Get Updates
Get notified of breaking news, exclusive insights, and must-see stories!

ಉಡುಪಿ ಪ್ರತ್ಯೇಕ ಘಟನೆಗಳು: ಸಮುದ್ರದಲ್ಲಿ ಮುಳುಗಿ ಓರ್ವ ಸಾವು, ಐವರ ರಕ್ಷಣೆ

ಉಡುಪಿ, ಅ. 06: ರಾಜ್ಯದ ಕರಾವಳಿ ಉಡುಪಿ ಜಿಲ್ಲೆಯ ಮಲ್ಪೆ ಕಡಲತೀರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಒಬ್ಬ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಐವರನ್ನು ಬೀಚ್ ಕಾವಲುಗಾರರು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಸಲಾಮ್ ಚೆರ್ರಿ ಮತ್ತು ಮೈಸೂರಿನ ಅಬ್ರಾರ್ ಎಂಬ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಇಬ್ಬರು ಮಂಗಳವಾರ ಭಾರೀ ಅಲೆಗಳಿಗೆ ಸಿಲುಕಿ ಸಮುದ್ರದಲ್ಲಿ ನಾಪತ್ತೆಯಾಗಿದ್ದರು. ತಕ್ಷಣ ರಕ್ಷಣೆಗೆ ಧಾವಿಸಿದ ಜೀವರಕ್ಷಕ ಸಿಬ್ಬಂದಿ ಇಬ್ಬರನ್ನೂ ರಕ್ಷಿಸಿದ್ದಾರೆ. ಇಬ್ಬರನ್ನೂ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೈಸೂರಿನ ಅಬ್ರಾರ್ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

One drowned to death, five rescued from Udupi beach

ಮತ್ತೊಂದು ಪ್ರಕರಣದಲ್ಲಿ ಮೈಸೂರಿನ ತೋಶಿಬ್ ಮಲ್ಪೆ ಬೀಚ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಎಚ್ಚೆತ್ತ ಲೈಫ್ ಗಾರ್ಡ್ ಅವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡಿನ ಸೇಲಂನ ಸೆಂಥಿಲ್, ಬಿಜಾಪುರದ ಬಸರಾಜು, ನಮಾಜ್ ಮತ್ತು ಬೆಂಗಳೂರಿನ ಸೋಹಮ್ ಗೋಶ್ ಕೂಡ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಎಲ್ಲಾ ನಾಲ್ವರನ್ನು ಲೈಫ್ ಗಾರ್ಡ್‌ಗಳು ರಕ್ಷಿಸಿದ್ದಾರೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+