Get Updates
Get notified of breaking news, exclusive insights, and must-see stories!

ಕುಂದಾಪುರ ದುರ್ಗಾಂಬ ಟ್ರಾವೆಲ್ಸ್ ಮಾಲೀಕ ರಸ್ತೆ ಅಪಘಾತದಲ್ಲಿ ವಿಧಿವಶ

ಕುಂದಾಪುರ ದುರ್ಗಾಂಬ ಟ್ರಾವೆಲ್ಸ್ ಮಾಲೀಕ ರಸ್ತೆ ಅಪಘಾತದಲ್ಲಿ ವಿಧಿವಶ

ಉಡುಪಿ, ಸೆ 14: ರಾಜ್ಯದ ಪ್ರಮುಖ ಖಾಸಗಿ ಬಸ್ ಸಂಸ್ಥೆಗಳಲ್ಲಿ ಒಂದಾದ ಶ್ರೀದುರ್ಗಾಂಬ ಟ್ರಾವೆಲ್ಸ್ ಮಾಲೀಕ ಸುನಿಲ್ ಚಾತ್ರ, ಶುಕ್ರವಾರ (ಸೆ 14) ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ರಸ್ತೆ ಅಪಘಾತದಲ್ಲಿ ವಿಧಿವಶರಾಗಿದ್ದಾರೆ.

ತಮಿಳುನಾಡಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುನಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸುನಿಲ್ ತಮ್ಮ ಮಿಟ್ಸುಬಿಸಿ ಪಜೆರೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

Owner of Sri Durgamba Travels Sunil Chatra died in road accident

ಕುಂದಾಪುರ ಮೂಲದ ದುರ್ಗಾಂಬಾ ಟ್ರಾವೆಲ್ಸ್, ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ವಿವಿದೆಡೆಯಿಂದ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ಮುಂಬೈ ಮುಂತಾದ ಕಡೆ ಬಸ್ ಸೇವೆಯನ್ನು ಒದಗಿಸುತ್ತಿತ್ತು.

ಇದಲ್ಲದೇ, ಸಿಟಿ ಬಸ್ ಸೇವೆಯನ್ನು ಕೂಡಾ, ಉಡುಪಿ ಮತ್ತು ಕುಂದಾಪುರ ನಗರದಲ್ಲಿ ನೀಡುತ್ತಿತ್ತು.

ಜಿಲ್ಲೆಯ ಪ್ರಸಿದ್ದ ಕಮಲಶಿಲೆ ದೇವಾಲಯದ ಆಡಳಿತ ಮೊಕೇಸ್ತರರಾದ ಸಚ್ಚಿದಾನಂದ ಚಾತ್ರರ ಪುತ್ರರಾಗಿರುವ ಸುನಿಲ್, ಬಸ್ ವ್ಯವಹಾರಕ್ಕೆ ಸಂಬಂಧಪಟ್ಟಂತೆ ತಮಿಳುನಾಡಿಗೆ ತೆರಳಿದ್ದರು ಎನ್ನುವ ಮಾಹಿತಿಯಿದೆ.

ಮೃತರು (41) ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. (ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ)

{document1}

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+