ಉಡುಪಿ ಕೃಷ್ಣಮಠ ಭಕ್ತರಿಗೆ ಮುಕ್ತ: ದರ್ಶನ ಪಡೆದ ನೂರಾರು ಭಕ್ತರು
ಉಡುಪಿ, ಸೆಪ್ಟೆಂಬರ್ 28: ಕೋವಿಡ್-19 ಕಾರಣದಿಂದ ಕಳೆದ ಆರು ತಿಂಗಳಿನಿಂದ ಮುಚ್ಚಿದ್ದ ಉಡುಪಿಯ ಕೃಷ್ಣಮಠದಲ್ಲಿ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ. ಮೊದಲ ದಿನವಾದ ಇಂದು ನೂರಾರು ಭಕ್ತರು ದೇವರ ದರ್ಶನ ಪಡೆದರು.
ಮಾರ್ಚ್ 23 ರಿಂದ ಎಲ್ಲ ದೇವಸ್ಥಾನ, ಮಠಗಳಂತೆ ಕೃಷ್ಣಮಠವನ್ನೂ ಮುಚ್ಚಲಾಗಿತ್ತು. ಆದರೆ ರಾಜ್ಯದ ಹಲವು ದೇವಸ್ಥಾನಗಳು, ಮಠಗಳು ಅನ್ ಲಾಕ್ ಬಳಿಕ ತೆರೆದಿದ್ದವು. ಆದರೆ ಶ್ರೀಕೃಷ್ಣ ಮಠ ಮಾತ್ರ ನಿನ್ನೆ ತನಕ ಭಕ್ತರಿಗೆ ಪ್ರವೇಶಾವಕಾಶ ನೀಡಿರಲಿಲ್ಲ. ಇಂದಿನಿಂದ ಹಲವು ಷರತ್ತುಗಳೊಂದಿಗೆ ಭಕ್ತರಿಗೆ ತೆರೆದಿದೆ.
ಮುಖ್ಯವಾಗಿ ಇವತ್ತಿನಿಂದ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 2 ರಿಂದ ಸಂಜೆ 5ರ ತನಕ ಮಾತ್ರ ಕೃಷ್ಣಮಠ ಪ್ರವೇಶಿದಲು ಭಕ್ತರಿಗೆ ಅವಕಾಶ ಇದೆ.

ಕೋವಿಡ್-19 ನ ಎಲ್ಲ ನಿಯಮಗಳನ್ನು ಪಾಲಿಸಿ, ದೇವರ ದರ್ಶನ ಮಾಡಿ ತೆರಳಬೇಕು. ಬೇರೆ ಬೇರೆ ದೇವರ ಸೇವೆಗಳು ಮತ್ತು ಅನ್ನ ಸಂತರ್ಪಣೆಯನ್ನು ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಪ್ರಾರಂಭಿಸುವುದಾಗಿ ಮಠದ ಮೂಲಗಳು ತಿಳಿಸಿವೆ.

ಕೋವಿಡ್ ಹಿನ್ನೆಲೆಯಲ್ಲಿ ಮಠದ ಆಡಳಿತ ಮಂಡಳಿ ಸಾಕಷ್ಟು ಮುಂಜಾಗರೂಕತೆಗಳನ್ನೂ ತೆಗೆದುಕೊಂಡಿದ್ದು, ಭಕ್ತರ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಒಳಪ್ರವೇಶಿಸುವ ಭಕ್ತರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಹ್ಯಾಂಡ್ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಸರತಿ ಸಾಲು ನಿಲ್ಲುವಾಗಲೂ ದೈಹಿಕ ಅಂತರ ಕಾಪಾಡುವಂತೆ ಮಠದ ಸಿಬ್ಬಂದಿಗಳು ಭಕ್ತರಲ್ಲಿ ಮನವಿ ಮಾಡುತ್ತಿದ್ದಾರೆ. ಮಠ ಪ್ರವೇಶಿಸುವ ಮಾರ್ಗವನ್ನೂ ಬದಲಿಸಲಾಗಿದ್ದು, ರಾಜಾಂಗಣ ಮೂಲಕ ಮಾತ್ರ ಭಕ್ತರಿಗೆ ಒಳ ಪ್ರವೇಶಿಸಬಹುದಾಗಿದೆ. ಸ್ಥಳೀಯ ಭಕ್ತರಿಗೆ ಪಾಸ್ ನೀಡುವ ನಿರ್ಧಾರಕ್ಕೆ ಕೃಷ್ಣಮಠ ಬಂದಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications