ಮಣಿಪಾಲದಲ್ಲಿ ಬೈಕ್ ಮೇಲೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಕಳೆದ ವಾರ, ಗೋವಾ ಪೊಲೀಸ್ನ ಅಪರಾಧ ವಿಭಾಗ ಮತ್ತು ಮಾದಕ ದ್ರವ್ಯ ನಿಗ್ರಹ ದಳದ ಜಂಟಿ ಕಾರ್ಯಾಚರಣೆಯಲ್ಲಿ ಕರ್ನಾಟಕದ ಮೂವರು ಸೇರಿದಂತೆ ಒಟ್ಟು ಏಳು ಜನರ ಮೇಲೆ ಪ್ರಕರಣ ದಾಖಲಿಸಿತ್ತು.
ಉಡುಪಿ, ಫೆಬ್ರವರಿ. 23: ಉಡುಪಿಯ ಮಣಿಪಾಲದಲ್ಲಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಆರೋಪಿಯನ್ನು ಇಕ್ಬಾಲ್ ಶೇಖ್ (32) ಎಂದು ಗುರುತಿಸಲಾಗಿದ್ದು, ಡ್ರಗ್ಸ್ ಸರಬರಾಜು ಮಾಡುತ್ತಿದ್ದಾಗ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬಂಧಿತ ಆರೋಪಿ ಬಳಿಯಿದ್ದ ಒಟ್ಟು 36 ಗ್ರಾಂ ಗಾಂಜಾ, ಪ್ಲಾಸ್ಟಿಕ್ ಕವರ್ಗಳಲ್ಲಿ ಇದ್ದ 0.36 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ವೈ ಫೈ ರೂಟರ್ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾಲುಗಳ ಒಟ್ಟು ಮೌಲ್ಯ ಅಂದಾಜು 44,700 ರೂಪಾಯಿ ಎನ್ನಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕಳೆದ ವಾರ, ಗೋವಾ ಪೊಲೀಸ್ನ ಅಪರಾಧ ವಿಭಾಗ ಮತ್ತು ಮಾದಕ ದ್ರವ್ಯ ನಿಗ್ರಹ ದಳದ ಜಂಟಿ ಕಾರ್ಯಾಚರಣೆಯಲ್ಲಿ ಕರ್ನಾಟಕದ ಮೂವರು ಸೇರಿದಂತೆ ಒಟ್ಟು ಏಳು ಜನರ ಮೇಲೆ ಪ್ರಕರಣ ದಾಖಲಿಸಿತ್ತು. ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಗೋವಾದ ವಾಗಟರ್ ಬೀಚ್ನಲ್ಲಿ ಶನಿವಾರ ನಡೆದ ತಪಾಸಣೆಯಲ್ಲಿ ಎಲ್ಲ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ರಾಜ್ಯದ ಇಬ್ಬರು ಆರೋಪಿಗಳನ್ನು ಸಂದೇಶ್ ಎಸ್ ನಾಯ್ಕ್ (28) ಮತ್ತು ಎಂ ವಿಜಯ ಶಂಕರ್ (24) ಎಂದು ಗುರುತಿಸಲಾಗಿದೆ. ಪ್ರಕರಣದ ಇತರ ಆರೋಪಿಗಳು ಕೇರಳ ಮತ್ತು ಗುಜರಾತ್ನವರಾಗಿದ್ದು, ಎಲ್ಲರೂ ಪ್ರವಾಸಕ್ಕೆಂದು ಗೋವಾಗೆ ಬಂದಿದ್ದರು. SOTAKO ಯಂತ್ರದ ಸಹಾಯದಿಂದ ತಪಾಸಣೆಯನ್ನು ಮಾಡಲಾಗಿದ್ದು, ಆರೋಪಿಗಳು ಪಾಸಿಟಿವ್ ಬಂದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications