ಉಡುಪಿ ಪ್ರತ್ಯೇಕ ಘಟನೆಗಳು: ಸಮುದ್ರದಲ್ಲಿ ಮುಳುಗಿ ಓರ್ವ ಸಾವು, ಐವರ ರಕ್ಷಣೆ
ಉಡುಪಿ, ಅ. 06: ರಾಜ್ಯದ ಕರಾವಳಿ ಉಡುಪಿ ಜಿಲ್ಲೆಯ ಮಲ್ಪೆ ಕಡಲತೀರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಒಬ್ಬ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಐವರನ್ನು ಬೀಚ್ ಕಾವಲುಗಾರರು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ಸಲಾಮ್ ಚೆರ್ರಿ ಮತ್ತು ಮೈಸೂರಿನ ಅಬ್ರಾರ್ ಎಂಬ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಇಬ್ಬರು ಮಂಗಳವಾರ ಭಾರೀ ಅಲೆಗಳಿಗೆ ಸಿಲುಕಿ ಸಮುದ್ರದಲ್ಲಿ ನಾಪತ್ತೆಯಾಗಿದ್ದರು. ತಕ್ಷಣ ರಕ್ಷಣೆಗೆ ಧಾವಿಸಿದ ಜೀವರಕ್ಷಕ ಸಿಬ್ಬಂದಿ ಇಬ್ಬರನ್ನೂ ರಕ್ಷಿಸಿದ್ದಾರೆ. ಇಬ್ಬರನ್ನೂ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಮೋದ್ ಮುತಾಲಿಕ್ ಶ್ರೇಯೋಭಿವೃದ್ಧಿಗಾಗಿ 'ನರಸಿಂಹ ಯಾಗ'
ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೈಸೂರಿನ ಅಬ್ರಾರ್ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಮೈಸೂರಿನ ತೋಶಿಬ್ ಮಲ್ಪೆ ಬೀಚ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಎಚ್ಚೆತ್ತ ಲೈಫ್ ಗಾರ್ಡ್ ಅವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡಿನ ಸೇಲಂನ ಸೆಂಥಿಲ್, ಬಿಜಾಪುರದ ಬಸರಾಜು, ನಮಾಜ್ ಮತ್ತು ಬೆಂಗಳೂರಿನ ಸೋಹಮ್ ಗೋಶ್ ಕೂಡ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಎಲ್ಲಾ ನಾಲ್ವರನ್ನು ಲೈಫ್ ಗಾರ್ಡ್ಗಳು ರಕ್ಷಿಸಿದ್ದಾರೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.