ಲ ಎಂಬುದನ್ನು ಬಾಲೆಯೊಬ್ಬಳು ಸಾಧಿಸಿ ತೋರಿಸಿದ್ದಾಳೆ. ಆಕೆಯಿನ್ನೂ ಒಂಬತ್ತರ ಬಾಲೆ, ಆದ್ರೂ ವಿಶ್ವದಾಖಲೆಯೊಂದನ್ನು ನೀರು ಕುಡಿದಷ್ಟೇ ಸಲೀಸಾಗಿ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾಳೆ.
ಈ ಬಾಲೆಗೆ ಇನ್ನೂ ಒಂಬತ್ತರ ಹರೆಯ. ಅದೆಂಥ ಉತ್ಸಾಹ , ಅದೆಂಥ ಲವಲವಿಕೆ. ಉಡುಪಿ ಜಿಲ್ಲೆಯ ಉದ್ಯಾವರದವಳು ಈಕೆ. ಯೋಗವನ್ನೇ ಉಂಡು, ಉಟ್ಟು ಉಸಿರಾಡುವ ಈ ಪೋರಿ, ಸಲೀಸಾಗಿ ಗಿನ್ನೆಸ್ ದಾಖಲೆಯೊಂದನ್ನು ತನ್ನ ಹೆಸರಿಗೆ ಬರೆದಿದ್ದಾಳೆ.
ಒಂದು ನಿಮಿಷದಲ್ಲಿ ಯೋಗ ಭಂಗಿಯೊಂದನ್ನು ಅತೀ ಹೆಚ್ಚು ಬಾರಿ ಮಾಡುವ ಮೂಲಕ ಗಿನ್ನೆಸ್ ದಾಖಲೆಗೆ ಭಾಜನಳಾಗಿದ್ದಾಳೆ. ಎದೆಭಾಗ ಸ್ಥಿರವಿರಿಸಿ ದೇಹದ ಉಳಿದ ಭಾಗಗಳನ್ನು ನಿಮಿಷಕ್ಕೆ 42 ಬಾರಿ ಚಲನೆಗೊಳಪಡಿಸುವ ನಿರಾಲಂಭ ಪೂರ್ಣ ಚಕ್ರಾಸನ ಭಂಗಿಯನ್ನು ಪ್ರದರ್ಶಿಸುವ ಮೂಲಕ ಗಿನ್ನೆಸ್ ಪುಸ್ಥಕದಲ್ಲಿ ಸ್ಥಾನ ಖಚಿತಪಡಿಸಿಕೊಂಡಿದ್ದಾಳೆ.

ಈ ಮೊದಲು ಪ್ಯಾಲೆಸ್ತೀನ್ನ 13 ವರ್ಷದ ಬಾಲಕ ಮೊಹಮ್ಮದ್ ಆಲ್ ಶೇಖ್ ಹೆಸರಿನಲ್ಲಿ ಈ ದಾಖಲೆಯಿತ್ತು. ಆತ ನಿಮಿಷಕ್ಕೆ 38 ಬಾರಿ ಈ ಭಂಗಿಯನ್ನು ಮಾಡಿದ್ದ. ಇದನ್ನು ಮುರಿದು ತನ್ನ ಹೆಸರಿನಲ್ಲಿ ದಾಖಲೆ ಬರೆಯಲು ತನುಶ್ರೀ ಸಾಕಷ್ಟು ತಯಾರಿ ನಡೆಸಿದ್ದಳು.
ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸಾಕಷ್ಟ ಜನ ಸೇರಿದ್ದರು. ಅವರೆಲ್ಲರ ಸಮ್ಮುಖ ಈ ಪೋರಿ ವಿಶ್ವದಾಖಲೆ ಮಾಡಿ ಹೂನಗೆ ಚೆಲ್ಲಿದ್ದಾಳೆ. ತನುಶ್ರೀ ಒಂದು ನಿಗದಿತ ಆಸನವನ್ನು ವಿಡಿಯೋದಲ್ಲಿ ವೀಕ್ಷಿಸಿ ತಾಯಿಯ ಮಾರ್ಗದರ್ಶನದಲ್ಲಿ ನಿತ್ಯ ಅಭ್ಯಸಿಸಿ ಈಗ ಸಾಧನೆ ಮಾಡಿದ್ದಾಳೆ.

ತಂದೆ ಉದಯ ಕುಮಾರ್ ಮತ್ತು ತಾಯಿ ಸಂಧ್ಯಾ ಅವರ ಗರಡಿಯಲ್ಲಿ ಮನೆಯಲ್ಲಿಯೇ ಅಭ್ಯಾಸ ಮಾಡಿದ ಹೆಗ್ಗಳಿಕೆ ಈಕೆಯದ್ದು. ಉಡುಪಿಯ ಸೈಂಟ್ ಸಿಸಿಲೀಸ್ ಶಾಲೆಯಲ್ಲಿ 4ನೇ ತರಗತಿಯ ವಿದ್ಯಾರ್ಥಿನಿಯಾಗಿರೋ ಈ ಪೋರಿ ಈಗ ದೇಶವೇ ಹೆಮ್ಮೆ ಪಡುವ ಸಾಧನೆ ಮಾಡಿದ್ದಾಳೆ. ಶಹಬ್ಬಾಸ್ ತನುಶ್ರೀ...
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications