ವನ್ಯಜೀವಿ ಅಧಿಕಾರಿಗಳ ಮುಂದಾಲೋಚನೆ: ಕಾಡುಪ್ರಾಣಿಗಳ ದಾಹ ನೀಗಿಸಿದ ನೀರಿನ ತೊಟ್ಟಿ
ಉಡುಪಿ, ಮೇ 05: ಈ ಬಾರಿ ಉಡುಪಿ ಜಿಲ್ಲೆಯ ನಗರ ಪ್ರದೇಶದ ಜೊತೆಗೆ ಗ್ರಾಮೀಣ ಪ್ರದೇಶದಲ್ಲೂ ಕುಡಿಯುವ ನೀರಿನ ಬವಣೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ವನ್ಯಜೀವಿಗಳು ಕೂಡ ಕುಡಿಯಲು ನೀರಿಲ್ಲದೆ ಪರದಾಡುವ ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ಸಿದ್ದಾಪುರ ವನ್ಯಜೀವಿ ವಿಭಾಗದ ಅಧಿಕಾರಿಗಳ ಮುಂದಾಲೋಚನೆ ಈ ಬಾರಿ ವನ್ಯಜೀವಿಗಳಿಗೆ ನೀರುಣಿಸುವಂತೆ ಮಾಡುತ್ತಿದೆ.
ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮತ್ತೆ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಎದುರಾಗಿದೆ ಎಂದರೆ ತಪ್ಪಾಗಲಾರದು. ಜಲಮೂಲಗಳನ್ನು ಅಭಿವೃದ್ಧಿಪಡಿಸುವಲ್ಲಿ ಜಿಲ್ಲಾಡಳಿತ ಹಿಂದೆ ಬಿದ್ದಿರುವುದು ಮತ್ತು ಸಾಕಷ್ಟು ಮುಂಜಾಗ್ರತೆಯ ಕೊರತೆ ಈ ಕುಡಿಯುವ ನೀರಿನ ಭವಣಿಗೆ ಕಾರಣವಾಗಿದೆ ಎನ್ನಬಹುದು. ಸದ್ಯ ನಗರ ಪ್ರದೇಶದಲ್ಲಿ ಇರುವ ನೀರನ್ನು ಉಳಿಸಿ ಮಳೆಗಾಲದ ಆರಂಭದವರೆಗೆ ನೀಡುವ ಬಗ್ಗೆ ಚಿಂತನೆಗಳು ನಡೆಯುತ್ತಿದ್ದರೆ, ಗ್ರಾಮೀಣ ಪ್ರದೇಶದಲ್ಲಿರುವ ಜನರು ಹತ್ತಿರದಲ್ಲಿರುವ ಜಲಮೂಲಗಳನ್ನೇ ಅರಸಿಕೊಂಡು ಹೋಗಿ ನೀರಿನ ಬವಣಿಯನ್ನು ತೀರಿಸಿಕೊಳ್ಳುತ್ತಿದ್ದಾರೆ.

ಸದ್ಯ ನೀರಿನ ಸಮಸ್ಯೆ ಕೇವಲ ಮನುಷ್ಯರಿಗೆ ಅಷ್ಟೇ ಅಲ್ಲ ಪ್ರಾಣಿ ಪಕ್ಷಿಗಳಿಗೂ ತಟ್ಟಿದೆ ಎಂದರೆ ನೀವು ನಂಬಲೇಬೇಕು. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಬರುವ ಸಿದ್ದಾಪುರ ವನ್ಯಜೀವಿ ವಿಭಾಗದಲ್ಲಿ ಸಾಕಷ್ಟು ಕಾಡು ಪ್ರಾಣಿಗಳು ಕುಡಿಯುವ ನೀರಿಗಾಗಿ ಹಾಹಾಕಾರ ಪಡುವ ಪರಿಸ್ಥಿತಿ ಎದುರಾಗಿತ್ತು. ಅಧಿಕಾರಿಗಳ ದೂರದೃಷ್ಟಿಯಿಂದ ಈ ಬಾರಿ ಕಾಡುಪ್ರಾಣಿಗಳಿಗೂ ಕೂಡ ಸೂಕ್ತ ನೀರಿನ ವ್ಯವಸ್ಥೆಯಾಗುತ್ತಿದೆ.
ಸಿದ್ದಾಪುರ ವನ್ಯಜೀವಿ ವಿಭಾಗದ ಸಂತೋಷ್ ಪವಾರ್ ಮತ್ತು ತಂಡ ಕಳೆದ ಬಾರಿ ಕಾಡುಪ್ರಾಣಿಗಳಿಗೆ ಆಗಿರುವ ಸಮಸ್ಯೆಯನ್ನು ಗಮನದಲ್ಲಿರಿಸಿ ಈ ಬಾರಿ ಅಂತಹ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದ್ದಾರೆ. ಕಾಡಿನ ಮಧ್ಯೆ ಹಾದು ಹೋಗಿರುವ ರಸ್ತೆಯನ್ನು ದಾಟಿ ಕಾಡುಪ್ರಾಣಿಗಳು ನೀರು ಕುಡಿಯಲು ಹೋಗಬೇಕಾದ ಪರಿಸ್ಥಿತಿ ಇತ್ತು, ಇದರಿಂದ ಸಾಕಷ್ಟು ಅಪಘಾತಗಳು ಕೂಡ ಸಂಭವಿಸ್ತಿದ್ದವು. ಹೀಗಾಗಿ ಆಯಕಟ್ಟಿನ ಜಾಗಗಳಲ್ಲಿ ನೀರಿನ ಟ್ಯಾಂಕ್ಗಳನ್ನು ಮಾಡುವ ಮೂಲಕ ಕಾಡು ಪ್ರಾಣಿಗಳಿಗೂ ಕೂಡ ನೀರು ಉಳಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.
ಸಿದ್ದಾಪುರ ವನ್ಯಜೀವಿ ವಿಭಾಗದ ಸುಮಾರು 15 ಕಡೆಗಳಲ್ಲಿ ಇಂತಹ ನೀರಿನ ಟ್ಯಾಂಕ್ಗಳನ್ನು ನಿರ್ಮಾಣ ಮಾಡಲಾಗಿದ್ದು ಎರಡು ದಿನಗಳಿಗೊಮ್ಮೆ ಟ್ಯಾಂಕರ್ ಮೂಲಕ ನೀರು ತುಂಬಿಸುವ ಕಾರ್ಯವು ನಡೆಯುತ್ತಿದೆ. ಈ ವ್ಯಾಪ್ತಿಯಲ್ಲಿ ಚಿರತೆ, ಕಾಡುಕೋಣ, ಕಾಡು ಹಂದಿ, ಕಡವೆ, ಜಿಂಕೆ, ಮುಳ್ಳುಹಂದಿ, ನವಿಲು, ಮಂಗ ಮುಂತಾದ ಪ್ರಾಣಿ ಪಕ್ಷಿಗಳು ಕೂಡ ವನ್ಯಜೀವಿ ವಿಭಾಗ ನಿರ್ಮಿಸಿದ ತೊಟ್ಟಿಯ ನೀರನ್ನೇ ಈ ಬಾರಿ ಆಶ್ರಯಿಸಿದೆ.

ಇಲಾಖೆ ಈ ತೊಟ್ಟಿಗಳನ್ನು ಯಾವ ಯಾವ ಪ್ರಾಣಿಗಳು ನೀರಿಗಾಗಿ ಬಳಸುತ್ತೇವೆ ಎನ್ನುವುದನ್ನು ಕೂಡ ಟ್ರ್ಯಾಕ್ ಕ್ಯಾಮಾರದ ಮೂಲಕ ಸೆರೆ ಹಿಡಿಯುವ ಪ್ರಯತ್ನವನ್ನ ಮಾಡಿದ್ದಾರೆ. ಇದೇ ಮಾಹಿತಿ ಆಧರಿಸಿ ಮುಂದಿನ ದಿನಗಳಲ್ಲಿ ಪ್ರಾಣಿಗಳ ಗಣತಿಯಂತೆ ಇನ್ನಷ್ಟು ಹೆಚ್ಚಿನ ತೊಟ್ಟಿಗಳನ್ನು ನಿರ್ಮಾಣ ಮಾಡುವ ಯೋಜನೆ ಇಲಾಖೆಯದ್ದು. ಕಾಡು ಪ್ರಾಣಿಗಳ ನೀರಡಿಕೆಯನ್ನು ಇಂಗಿಸುವ ಕೆಲಸಕ್ಕೆ ವನ್ಯಜೀವಿ ವಿಭಾಗ ಕೈ ಹಾಕಿದೆ. ಈ ಕಾರ್ಯವನ್ನು ಗಮನಿಸಿರುವ ಸ್ಥಳೀಯರು ಕಾಡು ಪ್ರಾಣಿಗಳಿಗೆ ಸೂಕ್ತ ವ್ಯವಸ್ಥೆ ಮಾಡುತ್ತಿರುವ ಇಲಾಖೆಯನ್ನು ಶ್ಲಾಘಿಸಿದ್ದಾರೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಎದುರಾಗುವ ನೀರಿನ ಸಮಸ್ಯೆ ತಡೆಯಲು ಸಚಿವ ಪ್ರಿಯಾಂಕ್ ಖರ್ಗೆ ಮಾಸ್ಟರ್ ಪ್ಲಾನ್ -
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
South Western Railway: ಹುಬ್ಬಳ್ಳಿಯಿಂದ ರಾಮೇಶ್ವರಂಗೆ ವಿಶೇಷ ರೈಲು ಸಂಚಾರ; ಮಾರ್ಚ್ 21ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ












Click it and Unblock the Notifications