ಸಚಿವ ಡಿಕೆಶಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಪರೀಕ್ಷೆಗಳು ಹತ್ತಿರ ಬರುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಲೋಡ್ ಶೆಡ್ಡಿಂಗ್ ಹೇರಿಕೆಗೆ ಮುಂದಾಗದಿರಲು ಇಂಧನ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದರು.
ರಾಜ್ಯಕ್ಕೆ ಅಗತ್ಯ ಬೀಳುವ ಹೆಚ್ಚುವರಿ ವಿದ್ಯುತ್ ಖರೀದಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ವಿದ್ಯುತ್ ಉತ್ಪಾದನೆ ಸುಧಾರಿಸುತ್ತಿದ್ದು, ಪ್ರಸರಣ ಹಾಗೂ ನಿರ್ವಹಣೆ ತುಂಬಾ ಕಷ್ಟ ಹಾಗೂ ಸವಾಲಿನ ಕೆಲಸ ಎಂದು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿಸಬೇಕು. ಅನಗತ್ಯ ವಿದ್ಯುತ್ ಬಳಕೆ, ವಿದ್ತ್ಯುತ್ ಸೋರಿಕೆ, ವಿದ್ಯುತ್ ಕಳ್ಳತನದ ಬಗ್ಗೆ ಕಂಡು ಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು ಎಂದರು.
ದಾಮೋದರ್ ವ್ಯಾಲಿ ಕಾರ್ಪೋರೇಷನ್ ಕಂಪನಿ ಜತೆ ವಿದ್ಯುತ್ ಖರೀದಿಗಾಗಿ(ಸುಮಾರು 450 MW) ಶೀಘ್ರದಲ್ಲೇ ಒಪ್ಪಂದ ಮಾಡಿಕೊಂಡು ಒಡಂಬಡಿಕೆಗೆ ಸರ್ಕಾರ ಸಹಿ ಹಾಕಲಿದೆ. ಇತರೆ ರಾಜ್ಯಗಳಿಂದ ವಿದ್ಯುತ್ ಖರೀದಿ ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾಗಿರುವ ಕೋಟಾ ಹೆಚ್ಚಿಸುವಂತೆ ಮನವಿ ಮಾಡಿಕೊಳ್ಳುವುದಾಗಿ ಸಚಿವ ಶಿವಕುಮಾರ್ ಹೇಳಿದರು.
ಸದ್ಯ ರಾಜ್ಯಕ್ಕೆ ದಿನನಿತ್ಯದ ಬೇಡಿಕೆ 10,334 ಮೆ.ವ್ಯಾ ನಷ್ಟಿದೆ. ಲಭ್ಯವಿರುವ ವಿದ್ಯುತ್ 8600 ಮೆ.ವ್ಯಾ ನಷ್ಟಿದೆ. ಅಂದಾಜು 4,300 ಮೆ.ವ್ಯಾ. ಮಾತ್ರ ಉತ್ಪಾದನೆಯಾಗುತ್ತಿದೆ.ಇದರೊಂದಿಗೆ ಪೂರೈಕೆ ವ್ಯತ್ಯಯದ ಸಮಸ್ಯೆಯೂ ಇದ್ದೇ ಇದೆ. ರಾಯಚೂರು ಮತ್ತು ಉಡುಪಿ ಕೇಂದ್ರಗಳಲ್ಲಿ ಉತ್ಪಾದನೆ ಕುಸಿಸಿದ್ದರಿಂದ ಒಟ್ಟು 1,198 ಮೆ.ವ್ಯಾ. ವಿದ್ಯುತ್ ಕೊರತೆ ಉಂಟಾಗಿದೆ. ಇದರ ಜೊತೆಗೆ ಪವನ ವಿದ್ಯುತ್ ಉತ್ಪಾದನೆ ಸಹ ಸಂಪೂರ್ಣ ಸ್ಥಗಿತಗೊಂಡಿದೆ. ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿ ನಿಲ್ಲಿಸಲಾಗಿದೆ. ಆದ್ದರಿಂದ ಲೋಡ್ ಶೆಡ್ಡಿಂಗ್ ಜಾರಿ ಅನಿವಾರ್ಯ ಎಂದು ಹೆಸ್ಕಾಂ, ಬೆಸ್ಕಾಂ, ಚೆಸ್ಕಾಂ ಮುಂತಾದ ಪ್ರಸರಣ ಸಂಸ್ಥೆಗಳು ಹೇಳಿವೆ.
ಈ ಬಾರಿ ಉತ್ತಮ ಮಳೆ ಸುರಿದು ವಿದ್ಯುತ್ ಉತ್ಪಾದಿಸುವ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದವು. ಆದ್ದರಿಂದ ಜಲವಿದ್ಯುತ್ ಕೇಂದ್ರಗಳು ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡುತ್ತಿವೆ. ಇಲ್ಲದಿದ್ದರೆ, ದಿನಕ್ಕೆ 6 ತಾಸು ಮಾತ್ರ ವಿದ್ಯುತ್ ಪೂರೈಸಲು ಶಕ್ತವಾಗುತ್ತಿತ್ತು ಎಂದು ಕೆಪಿಟಿಸಿಎಲ್ ಮೂಲಗಳು ತಿಳಿಸಿವೆ.
-
GBA: ನಗರದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ ಇನ್ನಷ್ಟು ಚುರುಕು -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Siddaramaiah: ಡಿಕೆ ಶಿವಕುಮಾರ್ದು ಕಾಂಗ್ರೆಸ್ಗೆ ರಾಜಿಯಿಲ್ಲದ ನಿಷ್ಠೆ: ಸಿದ್ದರಾಮಯ್ಯ, ಸಿಎಂ ಕುರ್ಚಿ ಚರ್ಚೆ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಬೆಂಗಳೂರಿನಂತೆ ಇಲ್ಲಿ ಟ್ರಾಫಿಕ್ ಇಲ್ಲ, ನಮ್ಮ ಹೈದರಾಬಾದ್ ಬೆಸ್ಟ್ ಎಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ











Click it and Unblock the Notifications