ಭಾರತ ರತ್ನ ಕೊಟ್ಟು ಪ್ರಣವ್ ಮುಖರ್ಜಿಯನ್ನು ಹೈಜಾಕ್ ಮಾಡಲು ಸಾದ್ಯವಿಲ್ಲ: ಜಯಮಾಲ
ಉಡುಪಿ ಜನವರಿ 26: ಭಾರತ ರತ್ನ ಕೊಟ್ಟು ಪ್ರಣವ್ ಮುಖರ್ಜಿಯವರನ್ನು ಹೈಜಾಕ್ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಜಯಮಾಲಾ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ಏನು ಮಾಡಲು ಸಾಧ್ಯವಿಲ್ಲ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಗೆ ಅವರಿಗೆ ಭಾರತರತ್ನ ಪ್ರಶಸ್ತಿ ದೊರಕಿರುವುದು ಖುಷಿ ತಂದಿದೆ ಎಂದು ಹೇಳಿದರು.
ಅವರಿಗೆ ಭಾರತ ರತ್ನ ನೀಡಿದ್ದರಲ್ಲಿ ಯಾವುದೇ ರಾಜಕೀಯ ಇಲ್ಲ. ಅಂತಹ ಒಳ್ಳೇ ಕೆಲಸ ಮಾಡಿದ್ದಾರೆ.ಭಾರತ ರತ್ನಕ್ಕೆ ಪ್ರಣವ್ ಮುಖರ್ಜಿ ಅರ್ಹರು ಎಂದು ಅವರು ಹೇಳಿದರು.

ಸಿದ್ದಗಂಗಾ ಶ್ರೀ ಗಳಿಗೆ ಭಾರತ ರತ್ನ ಬರಬೇಕು ಅನ್ನೋದು ನಮ್ಮ ಆಶಯವಾಗಿತ್ತು. ಬಂದಿದ್ದರೆ ತುಂಬಾ ಸಂತೋಷ ಆಗ್ತಿತ್ತು. ಮುಂದಿನ ವರ್ಷವಾದರೂ ಸಿದ್ದಗಂಗಾ ಶ್ರೀ ಗಳಿಗೆ ಭಾರತ ರತ್ನ ಪ್ರಶಸ್ತಿ ದೊರೆಯಲಿ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಅಭಿಪ್ರಾಯ ಪಟ್ಟಿದ್ದಾರೆ.
ಸಿದ್ದಗಂಗಾ ಶ್ರೀ ಗಳು ಭಾರತ ರತ್ನ ಪ್ರಶಸ್ತಿ ಮೀರಿ ಬೆಳೆದವರು. ಆ ದಿವ್ಯ ಚೇತನಕ್ಕೆ ನೆಪ ಮಾತ್ರ ಕ್ಕೆ ಭಾರತ ರತ್ನ ನೀಡಬೇಕು . ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಬರಬೇಕು ಅನ್ನೋದು ನಮ್ಮ ಆಶಯವಾಗಿತ್ತು. ಬಂದಿದ್ದರೆ ತುಂಬಾ ಸಂತೋಷ ಆಗ್ತಿತ್ತು. ಆದರೆ ಮುಂದಿನ ವರ್ಷವಾದರೂ ಪ್ರಶಸ್ತಿ ಬರಲಿ ಎಂದು ಅವರು ಹೇಳಿದರು .
ಈ ಬಾರಿ ಕರ್ನಾಟಕದ ಅನೇಕರಿಗೆ ಪದ್ಮ ಪ್ರಶಸ್ತಿ ಬಂದಿದೆ. ಸಾಲುಮರದ ತಿಮ್ಮಕ್ಕ, ಪ್ರಭುದೇವ ಅವರಿಗೆ ಅಭಿನಂದನೆ ಸಲ್ಲಿಸುತ್ತೆನೆ . ಕಲಾವಿದರಿಗೆ ಭಾಷೆಯ ಗಡಿ ಹಾಕಬೇಡಿ. ಚತ್ರರಂಗ ಬೆಳೆಸಿದವರು ಪ್ರಭುದೇವ ಕುಟುಂಬದವರು. ಅವರಿಗೆ ಪ್ರಶಸ್ತಿ ಬಂದದ್ದು ಖುಷಿಯಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications