ಉಡುಪಿ ಕೃಷ್ಣಮಠ ಭಕ್ತರಿಗೆ ಮುಕ್ತ: ದರ್ಶನ ಪಡೆದ ನೂರಾರು ಭಕ್ತರು
ಉಡುಪಿ, ಸೆಪ್ಟೆಂಬರ್ 28: ಕೋವಿಡ್-19 ಕಾರಣದಿಂದ ಕಳೆದ ಆರು ತಿಂಗಳಿನಿಂದ ಮುಚ್ಚಿದ್ದ ಉಡುಪಿಯ ಕೃಷ್ಣಮಠದಲ್ಲಿ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ. ಮೊದಲ ದಿನವಾದ ಇಂದು ನೂರಾರು ಭಕ್ತರು ದೇವರ ದರ್ಶನ ಪಡೆದರು.
ಮಾರ್ಚ್ 23 ರಿಂದ ಎಲ್ಲ ದೇವಸ್ಥಾನ, ಮಠಗಳಂತೆ ಕೃಷ್ಣಮಠವನ್ನೂ ಮುಚ್ಚಲಾಗಿತ್ತು. ಆದರೆ ರಾಜ್ಯದ ಹಲವು ದೇವಸ್ಥಾನಗಳು, ಮಠಗಳು ಅನ್ ಲಾಕ್ ಬಳಿಕ ತೆರೆದಿದ್ದವು. ಆದರೆ ಶ್ರೀಕೃಷ್ಣ ಮಠ ಮಾತ್ರ ನಿನ್ನೆ ತನಕ ಭಕ್ತರಿಗೆ ಪ್ರವೇಶಾವಕಾಶ ನೀಡಿರಲಿಲ್ಲ. ಇಂದಿನಿಂದ ಹಲವು ಷರತ್ತುಗಳೊಂದಿಗೆ ಭಕ್ತರಿಗೆ ತೆರೆದಿದೆ.
ಮುಖ್ಯವಾಗಿ ಇವತ್ತಿನಿಂದ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 2 ರಿಂದ ಸಂಜೆ 5ರ ತನಕ ಮಾತ್ರ ಕೃಷ್ಣಮಠ ಪ್ರವೇಶಿದಲು ಭಕ್ತರಿಗೆ ಅವಕಾಶ ಇದೆ.

ಕೋವಿಡ್-19 ನ ಎಲ್ಲ ನಿಯಮಗಳನ್ನು ಪಾಲಿಸಿ, ದೇವರ ದರ್ಶನ ಮಾಡಿ ತೆರಳಬೇಕು. ಬೇರೆ ಬೇರೆ ದೇವರ ಸೇವೆಗಳು ಮತ್ತು ಅನ್ನ ಸಂತರ್ಪಣೆಯನ್ನು ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಪ್ರಾರಂಭಿಸುವುದಾಗಿ ಮಠದ ಮೂಲಗಳು ತಿಳಿಸಿವೆ.

ಕೋವಿಡ್ ಹಿನ್ನೆಲೆಯಲ್ಲಿ ಮಠದ ಆಡಳಿತ ಮಂಡಳಿ ಸಾಕಷ್ಟು ಮುಂಜಾಗರೂಕತೆಗಳನ್ನೂ ತೆಗೆದುಕೊಂಡಿದ್ದು, ಭಕ್ತರ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಒಳಪ್ರವೇಶಿಸುವ ಭಕ್ತರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಹ್ಯಾಂಡ್ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಸರತಿ ಸಾಲು ನಿಲ್ಲುವಾಗಲೂ ದೈಹಿಕ ಅಂತರ ಕಾಪಾಡುವಂತೆ ಮಠದ ಸಿಬ್ಬಂದಿಗಳು ಭಕ್ತರಲ್ಲಿ ಮನವಿ ಮಾಡುತ್ತಿದ್ದಾರೆ. ಮಠ ಪ್ರವೇಶಿಸುವ ಮಾರ್ಗವನ್ನೂ ಬದಲಿಸಲಾಗಿದ್ದು, ರಾಜಾಂಗಣ ಮೂಲಕ ಮಾತ್ರ ಭಕ್ತರಿಗೆ ಒಳ ಪ್ರವೇಶಿಸಬಹುದಾಗಿದೆ. ಸ್ಥಳೀಯ ಭಕ್ತರಿಗೆ ಪಾಸ್ ನೀಡುವ ನಿರ್ಧಾರಕ್ಕೆ ಕೃಷ್ಣಮಠ ಬಂದಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications