ಉಡುಪಿ ಮಠದಲ್ಲಿ ನಡೆಯಿತು ಕಟ್ಟಿಗೆ ಮುಹೂರ್ತ
ಉಡುಪಿ, ಆಗಸ್ಟ್. 28 : ಮುಂಬರುವ ಜನವರಿಯಲ್ಲಿ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದ ವಿಧಿವಿಧಾನಗಳು ಆರಂಭಗೊಂಡಿವೆ. ಎರಡನೇ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಲಿರುವ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ ಮಠದ ಆವರಣದಲ್ಲಿ ನಡೆಯಿತು.
ಪಲಿಮಾರು ಮಠದ ದೇವರು, ಶ್ರೀಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ ಹಾಗೂ ಚಂದ್ರಮೌಳೀಶ್ವರ ಸೇರಿದಂತೆ ಎಲ್ಲಾ ದೇವರುಗಳಿಗೆ ಪರ್ಯಾಯ ಕೈಕರ್ಯಗಳು ಸಾಂಗವಾಗಿ ನೆರವೇರಲು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಪಲಿಮಾರು ಮಠದಿಂದ ಶ್ರೀಕೃಷ್ಣಮಠದ ಮಧ್ವ ಸರೋವರದ ಬಳಿಗೆ ಕಟ್ಟಿಗೆ ರಥ ನಿರ್ಮಾಣದ ಕಟ್ಟಿಗೆಯನ್ನು ಭವ್ಯ ಮೆರವಣಿಗೆಯಲ್ಲಿ ಹೊತ್ತು ತರಲಾಯಿತು.
Recommended Video


ವೇದವ್ಯಾಸ ಭಟ್ ಅವರ ಪೌರೋಹಿತ್ಯದಲ್ಲಿ ಕಟ್ಟಿಗೆ ರಥದ ಕಂಬಕ್ಕೆ ಪೂಜೆ ನೆರವೇರಿಸಿ ಮೂಹೂರ್ತ ನಡೆಸಲಾಯಿತು. ಈ ಸಂದರ್ಭದಲ್ಲಿ ಪಲಿಮಾರು ಮಠದ ದಿವಾನ ಶಿಬರೂರು ವೇದವ್ಯಾಸ ತಂತ್ರಿಗಳು, ಪರ್ಯಾಯ ಪೇಜಾವರ ಮಠದ ದಿವಾನ ರಘುರಾಮ ಆಚಾರ್ಯ,ಧಾರ್ಮಿಕ ಮುಖಂಡರುಗಳ ಸಗ್ರಿ ರಾಘವೇಂದ್ರ ಉಪಾಧ್ಯಾಯ, ಹರಿಕೃಷ್ಣ ಪುನರೂರು, ಲಕ್ಷ್ಮೀನಾರಾಯಣ ಭಟ್, ಪ್ರದೀಪ್ ಕುಮಾರ್ ಕಲ್ಕೂರ ಸಹಿತ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಪರ್ಯಾಯದ ಪೂರ್ವ ಸಿದ್ಧತೆಗಳಲ್ಲಿ ಕಟ್ಟಿಗೆ ಮಹೂರ್ತ ಮೂರನೆಯದ್ದಾಗಿದೆ. ಈಗಾಗಲೇ ಬಾಳೆ ಹಾಗೂ ಅಕ್ಕಿ ಮೂಹೂರ್ತಗಳು ನಡೆದಿದ್ದು, ಮುಂದೆ ಭತ್ತ ಮುಹೂರ್ತ ನಡೆಯಲಿದೆ. ಕಟ್ಟಿಗೆ ಮುಹೂರ್ತ ನಡೆದ ಸ್ಥಳದಲ್ಲಿ ಒಂದು ತಿಂಗಳಲ್ಲಿ ಕಟ್ಟಿಗೆ ರಥ ನಿರ್ಮಾಣವಾಗಲಿದ್ದು, ಈ ಕಟ್ಟಿಗೆಯನ್ನು ಪರ್ಯಾಯದ ಅವಧಿಯಲ್ಲಿ ಅಡುಗೆ ಮಾಡಲು ಬಳಸಲಾಗುತ್ತಿದೆ.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications