ಉಡುಪಿ ಮಠದಲ್ಲಿ ನಡೆಯಿತು ಕಟ್ಟಿಗೆ ಮುಹೂರ್ತ
ಉಡುಪಿ, ಆಗಸ್ಟ್. 28 : ಮುಂಬರುವ ಜನವರಿಯಲ್ಲಿ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದ ವಿಧಿವಿಧಾನಗಳು ಆರಂಭಗೊಂಡಿವೆ. ಎರಡನೇ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಲಿರುವ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ ಮಠದ ಆವರಣದಲ್ಲಿ ನಡೆಯಿತು.
ಪಲಿಮಾರು ಮಠದ ದೇವರು, ಶ್ರೀಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ ಹಾಗೂ ಚಂದ್ರಮೌಳೀಶ್ವರ ಸೇರಿದಂತೆ ಎಲ್ಲಾ ದೇವರುಗಳಿಗೆ ಪರ್ಯಾಯ ಕೈಕರ್ಯಗಳು ಸಾಂಗವಾಗಿ ನೆರವೇರಲು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಪಲಿಮಾರು ಮಠದಿಂದ ಶ್ರೀಕೃಷ್ಣಮಠದ ಮಧ್ವ ಸರೋವರದ ಬಳಿಗೆ ಕಟ್ಟಿಗೆ ರಥ ನಿರ್ಮಾಣದ ಕಟ್ಟಿಗೆಯನ್ನು ಭವ್ಯ ಮೆರವಣಿಗೆಯಲ್ಲಿ ಹೊತ್ತು ತರಲಾಯಿತು.
Recommended Video


ವೇದವ್ಯಾಸ ಭಟ್ ಅವರ ಪೌರೋಹಿತ್ಯದಲ್ಲಿ ಕಟ್ಟಿಗೆ ರಥದ ಕಂಬಕ್ಕೆ ಪೂಜೆ ನೆರವೇರಿಸಿ ಮೂಹೂರ್ತ ನಡೆಸಲಾಯಿತು. ಈ ಸಂದರ್ಭದಲ್ಲಿ ಪಲಿಮಾರು ಮಠದ ದಿವಾನ ಶಿಬರೂರು ವೇದವ್ಯಾಸ ತಂತ್ರಿಗಳು, ಪರ್ಯಾಯ ಪೇಜಾವರ ಮಠದ ದಿವಾನ ರಘುರಾಮ ಆಚಾರ್ಯ,ಧಾರ್ಮಿಕ ಮುಖಂಡರುಗಳ ಸಗ್ರಿ ರಾಘವೇಂದ್ರ ಉಪಾಧ್ಯಾಯ, ಹರಿಕೃಷ್ಣ ಪುನರೂರು, ಲಕ್ಷ್ಮೀನಾರಾಯಣ ಭಟ್, ಪ್ರದೀಪ್ ಕುಮಾರ್ ಕಲ್ಕೂರ ಸಹಿತ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಪರ್ಯಾಯದ ಪೂರ್ವ ಸಿದ್ಧತೆಗಳಲ್ಲಿ ಕಟ್ಟಿಗೆ ಮಹೂರ್ತ ಮೂರನೆಯದ್ದಾಗಿದೆ. ಈಗಾಗಲೇ ಬಾಳೆ ಹಾಗೂ ಅಕ್ಕಿ ಮೂಹೂರ್ತಗಳು ನಡೆದಿದ್ದು, ಮುಂದೆ ಭತ್ತ ಮುಹೂರ್ತ ನಡೆಯಲಿದೆ. ಕಟ್ಟಿಗೆ ಮುಹೂರ್ತ ನಡೆದ ಸ್ಥಳದಲ್ಲಿ ಒಂದು ತಿಂಗಳಲ್ಲಿ ಕಟ್ಟಿಗೆ ರಥ ನಿರ್ಮಾಣವಾಗಲಿದ್ದು, ಈ ಕಟ್ಟಿಗೆಯನ್ನು ಪರ್ಯಾಯದ ಅವಧಿಯಲ್ಲಿ ಅಡುಗೆ ಮಾಡಲು ಬಳಸಲಾಗುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications