Get Updates
Get notified of breaking news, exclusive insights, and must-see stories!

ಉಡುಪಿ ಅಷ್ಟಮಠಗಳ ಭಿನ್ನಾಭಿಪ್ರಾಯ ಮತ್ತೊಂದು ಮಜಲಿಗೆ

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ವಿವಾದಕಾರಿ ಹೇಳಿಕೆಯ ಹಿನ್ನಲೆಯಲ್ಲಿ ಉಡುಪಿಯ ಸೋದೆ ಮಠ ತಮ್ಮ ದ್ವಂದ್ವ ಮಠವಾದ ಶಿರೂರು ಮಠದ ಶ್ರೀಗಳಾದ ಲಕ್ಷ್ಮೀವರತೀರ್ಥರ ಮೇಲೆ ನೋಟಿಸ್ ಜಾರಿ ಮಾಡಿದೆ.

ಮಾರ್ಚ್ ಹದಿನೈದಕ್ಕೆ ನೋಟಿಸ್ ಜಾರಿಯಾಗಿದ್ದರೂ, ಶಿರೂರು ಶ್ರೀಗಳಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬರದ ಹಿನ್ನಲೆಯಲ್ಲಿ ಕಾದುನೋಡಿ ಮುಂದಿನ ನಿರ್ಧಾರಕ್ಕೆ ಬರಲು ಸೋದೆ ಮಠದ ನೇತೃತ್ವದಲ್ಲಿ ಅಷ್ಟಮಠಗಳ ಯತಿಗಳು ನಿರ್ಧರಿಸಿದ್ದಾರೆ.

ಏಕಾದಶಿ ವೃಥಾಚಾರಣೆ, ಜನ್ಮಾಷ್ಠಮಿ ಸೇರಿದಂತೆ ಹಲವು ವಿಷಯ ಮತ್ತು ಧಾರ್ಮಿಕ ವಿಚಾರಗಳಲ್ಲಿ ಉಡುಪಿ ಮಠಗಳ ಭಿನ್ನಾಭಿಪ್ರಾಯ ಸಾಕಷ್ಟು ಬಾರಿ ಬಹಿರಂಗಗೊಂಡಿತ್ತು. ಪೇಜಾವರ ಹಿರಿಯ ಶ್ರೀಗಳ ಸಮ್ಮುಖದಲ್ಲಿ ಅದಕ್ಕೆ ಹಲವು ಬಾರಿ ಪರಿಹಾರಕಂಡುಕೊಳ್ಲಲಾಗಿತ್ತು.

ಇತ್ತೀಚೆಗೆ ಕೃಷ್ಣಮಠದ ಪಾರ್ಕಿಂಗ್ ವಿಚಾರದಲ್ಲಿ ಶಿರೂರು ಶ್ರೀಗಳು, ಅನಧಿಕೃತವಾಗಿ ತಲೆಯೆತ್ತಿದ ಅಂಗಡಿಗಳನ್ನು ನೆಲಸಮ ಮಾಡಿಸಿ, ನೇರವಾಗಿ ಪೇಜಾವರ ಮಠದ ಮೇಲೆ ಆರೋಪ ಹೊರಿಸಿದ್ದರು. ಇದಾದ ನಂತರ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಷ್ಟಮಠದ ಶ್ರೀಗಳು ಚರ್ಚಿಸಿ, ಶಿರೂರು ಶ್ರೀಗಳಿಗೆ ಪಾರ್ಕಿಂಗ್ ಜಾಗದ ಜವಾಬ್ದಾರಿ ವಹಿಸಿದ್ದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಲವು ವರ್ಷಗಳ ಹಿಂದೆ ಶಿರೂರು ಶ್ರೀಗಳು ಮಾತನಾಡಿದ್ದ ದೃಶ್ಯ ಕನ್ನಡದ ಖಾಸಗಿ ಮಾಧ್ಯಮವೊಂದರಲ್ಲಿ ಕೆಲವು ದಿನಗಳ ಹಿಂದೆ ಪ್ರಸಾರವಾಗಿತ್ತು. ಇದರಲ್ಲಿ ಶಿರೂರು ಶ್ರೀಗಳು ಇತರ ಪೀಠಾಧಿಪತಿಗಳ ವೈಯಕ್ತಿಕ ವಿಚಾರದ ಬಗ್ಗೆ ಮಾತನ್ನಾಡಿದ್ದರು. ಇದು ಉಡುಪಿ ಭಾಗದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿತ್ತು. ಮುಂದೆ ಓದಿ..

ರಾಜಕೀಯಕ್ಕೆ ಎಂಟ್ರಿ ಕೊಡುವ ನಿರ್ಧಾರಕ್ಕೆ

ರಾಜಕೀಯಕ್ಕೆ ಎಂಟ್ರಿ ಕೊಡುವ ನಿರ್ಧಾರಕ್ಕೆ

ಕೆಲವು ದಿನಗಳ ಹಿಂದೆ ಶಿರೂರು ಶ್ರೀಗಳು ಇದ್ದಕ್ಕಿದ್ದಂತೇ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಹೇಳಿಕೆಯನ್ನು ನೀಡಿದ್ದರು. ಬಿಜೆಪಿ ಟಿಕೆಟ್ ಕೊಟ್ಟರೆ ಆ ಪಕ್ಷದಿಂದ ಇಲ್ಲದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಶ್ರೀಗಳು ಹೇಳಿದ್ದರು. ಜೊತೆಗೆ, ಉಡುಪಿ ಜಿಲ್ಲಾ ಬಿಜೆಪಿ ಘಟಕದ ವಿರುದ್ದ ಕಿಡಿಕಾರಿದ್ದರೆ, ಜಿಲ್ಲಾ ಉಸ್ತುವಾರಿ ಪ್ರಮೋದ್ ಮಧ್ವರಾಜ್ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಆ ವಿಡಿಯೋ ಪ್ರಸಾರವಾಗಿತ್ತು.

ಉಡುಪಿ ಅಷ್ಟಮಠದ ಇತರ ಯತಿಗಳಿಗೂ ಮಕ್ಕಳಿದ್ದಾರೆ

ಉಡುಪಿ ಅಷ್ಟಮಠದ ಇತರ ಯತಿಗಳಿಗೂ ಮಕ್ಕಳಿದ್ದಾರೆ

ವಿಡಿಯೋದಲ್ಲಿ, 'ಸಣ್ಣ ವಯಸ್ಸಿನಲ್ಲೇ ಸನ್ಯಾಸತ್ವ ಸ್ವೀಕರಿಸಿರುತ್ತೇವೆ. ನಮಗೂ ಆಸೆ ಅನ್ನೋದು ಇರುವುದಿಲ್ಲವೇ? ನನಗೆ ಮಕ್ಕಳು ಇರುವುದು ಹೌದು, ಇದೇನು ಹೊಸದಲ್ಲ. ಉಡುಪಿ ಅಷ್ಟಮಠದ ಇತರ ಯತಿಗಳಿಗೂ ಮಕ್ಕಳಿದ್ದಾರೆ. ಕೆಲವರಿಗೆ ನಾಲ್ಕೈದು ಮಕ್ಕಳಿದ್ದಾರೆ. ಪರ್ಯಾಯ ಅನ್ನುವುದು ದುಡ್ಡುಮಾಡಲು ಇರುವಂತದ್ದು' ಎಂದು ಹೇಳಿರುವ ವಿಡಿಯೋ ಮಾಧ್ಯಮವೊಂದರಲ್ಲಿ ಪ್ರಸಾರವಾಗಿತ್ತು.

ಶಿರೂರು ಶ್ರೀಗಳಿಗೆ ನೋಟಿಸ್ ನೀಡಿದ ಅಷ್ಟಮಠ

ಶಿರೂರು ಶ್ರೀಗಳಿಗೆ ನೋಟಿಸ್ ನೀಡಿದ ಅಷ್ಟಮಠ

ಕಳೆದ ಮಾರ್ಚ್ ಹದಿನೈದರಂದು ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ (ಪುತ್ತಿಗೆ ಶ್ರೀಗಳನ್ನು ಹೊರತು ಪಡಿಸಿ), ವಿಡಿಯೋದ ಬಗ್ಗೆ ಸ್ಪಷ್ಟನೆ ನೀಡುವಂತೆ ಶಿರೂರು ಶ್ರೀಗಳಿಗೆ ನೋಟಿಸ್ ನೀಡುವ ತೀರ್ಮಾನಕ್ಕೆ ಬಂದು ಅಂತೆಯೇ ನೋಟಿಸ್ ಜಾರಿ ಮಾಡಲಾಗಿತ್ತು. ಜೊತೆಗೆ, ಶ್ರೀಗಳ ವಿರುದ್ದ ಸೂಕ್ತ ಕ್ರಮತೆಗೆದುಕೊಳ್ಳುವ ನಿರ್ಧಾರಕ್ಕೆ ಬರಲಾಗಿತ್ತು.

ಸೋದೆ ಮಠದಿಂದ ನೋಟಿಸ್ ಜಾರಿ

ಸೋದೆ ಮಠದಿಂದ ನೋಟಿಸ್ ಜಾರಿ

ನೋಟಿಸ್ ನೀಡಿ ಎರಡು ವಾರ ಆಗುತ್ತಾ ಬಂದರೂ, ಶಿರೂರು ಶ್ರೀಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದುದರಿಂದ, ಅವರ ಮುಂದಿನ ನಡೆ ನೋಡಿ ನಿರ್ಧಾರ ತೆಗೆದುಕೂಳ್ಳುವ ತೀರ್ಮಾನಕ್ಕೆ ಅಷ್ಟಮಠದ ಯತಿಗಳು ಬಂದಿದ್ದಾರೆ. ಸೋದೆ ಮಠ, ಶಿರೂರು ಮಠದ ದ್ವಂದ್ವ ಮಠವಾಗಿರುವುದರಿಂದ ಕಾನೂನಾತ್ಮಕ ತೊಡಕು ಬರದಂತೆ ನೋಡಿಕೊಳ್ಳಲು ಸೋದೆ ಮಠದಿಂದ ನೋಟಿಸ್ ಜಾರಿ ಮಾಡಲಾಗಿದೆ.

ಅಷ್ಟಮಠಗಳಿಗೆ ಒಂದೊಂದಕ್ಕೂ ದ್ವಂದ್ವ ಮಠ

ಅಷ್ಟಮಠಗಳಿಗೆ ಒಂದೊಂದಕ್ಕೂ ದ್ವಂದ್ವ ಮಠ

ಉಡುಪಿ ಅಷ್ಟಮಠಗಳಿಗೆ ಒಂದೊಂದಕ್ಕೂ ದ್ವಂದ್ವ ಮಠಗಳಿರುತ್ತವೆ. ಮಠದ ಯತಿಗಳು ವೃಂದಾವನಸ್ಥವಾದರೆ ಅಥವಾ ಪಟ್ಟದ ದೇವರಿಗೆ ಪೂಜೆ ನಿಲ್ಲದಂತೆ ನೋಡಿಕೊಳ್ಳಲು ಈ ಪದ್ದತಿ ಜಾರಿಯಲ್ಲಿದೆ. ಶಿರೂರು-ಸೋದೆ, ಪಲಿಮಾರು-ಅದಮಾರು, ಕೃಷ್ಣಾಪುರ-ಪುತ್ತಿಗೆ, ಕಾಣಿಯೂರು-ಪೇಜಾವರ - ದ್ವಂದ್ವ ಮಠಗಳು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+