ಮಡೆ, ಎಡೆಸ್ನಾನಕ್ಕೆ ತಿಲಾಂಜಲಿ ಹಾಡಿದ ಪಲಿಮಾರು ಶ್ರೀ
ಉಡುಪಿ, ಡಿಸೆಂಬರ್ 14: ಷಷ್ಠಿ ಆಚರಣೆ ಸಂದರ್ಭದಲ್ಲಿ ನಡೆಯತ್ತಿದ್ದ ಎಡೆಸ್ನಾನಕ್ಕೂ ತಿಲಾಂಜಲಿ ಹಾಡಿ ಪರ್ಯಾಯ ಪಿಠಾಧೀಶ ಪಲಿಮಾರುಶ್ರೀ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದಾರೆ.
ಉಡುಪಿ ಕೃಷ್ಣಮಠದಲ್ಲಿ ಷಷ್ಠಿ ಆಚರಣೆ ಸಂದರ್ಭದಲ್ಲಿ ನಡೆಯುತ್ತಿದ್ದ ಎಡೆಸ್ನಾನ, ಮಡೆಸ್ನಾನ ಎರಡಕ್ಕೂ ವಿದಾಯ ಹೇಳಲಾಗಿದೆ.
ಈ ಬಗ್ಗೆ ಪರ್ಯಾಯ ಪಲಿಮಾರು ಮಠಾಧೀಶರ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಶ್ರೀ ಸುಬ್ರಹ್ಮಣ್ಯ ಗುಡಿಯ ಆವರಣದಲ್ಲಿ ಷಷ್ಠಿ ಆಚರಣೆ ಸಂದರ್ಭದಲ್ಲಿ ಕೆಲ ವರ್ಷಗಳ ಹಿಂದೆ ಮಡೆಸ್ನಾನ ನಡೆಯುತ್ತಿತ್ತು. ಆದರೆ ಇದು ಭಾರೀ ವಿವಾದಕ್ಕೆ ಕಾರಣವಾದ ನಂತರ ಪೇಜಾವರ ಶ್ರೀಗಳ ಸಲಹೆಯಂತೆ ಎಡೆಸ್ನಾನ ನಡೆಸಲು ತೀರ್ಮಾನಿಸಲಾಯಿತು.
ಗುರುವಾರ (ಡಿಸೆಂಬರ್ 13) ನಡೆದ ಷಷ್ಠಿ ಆಚರಣೆ ಸಂದರ್ಭದಲ್ಲಿ ಆಸಕ್ತ ಭಕ್ತರಿಂದ ಈ ಬಾರಿ ಕೇವಲ ಉರುಳು ಸೇವೆ ನಡೆಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ , ಪೇಜಾವರ ಶ್ರೀಗಳ ಸಲಹೆಯಂತೆ ಎಡೆಸ್ನಾನ ನಡೆಯುತ್ತಿತ್ತು. ಆದರೆ ಈ ಬಗ್ಗೆ ಅನಗತ್ಯ ವಿವಾದ ಬೇಡವೆಂದು ಈ ನಿರ್ಧಾರಕ್ಕೆ ಬಂದಿದ್ದೇವೆ.

ಎಡೆಸ್ನಾನ ದಿಂದಲೂ ಕೆಲವರಿಗೆ ಬೇಸರವಾಗಿದೆ. ತಿನ್ನುವ ಅನ್ನದ ಮೇಲೆ ಉರುಳು ಸೇವೆ ಕೆಲವರಿಗೆ ಇಷ್ಟವಿಲ್ಲ. ಕೃಷ್ಣಮಠದ ಭೋಜನ ಶಾಲೆಯಲ್ಲೇ ಪ್ರಸಾದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.
ಪಲಿಮಾರುಶ್ರೀಗಳ ಈ ನಿರ್ಧಾರಕ್ಕೆ ಪೇಜಾವರಶ್ರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪಲಿಮಾರು ಶ್ರೀ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಜಾತಿಯ ಹೆಸರಲ್ಲಿ ವಿರೋಧ ಬಂದ್ರೆ ಸಂಘರ್ಷವಾಗುತ್ತದೆ. ದೇವಸ್ಥಾನದಲ್ಲಿ ಮಡೆಸ್ನಾನ - ಎಡೆಸ್ನಾನ ಅನಿವಾರ್ಯ ಅಲ್ಲ.

ಹಿಂದೂ ಧರ್ಮಕ್ಕೆ ಇದರಿಂದ ಯಾವುದೇ ಹಾನಿಯಿಲ್ಲ. ದೇವಸ್ಥಾನದ ಉತ್ಸವ ಪೂಜೆ ಶಾಸ್ತ್ರಬದ್ಧವಾಗಿ ನಡೆದರೆ ಸಾಕು. ವಿವಾದ, ಭಿನ್ನಾಭಿಪ್ರಾಯದ ಆಚರಣೆಗಳು ನಿಂತರೆ ಹಿಂದೂ ಧರ್ಮಕ್ಕೆ ನಷ್ಟವಿಲ್ಲ. ಎಡೆಸ್ನಾನಕ್ಕೆ ಬರುವವರ ಸಂಖ್ಯೆಯೂ ಕಡಿಮೆಯಾಗುತ್ತಿದೆ.
ಘರ್ಷಣೆಗೆ ಎಡೆಮಾಡುವ ಆಚರಣೆ ನಮಗೆ ಬೇಡ ಎಂದು ಅವರು ಪರ್ಯಾಯ ಪಲಿಮಾರು ಶ್ರೀಗಳ ನಿರ್ಧಾರಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications